ಸುಧಾಕರ್ ಮತ್ತು ನಾರಾಯಣಗೌಡ 
ರಾಜಕೀಯ

ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಅವರೇನು ನಮ್ಮ ನಾಯಕರಾ? ಆರೋಗ್ಯ ಸಚಿವ- ನಾರಾಯಣ ಗೌಡ ಜಟಾಪಟಿ!

ವಿಧಾನ ಪರಿಷತ್‌ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಕೇವಲ 50 ಮತ ಗಳಿಸಿರುವ ವಿಚಾರ ಸಚಿವರಾದ ಡಾ. ಕೆ.ಸುಧಾಕರ್‌ ಮತ್ತು ಕೆ.ಸಿ. ನಾರಾಯಣ ಗೌಡ ನಡುವೆ ಜಟಾಪಟಿಗೆ ಕಾರಣವಾಯಿತು.

ಬೆಳಗಾವಿ: ವಿಧಾನ ಪರಿಷತ್‌ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಕೇವಲ 50 ಮತ ಗಳಿಸಿರುವ ವಿಚಾರ ಸಚಿವರಾದ ಡಾ. ಕೆ.ಸುಧಾಕರ್‌ ಮತ್ತು ಕೆ.ಸಿ. ನಾರಾಯಣ ಗೌಡ ನಡುವೆ ಜಟಾಪಟಿಗೆ ಕಾರಣವಾಯಿತು.

ಸುವರ್ಣ ವಿಧಾನಸೌಧದ ಮೊಗಸಾಲೆಯಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಆರೋಗ್ಯ ಸಚಿವ ಸುಧಾಕರ್, ‘ಮಂಡ್ಯದಲ್ಲಿ ಬಿಜೆಪಿ ಅಭ್ಯರ್ಥಿಗೆ ಕಡಿಮೆ ಮತ ಬಂದಿದೆ. ಇದು ನಿಜಕ್ಕೂ ದುರದೃಷ್ಟಕರ. ಈ ಕುರಿತು ಪಕ್ಷದ ಚೌಕಟ್ಟಿನಲ್ಲಿ ಚರ್ಚೆ ನಡೆಸುತ್ತೇವೆ’ ಎಂದರು.

ಆರೋಗ್ಯ ಸಚಿವರ ಹೇಳಿಕೆಗೆ ತಕ್ಷಣವೇ ಪ್ರತಿಕ್ರಿಯೆ ನೀಡಿದ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ನಾರಾಯಣ ಗೌಡ, ‘ಸುಧಾಕರ್‌ ಏನು ನಮ್ಮ ನಾಯಕರಾ? ಅವರು ಅವರ ಕ್ಷೇತ್ರದ ಬಗ್ಗೆ ಮಾತನಾಡಲಿ. ನಾವು ನಮ್ಮ ಕ್ಷೇತ್ರದ ಬಗ್ಗೆ ಹೇಳುತ್ತೇವೆ. ಮಂಡ್ಯದ ಬಗ್ಗೆ ಅವರಿಗೆ ಏನು ಗೊತ್ತು? ನನಗೆ ಗೊತ್ತಿದೆ, ನಾನು ಮಾತನಾಡುತ್ತೇನೆ’ ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕದ ಸುಂಕ: ಜವಳಿ ವಲಯದ ಒತ್ತಡ ಕಡಿಮೆ ಮಾಡಲು 40 ಪ್ರಮುಖ ಆಮದು ದೇಶ ಗುರುತು

ಭೀಕರ ಮಳೆಗೆ ಜಮ್ಮು-ಕಾಶ್ಮೀರ ತತ್ತರ: ಸಾವಿನ ಸಂಖ್ಯೆ 41ಕ್ಕೆ ಏರಿಕೆ; ಕೇಂದ್ರದಿಂದ ನೆರವಿನ ಭರವಸೆ; ಮುಂದುವರೆದ ರಕ್ಷಣಾ ಕಾರ್ಯಾಚರಣೆ

ಭಾರತದ ಮೇಲೆ ಅಮೆರಿಕಾ ಸುಂಕಾಸ್ತ್ರ: ದೇಶ ರಕ್ಷಿಸುವಲ್ಲಿ ಪ್ರಧಾನಿ ಮೋದಿ ವಿಫಲ; AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

ಜಮ್ಮು-ಕಾಶ್ಮೀರದ ಬಂಡಿಪೋರಾದಲ್ಲಿ ಗುಂಡಿನ ಚಕಮಕಿ: ಇಬ್ಬರು ಉಗ್ರರ ಹತ್ಯೆ

RSS Song Controversy: ಡಿಕೆಶಿ ಆರ್‌ಎಸ್‌ಎಸ್‌ ಗೀತೆ ಹಾಡಿದ್ದು ತಪ್ಪು, ಕ್ಷಮೆ ಕೇಳಿದ್ದರಿಂದ ಎಲ್ಲವೂ ಮುಗಿದಿದೆ; ಮಲ್ಲಿಕಾರ್ಜುನ ಖರ್ಗೆ

SCROLL FOR NEXT