ಸಿದ್ದರಾಮಯ್ಯ 
ರಾಜಕೀಯ

ನಾನಿಲ್ಲದೇ ಮೈಸೂರಿನಲ್ಲಿ ಸಭೆ ಮಾಡಬೇಡಿ: ಡಿಕೆ ಶಿವಕುಮಾರ್ ಗೆ ಸಿದ್ದರಾಮಯ್ಯ ಸೂಚನೆ

ಮೇಕೆದಾಟು ಯೋಜನೆ ಜಾರಿಗಾಗಿ ಒತ್ತಾಯಿಸಿ ಕಾಂಗ್ರೆಸ್‌ ಪಾದಯಾತ್ರೆ ಹಮ್ಮಿಕೊಂಡಿರುವ ಹಿನ್ನೆಲೆಯಲ್ಲಿ ಡಿ,ಕೆ. ಶಿವಕುಮಾರ್‌ ಅವರು ಮೈಸೂರಿನಲ್ಲಿ ಸಭೆ ಕರೆದಿರುವುದು ಅಲ್ಲಿನ ಶಾಸಕರ, ಮುಖಂಡರ ಅಸಮಾಧಾನಕ್ಕೆ ಕಾರಣವಾಗಿದೆ

ಬೆಳಗಾವಿ: ಮೇಕೆದಾಟು ಯೋಜನೆ ಜಾರಿಗಾಗಿ ಒತ್ತಾಯಿಸಿ ಕಾಂಗ್ರೆಸ್‌ ಪಾದಯಾತ್ರೆ ಹಮ್ಮಿಕೊಂಡಿರುವ ಹಿನ್ನೆಲೆಯಲ್ಲಿ ಡಿ,ಕೆ. ಶಿವಕುಮಾರ್‌ ಅವರು ಮೈಸೂರಿನಲ್ಲಿ ಸಭೆ ಕರೆದಿರುವುದು ಅಲ್ಲಿನ ಶಾಸಕರ, ಮುಖಂಡರ ಅಸಮಾಧಾನಕ್ಕೆ ಕಾರಣವಾಗಿದೆ. ವಿಪಕ್ಷ ನಾಯಕ ಸಿದ್ದರಾಮಯ್ಯ ಸಹ ಬೇಸರಗೊಂಡಿದ್ದಾರೆ ಎಂದು ಹೇಳಲಾಗಿದೆ.

ಡಿಸೆಂಬರ್‌ 23ರಂದು ರಾಜ್ಯ ಕಾಂಗ್ರೆಸ್‌ ಅಧ್ಯಕ್ಷ ಪೂರ್ವಭಾವಿ ಸಭೆ ಕರೆದಿದ್ದರು. ಈ ಕ್ರಮಕ್ಕೆ ಮೈಸೂರು ಭಾಗದ ಶಾಸಕರು ಮತ್ತು ಮಾಜಿ‌ ಶಾಸಕರ ಆಕ್ಷೇಪ ವ್ಯಕ್ತಪಡಿಸಿದ ಹಿನ್ನಲೆಯಲ್ಲಿ ಸಿದ್ದರಾಮಯ್ಯ ಅವರು ಖಡಕ್‌ ಸೂಚನೆ ನೀಡಿದ್ದಾರೆ ಎಂದು ಹೇಳಲಾಗಿದೆ. ತಮ್ಮ ಗಮನಕ್ಕೆ ತಾರದೇ  ತಾವು ಮೈಸೂರಿನಲ್ಲಿ ಹಾಜರಿರದ ಸಮಯದಲ್ಲಿ ಸಭೆ ದಿನಾಂಕ ನಿಗದಿ ಮಾಡಿರುವುದು ಕೂಡ ಸಿದ್ದರಾಮಯ್ಯ ಅವರ ಅಸಮಾಧಾನಕ್ಕೆ ಕಾರಣ ಎಂದು ಹೇಳಲಾಗಿದೆ.

ನಾನು ಇಲ್ಲದೇ ಮೈಸೂರಿನಲ್ಲಿ ನೀವು ಸಭೆ ಮಾಡಲು ಹೋಗಬೇಡಿ. ಅದು ಸರಿಯಲ್ಲ. ಡಿಸೆಂಬರ್‌ 23 ರಂದೇ ಸಭೆ ಮಾಡೋದಾದ್ರೆ ಕೊಡಗಿನಲ್ಲಿ ಮಾಡಿ. ಸದ್ಯಕ್ಕೆ ಮೈಸೂರು – ಚಾಮರಾಜನಗರದ ಸಭೆಯನ್ನು ಮುಂದಕ್ಕೆ ಹಾಕಿ. ಅಲ್ಲಿ ನಾನು ಬರುವ ತನಕ ಸಭೆ ಬೇಡ ಎಂದು ತಾಕೀತು ಮಾಡಿದ್ದಾರೆ ಎನ್ನಲಾಗಿದೆ.

ಈ ಮಾತಿಗೆ ಡಿ,ಕೆ, ಶಿವಕುಮಾರ್‌ ಸಮಜಾಯಿಷಿ ನೀಡಿದ್ದು “ಧೃವನಾರಾಯಣ್‌ ಜೊತೆ ಮಾತನಾಡಿದ್ದೆ. ಸಭೆ ಮಾಡಲ್ಲ ಬಿಡಿ ಎಂದಿದ್ದಾರೆ. ಈ ಮಾತಿಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ ಅವರು ಇಲ್ಲಪ್ಪಾ, ನಾವಿಬ್ಬರೂ ಜೊತೆಗೆ ಹೋದರೆ ಒಳ್ಳೆಯ ಮೇಸೇಜ್ ಹೋಗುತ್ತದೆ. ಇಲ್ಲಾಂದ್ರೆ ಬ್ಯಾಡ್ ಮೇಸೇಜ್ ಹೋಗ್ತದೆ. ಗೊತ್ತಾಯ್ತಾ ಎಂದು ಹೇಳಿದ್ದಾರೆ.  ಮಧ್ಯ ಪ್ರವೇಶ ಮಾಡಿದ ಕೆ ಜೆ ಜಾರ್ಜ್, ನೀವು ಸಭೆ ಕರೆಯುವಾಗ ಸಿದ್ದರಾಮಯ್ಯ ಅವರ  ಗಮನಕ್ಕೆ ತರಬೇಕಾಗಿತ್ತು ಎಂದಿದ್ದಾರೆ. ಈ ಬಗ್ಗೆ ಸದನದ ಮೊಗಸಾಲೆಯಲ್ಲಿ ಗಂಭೀರ ಚರ್ಚೆಯಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT