ಸಂಗ್ರಹ ಚಿತ್ರ 
ರಾಜಕೀಯ

ಆರ್'ಎಸ್ಎಸ್ ಕೈಗೊಂಬೆಯಾದ ಬಳಿಕ ಗೂಳಿಹಟ್ಟಿ ಚಂದ್ರಶೇಖರ್ ನಿಂದ ಮತಾಂತರ ವಿಚಾರ ಪ್ರಸ್ತಾಪ; ಕಾಂಗ್ರೆಸ್

ಹಲವು ವರ್ಷಗಳ ಹಿಂದೆಯೇ ತಮ್ಮ ತಾಯಿ ಮತಾಂತರಗೊಂಡಿದ್ದರೂ ಈಗೇಕೆ ಗೂಳಿಹಟ್ಟಿ ಚಂದ್ರಶೇಖರ್ ಅವರು ಮತಾಂತರ ವಿಚಾರವನ್ನು ಪ್ರಸ್ತಾಪಿಸಿದರು ಎಂದು ಕಾಂಗ್ರೆಸ್ ಪ್ರಶ್ನೆ ಮಾಡಿದೆ.

ಬೆಂಗಳೂರು: ಹಲವು ವರ್ಷಗಳ ಹಿಂದೆಯೇ ತಮ್ಮ ತಾಯಿ ಮತಾಂತರಗೊಂಡಿದ್ದರೂ ಈಗೇಕೆ ಗೂಳಿಹಟ್ಟಿ ಚಂದ್ರಶೇಖರ್ ಅವರು ಮತಾಂತರ ವಿಚಾರವನ್ನು ಪ್ರಸ್ತಾಪಿಸಿದರು ಎಂದು ಕಾಂಗ್ರೆಸ್ ಪ್ರಶ್ನೆ ಮಾಡಿದೆ.

ಸುದ್ದಿಗಾರರೊಂದಿಗೆ ಮಾತನಾಡಿರುವ ಕೆಪಿಸಿಸಿ ಕಾರ್ಯಕಾರಿ ಅಧ್ಯಕ್ಷ ಧ್ರುವನಾರಾಯಣ್ ಅವರು, ಗೂಳಿಹಟ್ಟಿ ಚಂದ್ರಶೇಖರ್ ಅವರ ತಾಯಿ ಹಲವು ವರ್ಷಗಳ ಹಿಂದೆಯೇ ಮತಾಂತರಗೊಂಡಿದ್ದರು. ಆದರೆ, ಈಗ ಆ ವಿಚಾರವನ್ನು ಪ್ರಸ್ತಾಪಿಸಿದ್ದಾರೆ. ಇದಕ್ಕೆ ಕಾರಣವೇನು ಎಂದು ಪ್ರಶ್ನಿಸಿದ್ದಾರೆ. ಅಲ್ಲದೆ, ಆರ್'ಎಸ್ಎಸ್ ಕೈಗೊಂಬೆಯಾದ ಬಳಿಕ ಗೂಳಿಹಟ್ಟಿ ಅವರು ಈ ವಿಚಾರವನ್ನು ಪ್ರಸ್ತಾಪಿಸಿದ್ದಾರೆಂದು ಆರೋಪಿಸಿದ್ದಾರೆ.

ನಿನ್ನೆಯಷ್ಟೇ ಹೇಳಿಕೆ ನೀಡಿದ್ದ ಸಿದ್ದರಾಮಯ್ಯ ಅವರು, ಮತಾಂತರ ನಿಷೇಧ ಕಾಯ್ದೆ ಜಾರಿತೆ ತರಲು ಹೊರಟಿರುವುದು ಗಂಭೀರವಾದ ವಿಚಾರ. ದೇಶದಲ್ಲಿ ಕೋಮು ಸೌಹಾರ್ದ ಹಾಳು ಮಾಡಲು ಹಾಗೂ ಒಂದು ಧರ್ಮವನ್ನು ಗುರಿಯಾಗಿಟ್ಟುಕೊಂಡು ಈ ಕಾಯ್ದೆ ತರಲಾಗುತ್ತಿದೆ. ಇದರಲ್ಲಿ ರಾಜ್ಯದ ಹಿತ ಇಲ್ಲ. ವಿಧಾನಸಭೆಯಲ್ಲಿ ಮತಾಂತರ ನಿಷೇಧ ಮಸೂದೆ ವಿರೋಧಿಸುತ್ತೇವೆ. ಅನುಮೋದನೆಗೆ ಅವಕಾಶ ನೀಡುವುದಿಲ್ಲ. ಹಾಗೊಂದು ವೇಳೆ ಮತಾಂತರ ಕಾಯ್ದೆ ಜಾರಿಗೆ ತಂದರೆ 2023ರಲ್ಲಿ ನಾವೇ ಅಧಿಕಾರಕ್ಕೆ ಬಂದು ಕಾಯ್ದೆ ಹಿಂಪಡೆಯುತ್ತೇವೆಂದು ತಿಳಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಮಂಗಳೂರು: ಆಟೋಗೆ KSRTC ಬಸ್ ಡಿಕ್ಕಿ; ಭೀಕರ ಅಪಘಾತದಲ್ಲಿ ಮಗು ಸೇರಿ ಆರು ಸಾವು - Video

$34.2 Trillion GDP: 2038ರ ವೇಳೆಗೆ ಅಮೆರಿಕ ಹಿಂದಿಕ್ಕಿ, ಭಾರತ 2ನೇ ಅತಿದೊಡ್ಡ ಆರ್ಥಿಕತೆಯಾಗಲಿದೆ: EY ವರದಿ

Ganesh Chaturthi ಎಫೆಕ್ಟ್; ಮತ್ತೆ ಗಗನದತ್ತ ಮುಖ ಮಾಡಿದ ಚಿನ್ನದ ಬೆಲೆ, ಇಂದಿನ ದರ ಪಟ್ಟಿ ಇಂತಿದೆ!

ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆ, ಹಠಾತ್ ಪ್ರವಾಹ: ಭೂಕುಸಿತದಿಂದ ನಾಲ್ವರು ಸಾವು

ನಗರ ನಕ್ಸಲರ ಟಾರ್ಗೆಟ್‌ ಚಾಮುಂಡಿ ಬೆಟ್ಟ- ಬಿಎಲ್ ಸಂತೋಷ್: ಸತ್ಯ ಹೇಳಿದರೆ ಕೆಲವರು ಸಹಿಸಲ್ಲ, ಮಾತನಾಡದಿರುವುದೇ ಲೇಸು-dks

SCROLL FOR NEXT