ಸಂಗ್ರಹ ಚಿತ್ರ 
ರಾಜಕೀಯ

ಪರಿಷತ್ ಚುನಾವಣೆ: ದಕ್ಷಿಣ ಕನ್ನಡದಲ್ಲಿ ಗೆದ್ದ ಬಿಜೆಪಿ, ಕಾಂಗ್ರೆಸ್ ಅಭ್ಯರ್ಥಿ!

ಪರಿಷತ್ ಚುನಾವಣೆಯಲ್ಲಿ ದಕ್ಷಿಣ ಕನ್ನಡದ ದ್ವಿಸದಸ್ಯ ಕ್ಷೇತ್ರದಲ್ಲಿ ಬಿಜೆಪಿಯಿಂದ ಕೋಟ ಶ್ರೀನಿವಾಸ ಪೂಜಾರಿ ಮತ್ತು ಕಾಂಗ್ರೆಸ್‌ನ ಮಂಜುನಾಥ ಗೆಲುವು ಸಾಧಿಸಿದ್ದಾರೆ.

ಮಂಗಳೂರು: ಪರಿಷತ್ ಚುನಾವಣೆಯಲ್ಲಿ ದಕ್ಷಿಣ ಕನ್ನಡದ ದ್ವಿಸದಸ್ಯ ಕ್ಷೇತ್ರದಲ್ಲಿ ಬಿಜೆಪಿಯಿಂದ ಕೋಟ ಶ್ರೀನಿವಾಸ ಪೂಜಾರಿ ಮತ್ತು ಕಾಂಗ್ರೆಸ್‌ನ ಮಂಜುನಾಥ ಗೆಲುವು ಸಾಧಿಸಿದ್ದಾರೆ.

ಬಿಜೆಪಿಯ ಕೋಟ ಶ್ರೀನಿವಾಸ ಪೂಜಾರಿ 3672 ಮತಗಳನ್ನು ಪಡೆದರೆ, ಕಾಂಗ್ರೆಸ್‌ನ ಮಂಜುನಾಥ ಭಂಡಾರಿ 2079 ಮತಗಳನ್ನು ಪಡೆದರು. 5955 ಮತಗಳ ಪೈಕಿ 56 ಮತಗಳು ತಿರಸ್ಕೃತವಾಗಿವೆ.

ಏತನ್ಮಧ್ಯೆ, ಕೋಟಾ ಶ್ರೀನಿವಾಸ ಪೂಜಾರಿ ನಾಲ್ಕನೇ ಬಾರಿಗೆ ಎಂಎಲ್ಸಿ ಚುನಾವಣೆಯಲ್ಲಿ ಗೆದ್ದಿದ್ದಾರೆ, ಮಂಜುನಾಥ್ ಭಂಡಾರಿ ಮೊದಲ ಬಾರಿಗೆ ವಿಧಾನ ಪರಿಷತ್ತಿಗೆ ಪ್ರವೇಶಿಸುತ್ತಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಕೋಟ ಶ್ರೀನಿವಾಸ ಪೂಜಾರಿ, ಹಣಬಲ ಇಲ್ಲದೇ ಬಿಜೆಪಿ ಗೆದ್ದಿದ್ದು, ಗೆಲುವಿನ ಶ್ರಮವನ್ನು ಪಕ್ಷದ ಕಾರ್ಯಕರ್ತರಿಗೆ ಸಮರ್ಪಿಸಬೇಕು ಎಂದರು. ಉಡುಪಿ ಮತ್ತು ದಕ್ಷಿಣ ಕನ್ನಡದ ಪಕ್ಷದ ಕಾರ್ಯಕರ್ತರು ಶ್ರಮಿಸಿದ್ದರಿಂದ ಚೊಚ್ಚಲ ಚುನಾವಣೆಯಲ್ಲಿ ಗೆಲ್ಲಲು ಸಾಧ್ಯ ಎಂದು ಮಂಜುನಾಥ ಭಂಡಾರಿ ಹೇಳಿದರು. ಸ್ಪರ್ಧಿಸಿ ಗೆಲ್ಲಲು ಅವಕಾಶ ನೀಡಿದ ಪಕ್ಷದ ಮುಖಂಡರಿಗೆ ಕೃತಜ್ಞತೆ ಸಲ್ಲಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

SCROLL FOR NEXT