ಕೆಎಸ್ ಈಶ್ವರಪ್ಪ 
ರಾಜಕೀಯ

ಎಂಇಎಸ್ ಅಂದರೆ ಮಹಾರಾಷ್ಟ್ರ ಹೇಡಿಗಳ ಸಮಿತಿ; ವಿಗ್ರಹ ವಿರೂಪಗೊಳಿಸಿದವರನ್ನು ಗುಂಡಿಟ್ಟು ಸಾಯಿಸಿ: ಸಚಿವ ಈಶ್ವರಪ್ಪ

ಸ್ವಾತಂತ್ರ್ಯ ಹೋರಾಟಕ್ಕಾಗಿ ಕ್ರಾಂತಿ ಹೆಜ್ಜೆ ಇಟ್ಟ ವೀರಯೋಧರ ವಿಗ್ರಹ ವಿರೂಪಗೊಳಿಸಿರುವ ಹೇಡಿಗಳಿಗೆ ಗುಂಡಿಟ್ಟು ಕೊಲ್ಲಬೇಕೆಂದು ಸಚಿವ ಕೆ.ಎಸ್.ಈಶ್ವರಪ್ಪ ಕಿಡಿಕಾರಿದರು.

ಬೆಳಗಾವಿ(ಸುವರ್ಣ ವಿಧಾನಸೌಧ): ಸ್ವಾತಂತ್ರ್ಯ ಹೋರಾಟಕ್ಕಾಗಿ ಕ್ರಾಂತಿ ಹೆಜ್ಜೆ ಇಟ್ಟ ವೀರಯೋಧರ ವಿಗ್ರಹ ವಿರೂಪಗೊಳಿಸಿರುವ ಹೇಡಿಗಳಿಗೆ ಗುಂಡಿಟ್ಟು ಕೊಲ್ಲಬೇಕೆಂದು ಸಚಿವ ಕೆ.ಎಸ್.ಈಶ್ವರಪ್ಪ ಕಿಡಿಕಾರಿದರು.

ಇಂದು ವಿಧಾನಸಭೆಯಲ್ಲಿ ಮಾತನಾಡಿದ ಕೆ.ಎಸ್.ಈಶ್ವರಪ್ಪ, ಎಂಇಎಸ್ ಅನ್ನೋದು ಮಹಾರಾಷ್ಟ್ರ ಏಕೀಕರಣ ಸಮಿತಿ ಅಲ್ಲ.. ಮಹಾರಾಷ್ಟ್ರ ಹೇಡಿಗಳ ಸಮಿತಿ ಎಂದು ಆಕ್ರೋಶ ಹೊರ ಹಾಕಿದರು. ರಾತ್ರಿ ಹೊತ್ತು ಬಂದು ಸಂಗೊಳ್ಳಿ ರಾಯಣ್ಣ ಪ್ರತಿಮೆಯನ್ನು ವಿರೂಪಗೊಳಿಸಲಾಗಿದೆ.

ಜೀವಂತ ಗಂಡುಗಳಾದರೆ ಹಗಲು ಹೊತ್ತಿನಲ್ಲಿ ಬಂದು ಮುಟ್ಟಲಿ ಎಂದು ಸವಾಲು ಹಾಕಿದ ಈಶ್ವರಪ್ಪ, ಸಂಗೊಳ್ಳಿ ರಾಯಣ್ಣ ಜೀವಂತವಾಗಿದ್ದಾಗಲೂ ಹೇಡಿಗಳು ಬ್ರಿಟಿಷರಿಗೆ ಹಿಡಿದುಕೊಟ್ಟರು. ಸತ್ತ ಮೇಲೂ ಈ ರೀತಿಯ ಹೇಡಿಗಳು ನಮ್ಮ ರಾಜ್ಯ, ದೇಶದಲ್ಲಿ ಇದ್ದಾರೆ. ಇಂತಹ ಹೇಡಿಗಳು ನಮ್ಮ ರಾಜ್ಯದಲ್ಲಿ ಇರಲು ಬಿಡಬಾರದು. ಆ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕಠಿಣ ಕ್ರಮಕೈಗೊಳ್ಳಬೇಕು ಹಾಗೂ ಕೇಂದ್ರ ಸರ್ಕಾರಕ್ಕೆ ತಿಳಿಸಬೇಕು ಎಂದು ಆಕ್ರೋಶದಿಂದ ಹೇಳಿದರು.

ಸಂಗೊಳ್ಳಿ ರಾಯಣ್ಣ ಯಾವುದೇ ಜಾತಿಗೆ ಸೀಮಿತವಾಗಿಲ್ಲ. ರಾತ್ರಿ ಹೊತ್ತಿನಲ್ಲಿ ಕೃತ್ಯಗಳನ್ನು ಮಾಡುತ್ತಿರುವ ಹೇಡಿಗಳನ್ನು ಗಡಿಪಾರು ಮಾಡುವುದಲ್ಲ. ಗುಂಡಿಕ್ಕಿ ಕೊಲ್ಲಬೇಕು. ಈ ಹೇಡಿಗಳಿಗೆ ಉತ್ತರ ಕೊಡುವ ಸಮಯ ಬಂದಿದೆ. ಕನ್ನಡ ಧ್ವಜ ಅನ್ನೋದು ಬಟ್ಟೆ ಅಲ್ಲ,  ತಾಯಿ ಎಂದು ನಟ ಶಿವರಾಜ್ ಕುಮಾರ್ ಹೇಳಿದ್ದರು. ಮಹಾರಾಷ್ಟ್ರದ ಹೇಡಿಗಳು ಕನ್ನಡ ನಾಡನ್ನು ಅಷ್ಟು ಹಗುರವಾಗಿ ತೆಗೆದುಕೊಳ್ಳಬಾರದು. ಆ ರೀತಿಯ ಕಠಿಣ ಕ್ರಮಕೈಗೊಳ್ಳುವ ಜರುಗಿಸಬೇಕಾಗಿದೆ. ಕೃತ್ಯ ನಡೆಸಿದವರ ವಿರುದ್ಧ ಸರಿಯಾದ ತನಿಖೆಯಾಗಬೇಕು.  ಅವರನ್ನು ಬಲಿ ಹಾಕಬೇಕು ಎಂದರು.

ಎಂಇಎಸ್ ಬ್ಯಾನ್ ಮಾಡಬೇಕು ಎಂಬುದು ಎಲ್ಲರ ಅಭಿಪ್ರಾಯ. ವ್ಯವಸ್ಥಿತ ಪಿತೂರಿ ನಡೆಸಿರುವವರ ವಿರುದ್ಧ ಖಂಡನಾ ನಿರ್ಣಯ ಕೈಗೊಳ್ಳಬೇಕು. ಅವರ ವಿರುದ್ಧ ಕ್ರಿಮಿನಲ್ ಕೇಸ್ ಹಾಕಿ ಹೊರಗೆ ಬರದಂತೆ ನೋಡಿಕೊಳ್ಳಬೇಕಾಗಿದೆ. ಕೃತ್ಯ ನಡೆಸಿದವರು ಯಾರು? ಅವರ ಉದ್ದೇಶ ಏನು? ಹೇಡಿಗಳ ಹಿಂದೆ ಯಾರಿದ್ದಾರೆ ಎಂಬುದರ ಬಗ್ಗೆ ತನಿಖೆಯಾಗಬೇಕು ಎಂದು ಈಶ್ವರಪ್ಪ ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

ಬಿಗ್ ಬಾಸ್ 12 ಫಿನಾಲೆ ಹೊತ್ತಲ್ಲಿ ಕಿಚ್ಚ ಸುದೀಪ್‌ಗೆ ಸಂಕಷ್ಟ ತಂದ 'ರಣಹದ್ದು'!

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

ಉತ್ತರ ಪ್ರದೇಶ: "ಆಕ್ಷೇಪಾರ್ಹ" ಸ್ಥಿತಿಯಲ್ಲಿದ್ದ ಪ್ರೇಮಿಗಳನ್ನು ಹೊಡೆದು ಕೊಂದ ಕುಟುಂಬಸ್ಥರು!

ಮಹಾತ್ಮ ಗಾಂಧಿ ಸಂದೇಶಗಳು ಹಿಂದೆಂದಿಗಿಂತಲೂ ಈಗ ಹೆಚ್ಚು ಪ್ರಸ್ತುತ: ಸಬರಮತಿ ಆಶ್ರಮದಲ್ಲಿ ಜರ್ಮನ್ ಚಾನ್ಸೆಲರ್!

SCROLL FOR NEXT