ಕೆ.ಎಸ್ ಈಶ್ವರಪ್ಪ 
ರಾಜಕೀಯ

ಹೆಲಿಕಾಪ್ಟರ್ ದುರಂತದಲ್ಲಿ ಬಿಪಿನ್ ರಾವತ್ ಸಾವಿನ ತನಿಖೆಯಾಗಬೇಕು: ಸದನದಲ್ಲಿ ಸಚಿವರ ಒತ್ತಾಯ

ಸಿಡಿಎಸ್ ಬಿಪಿನ್ ರಾವತ್ ಹೆಲಿಕಾಪ್ಟರ್ ಅಪಘಾತದ ಬಗ್ಗೆ ತನಿಖೆ ಆಗಬೇಕು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ ಒತ್ತಾಯಿಸಿದ್ದಾರೆ.

ಬೆಳಗಾವಿ: ಸಿಡಿಎಸ್ ಬಿಪಿನ್ ರಾವತ್ ಹೆಲಿಕಾಪ್ಟರ್ ಅಪಘಾತದ ಬಗ್ಗೆ ತನಿಖೆ ಆಗಬೇಕು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ ಒತ್ತಾಯಿಸಿದ್ದಾರೆ.

ವಿಧಾನಸಭೆಯಲ್ಲಿ ಅಗಲಿದ ಗಣ್ಯರಿಗೆ ಸಂತಾಪ ಸೂಚನೆ ನಿರ್ಣಯ ಬೆಂಬಲಿಸಿ ಮಾತನಾಡಿದ ಅವರು, ಅಪಘಾತದ ಬಗ್ಗೆ ತನಿಖೆ ಆಗಬೇಕು ಇಲ್ಲಂದ್ರೆ ಪ್ರಪಂಚದಲ್ಲಿ ಅಸಮಾಧಾನ ಹಾಗೆ ಉಳಿಯುತ್ತದೆ. ಕೆಲವರು ಸಿಡಿಎಸ್ ನಿಧನದ ಬಗ್ಗೆ ವಿಕೃತ ಹೇಳಿಕೆ ಟ್ವೀಟ್ ಮಾಡಿದ್ದಾರೆ. ಇದನ್ನು ಸಿಎಂ ಬಸವರಾಜ ಬೊಮ್ಮಾಯಿ ಖಂಡನೆ ಮಾಡಿದ್ದಾರೆ ಎಂದರು.

ಸಿಡಿಎಸ್ ಬಿಪಿನ್ ರಾವತ್ ಹೆಲಿಕಾಪ್ಟರ್ ಅಪಘಾತದ ಬಗ್ಗೆ ತನಿಖೆ ಆಗಬೇಕು. ಈ ಬಗ್ಗೆ ಸಂಶಯ ಇದೆ. ರಷ್ಯನ್ ನಿರ್ಮಿಸಿದ ಹೆಲಿಕಾಪ್ಟರ್ ಅದು. ಅಪಘಾತದ ಕಾರಣ ಏನು ಎಂಬುವುದು ತಿಳಿಯಬೇಕು ಎಂದು ಸದನದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಒತ್ತಾಯಿಸಿದರು.

ಅಡ್ವಾನ್ಸ್ ಇಂಜಿನ್ ಹೆಲಿಕಾಪ್ಟರ್ ಅಪಘಾತದಿಂದ ಸತ್ತಿದ್ದಾರೆ ಎಂಬುವುದೇ ಆಶ್ಚರ್ಯ ಎಂದ ಅವರು, ನಾನು ಯಾರ ಕೈವಾಡ ಇದೆ ಎಂಬ ಶಂಕೆ ಪಡಲ್ಲ ಆದರೆ ಹೇಗೆ ಸತ್ತರು, ಅಪಘಾತ ಹೇಗಾಯಿತು ಎಂಬುವುದು ನಿಗೂಢವಾಗಿದೆ. ಈ ಬಗ್ಗೆ ಜನರಿಗೆ ಗೊತ್ತಾಗಬೇಕು ಎಂದು ಸಿದ್ದರಾಮಯ್ಯ ಆಗ್ರಹಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಪ್ರತಿಯೊಬ್ಬರಿಗೂ ಕಾರು, ತಿಂಗಳಿಗೆ ₹1 ಲಕ್ಷ ಭತ್ಯೆ': ರಾಜ್ಯದ 234 ಶಾಸಕರಿಗೆ ಭರ್ಜರಿ ಕೊಡುಗೆ ಘೋಷಿಸಿದ ತಮಿಳುನಾಡು CM ವಿಜಯ್!

ಕೋಲ್ಕತ್ತಾದ ಹೊಟೇಲ್ ನಲ್ಲಿ ಭೀಕರ ಅಗ್ನಿ ಅವಘಡ: 9 ಮಂದಿ ಸಾವು, 6 ಜನರಿಗೆ ಗಾಯ-Video

Pak ಬಣ್ಣ ಬಯಲು: ಕಾಶ್ಮೀರ ರಕ್ತದೋಕುಳಿಗೆ 10,000 ಉಗ್ರರ ರವಾನಿಸಿದ್ದ: Hafiz Saeed ಪಾಪಕೃತ್ಯ ಬಹಿರಂಗಪಡಿಸಿದ ಮೌಲ್ವಿ, Video ವೈರಲ್

ಸಾಮಾಜಿಕ ಭದ್ರತಾ ಪಿಂಚಣಿ ಯೋಜನೆ: ನಕಲಿ ಪಿಂಚಣಿದಾರರಿಗೆ ಸರ್ಕಾರ ಶಾಕ್; 18 ಲಕ್ಷ ಖಾತೆಗಳು ತಾತ್ಕಾಲಿಕ ಸ್ಥಗಿತ, ವಂಚನೆಯಲ್ಲಿ ಬೆಂಗಳೂರೇ ನಂ.1..!

ತಮಿಳುನಾಡು ಜನತೆಗೆ CM ವಿಜಯ್ ಬಂಪರ್‌ ಗಿಫ್ಟ್;‌ ಸರ್ಕಾರಿ ನೌಕರರಿಗೆ 3ನೇ ಮಗುವಿಗೂ 1 ವರ್ಷ ಮಾತೃತ್ವ ರಜೆ; ಆರೋಗ್ಯ ವಿಮೆ 25 ಲಕ್ಷ ರೂ.ಗೆ ಹೆಚ್ಚಳ!