ಸಿದ್ದರಾಮಯ್ಯ 
ರಾಜಕೀಯ

12 ಕ್ಷೇತ್ರದಲ್ಲಿ ಗೆಲ್ಲುವ ನಿರೀಕ್ಷೆಯಿತ್ತು; ರಾಜ್ಯದಲ್ಲಿ ಕಾಂಗ್ರೆಸ್ ಪರವಾದ ಅಲೆಯಿದೆ: ವಿಪಕ್ಷ ನಾಯಕ ಸಿದ್ದರಾಮಯ್ಯ

ರಾಜ್ಯದ ವಿಧಾನಪರಿಷತ್‌ ಚುನಾವಣೆಯಲ್ಲಿ 12 ಕ್ಷೇತ್ರಗಳಲ್ಲಿ ಗೆಲ್ಲುವ ವಿಶ್ವಾಸವಿತ್ತು. ಆದರೂ 11 ಸ್ಥಾನಗಳನ್ನು ಗೆದ್ದು ಕಾಂಗ್ರೆಸ್‌ ಗಣನೀಯ ಸಾಧನೆ ಮಾಡಿದೆ ಎಂದು ಹಿರಿಯ ಕಾಂಗ್ರೆಸ್‌ ಮುಖಂಡ ಸಿದ್ದರಾಮಯ್ಯ ತಿಳಿಸಿದರು.

ಬೆಳಗಾವಿ (ಸುವರ್ಣ ವಿಧಾನಸೌಧ): ರಾಜ್ಯದ ವಿಧಾನಪರಿಷತ್‌ ಚುನಾವಣೆಯಲ್ಲಿ 12 ಕ್ಷೇತ್ರಗಳಲ್ಲಿ ಗೆಲ್ಲುವ ವಿಶ್ವಾಸವಿತ್ತು. ಆದರೂ 11 ಸ್ಥಾನಗಳನ್ನು ಗೆದ್ದು ಕಾಂಗ್ರೆಸ್‌ ಗಣನೀಯ ಸಾಧನೆ ಮಾಡಿದೆ ಎಂದು ಹಿರಿಯ ಕಾಂಗ್ರೆಸ್‌ ಮುಖಂಡ ಸಿದ್ದರಾಮಯ್ಯ ತಿಳಿಸಿದರು.

ಅವರಿಂದು ಬೆಳಗಾವಿ ಸುವರ್ಣಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ಚಿಕ್ಕಮಗಳೂರಲ್ಲಿ ಗಾಯತ್ರಿ ಅವರಿಗೆ  4 ಮತಗಳ ಅಂತರದಿಂದ ಸೋಲಾಗಿದೆ‌. ಆ ಕ್ಷೇತ್ರದಲ್ಲಿ ಕ್ಷೇತ್ರದಲ್ಲಿ ಗೆಲ್ತೇವೆ ಎಂದು ಭಾವಿಸಿದ್ದೇವು. ಆ ಒಂದು ಕ್ಷೇತ್ರದಲ್ಲಿ ಮಾತ್ರ ನಿರೀಕ್ಷೆ ಹುಸಿಯಾಗಿದೆ. ಉಳಿದ ಕಡೆ ಬಹಳ ಸ್ಪರ್ಧೆ ನೀಡಿದ್ದೇವೆ ಎಂದರು.

ನಾನು ಗಾಯತ್ರಿ ಅವರಿಗೆ ಕರೆ ಮಾತನಾಡಿದ್ದೇನೆ. ವಕೀಲರನ್ನು ಸಂಪರ್ಕ ಮಾಡಿ ಎಂದು ಹೇಳಿದ್ದೇವೆ. ನಾಮ ನಿರ್ದೇಶನ ಅಭ್ಯರ್ಥಿಗಳ‌ ಮತದಾನ ಮಾಡುವ ವಿಚಾರಕ್ಕಾಗಿ ಅವರ ಜೊತೆ ಮಾತುಕತೆ ನಡೆಸಿದ್ದೇನೆ ಎಂದು ವಿವರಿಸಿದರು.

ಇದು ಜನರ ತೀರ್ಪು ಅಲ್ಲ. ಸ್ಥಳೀಯ ನಾಯಕ ಅಭಿಪ್ರಾಯ. ಆದರೂ ರಾಜ್ಯದಲ್ಲಿ ಕಾಂಗ್ರೆಸ್ ಪರವಾದ ಅಲೆಯಿದೆ ಎಂದು ಅಭಿಪ್ರಾಯಪಟ್ಟ ಅವರು ಬೆಳಗಾವಿಯಲ್ಲಿ ಬಿಜೆಪಿ ಸೋಲು ಖಂಡಿರುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದರು. ಬಿಜೆಪಿಗೆ ಧಮ್ ಇಲ್ಲ ಪಕ್ಷೇತರರ ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಲು ಅವಕಾಶ ಮಾಡಿಕೊಟ್ಟಿದ್ದರು. ನಮ್ಮ ಅಭ್ಯರ್ಥಿ ಮೊದಲ ಪ್ರಾಶಸ್ತ್ಯದಲ್ಲಿ ಜಯಗಳಿಸಿದ್ದಾರೆ ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT