ರಮೇಶ್ ಕುಮಾರ್ 
ರಾಜಕೀಯ

'ಜೀವಂತ ಇರುವವರನ್ನು ಮಾತನಾಡಿಸಿ, ನಾನು ಜೀವಂತ ಇಲ್ಲ, 4 ದಿನಗಳ ಹಿಂದೆಯೇ ಸತ್ತು ಹೋಗಿದ್ದೇನೆ'

ತಾವಾಡಿದ ಮಾತುಗಳು ರಾಷ್ಟ್ರಾದ್ಯಂತ ಪ್ರತಿಧ್ವನಿಸಿ ಚರ್ಚೆಗೆ ಕಾರಣವಾದ ಹಿನ್ನೆಲೆಯಲ್ಲಿ ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಅವರು ಮಾಧ್ಯಮಗಳ ಮೇಲೆ ಸಿಟ್ಟಾಗಿದ್ದಾರೆ. ಅವರ ಕೋಪ ಇನ್ನೂ ತಣ್ಣಿದಿಲ್ಲ.

ಬೆಳಗಾವಿ: ತಾವಾಡಿದ ಮಾತುಗಳು ರಾಷ್ಟ್ರಾದ್ಯಂತ ಪ್ರತಿಧ್ವನಿಸಿ ಚರ್ಚೆಗೆ ಕಾರಣವಾದ ಹಿನ್ನೆಲೆಯಲ್ಲಿ ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಅವರು ಮಾಧ್ಯಮಗಳ ಮೇಲೆ ಸಿಟ್ಟಾಗಿದ್ದಾರೆ. ಅವರ ಕೋಪ ಇನ್ನೂ ತಣ್ಣಿದಿಲ್ಲ.

ಸುವರ್ಣಸೌಧಕ್ಕೆ ಬಂದ ಅವರನ್ನು ಎಂಇಎಸ್‌ ಪುಂಡಾಟಿಕೆ ಬಗ್ಗೆ ಪ್ರತಿಕ್ರಿಯೆ ನೀಡಲು ಕೇಳಿದಾಗ ಪ್ರತಿಕ್ರಿಯಿಸಲು ನಿರಾಕರಿಸಿದರು, ಮಾಧ್ಯಮಗಳ ಮುಂದೆ ಬಂದ ಬಂದ ಅವರು ಕೈ ಮುಗಿದು ಒಳ ಹೋದರು. ಈ ಸಂದರ್ಭದಲ್ಲಿ ಅವರು “ ಜೀವಂತ ಇರುವವರನ್ನು ಮಾತನಾಡಿಸಿ, ನಾನು ಜೀವಂತ ಇಲ್ಲ. ನಾಲ್ಕುದಿನಗಳ ಹಿಂದೆಯೇ ಸತ್ತು ಹೋಗಿದ್ದೇನೆ” ಎಂದರು.

ಯಾವುದೇ ಪ್ರಚಲಿತ ವಿಷಯಗಳ ಬಗ್ಗೆ ಉತ್ಸಾಹದಿಂದ ಪ್ರತಿಕ್ರಿಯೆ ನೀಡುತ್ತಿದ್ದ ಅವರು ಈ ರೀತಿ ಮಾತನಾಡಿದ್ದು ಆಶ್ಚರ್ಯ ಉಂಟು ಮಾಡಿತು. ಇದು ಮಾಧ್ಯಮಗಳ ಮೇಲೆ ಅವರಿಗೆ ಉಂಟಾಗಿರುವ ಸಿಟ್ಟಿನ ಸಂಕೇತವೂ ಆಗಿರಬಹುದು ಎಂದು ಹೇಳಲಾಗುತ್ತಿದೆ.

ಸದನದಲ್ಲಿ ಬೆಳೆವಿಮೆ ಚರ್ಚೆ ನಡೆಯುತ್ತಿದ್ದ ಸಂದರ್ಭದಲ್ಲಿ ಅವರಾಡಿದ ಮಾತುಗಳು ಸಂವೇದನಾಶೀಲರ ಸಿಟ್ಟಿಗೆ ಕಾರಣವಾಗಿತ್ತು. ಪಕ್ಷಬೇಧವಿಲ್ಲದೇ ಎಲ್ಲರೂ ಆ ಮಾತುಗಳನ್ನು ಖಂಡಿಸಿದ್ದರು. ಇದರಿಂದ ಕಾಂಗ್ರೆಸ್‌ ಕೂಡ ಮುಜುಗರಕ್ಕೆ ಒಳಗಾಗುವ ಸ್ಥಿತಿ ನಿರ್ಮಾಣವಾಗಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

SCROLL FOR NEXT