ಹೆಚ್.ಡಿ. ಕುಮಾರಸ್ವಾಮಿ 
ರಾಜಕೀಯ

ಅಖಂಡ ಕರ್ನಾಟಕದ ಆಸ್ಮಿತೆ ಸಾರುವ ನಮ್ಮ ಧ್ವಜದ ವಿಚಾರದಲ್ಲಿ ಆಗಿರುವ ಅಪಚಾರ ಕ್ಷಮಾರ್ಹವಲ್ಲ: ಹೆಚ್ ಡಿ ಕುಮಾರಸ್ವಾಮಿ

ಮಹಾರಾಷ್ಟ್ರದ ‌ಕೊಲ್ಹಾಪುರ ದಲ್ಲಿ ಶಿವಸೇನಾ ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ, ಕನ್ನಡ ಬಾವುಟವನ್ನು ಮಂಗಳವಾರ ಸುಟ್ಟು ಹಾಕಿದ್ದು, ಇದಕ್ಕೆ ಜೆಡಿಎಸ್ ನಾಯಕ ಹೆಚ್.ಡಿ.ಕುಮಾರಸ್ವಾಮಿಯವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು: ಮಹಾರಾಷ್ಟ್ರದ ‌ಕೊಲ್ಹಾಪುರ ದಲ್ಲಿ ಶಿವಸೇನಾ ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ, ಕನ್ನಡ ಬಾವುಟವನ್ನು ಮಂಗಳವಾರ ಸುಟ್ಟು ಹಾಕಿದ್ದು, ಇದಕ್ಕೆ ಜೆಡಿಎಸ್ ನಾಯಕ ಹೆಚ್.ಡಿ.ಕುಮಾರಸ್ವಾಮಿಯವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಾಮಾಜಿಕ ಜಾಲತಾಣ ಟ್ಟಿಟರ್ ನಲ್ಲಿ ಟ್ವೀಟ್ ಎಂಇಎಸ್‌ ಪುಂಡರು ಕನ್ನಡ ಧ್ವಜಕ್ಕೆ ಅಪಮಾನ ಮಾಡಿರುವ ಘಟನೆ ಅತ್ಯಂತ ಹೇಯ. ಧ್ವಜವನ್ನು ಸುಟ್ಟು ವಿಕೃತಿ ಮೆರೆದಿರುವುದು ನೀಚ ಕೃತ್ಯ. ಅಖಂಡ ಕರ್ನಾಟಕದ ಆಸ್ಮಿತೆ ಸಾರುವ ನಮ್ಮ ಧ್ವಜದ ವಿಚಾರದಲ್ಲಿ ಆಗಿರುವ ಅಪಚಾರ ಕ್ಷಮಾರ್ಹವಲ್ಲ ಎಂದು ಹೇಳಿದ್ದಾರೆ.

ಬಹುಭಾಷಾ ಪ್ರೇಮ, ಸಾಮರಸ್ಯ ಕನ್ನಡಿಗರ ದೌರ್ಬಲ್ಯವಲ್ಲ, ಔದಾರ್ಯ. ಇದನ್ನು ಕಿಡಿಗೇಡಿಗಳು ಅರ್ಥ ಮಾಡಿಕೊಳ್ಳಬೇಕಿತ್ತು. ಈ ಪರಮ ಕಿರಾತಕ ಕೃತ್ಯದ ವಿರುದ್ಧ ರಾಜ್ಯ ಸರಕಾರ ಅತ್ಯಂತ ಕಠಿಣವಾಗಿ ವರ್ತಿಸಬೇಕು. ನಮ್ಮ ಧ್ವಜವನ್ನು ಅಪಮಾನಿಸಿದ ಕನ್ನಡ ದ್ರೋಹಿಗಳಿಗೆ ತಕ್ಕಶಾಸ್ತಿ ಮಾಡಬೇಕು.ಕನ್ನಡ ದ್ರೋಹಿಗಳನ್ನು ಹಾಗೆಯೇ ಬಿಟ್ಟರೆ ಕರ್ನಾಟಕ ನಿಮ್ಮನ್ನು ಕ್ಷಮಿಸುವುದಿಲ್ಲ. ತಕ್ಷಣವೇ ಮುಖ್ಯಮಂತ್ರಿಗಳು ಹಾಗೂ ಗೃಹ ಸಚಿವರು ಕ್ರಮ ವಹಿಸಬೇಕು ಹಾಗೂ ಕನ್ನಡಕ್ಕಾಗಿ ಹೋರಾಡಿದವರನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT