ಎಚ್.ಡಿ ಕುಮಾರಸ್ವಾಮಿ 
ರಾಜಕೀಯ

ಮೇಧಾವಿ ಪಂಡಿತರೊಬ್ಬರು ಹೆಣ್ಣು ಮಕ್ಕಳಿಗೆ ಸಲಹೆ ಕೊಟ್ಟಿದ್ದನ್ನು ನೋಡಲು ಸದನಕ್ಕೆ ಹೋಗಬೇಕಾ? ಟಿಎ, ಡಿಎಗಾಗಿ ಹೋಗಲಾ?

ಸದನಕ್ಕೆ ಗೈರಾಗಿರುವ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ  ಟಿಎ, ಡಿಎ ಪಡೆಯುವುದಕ್ಕೆ ನಾನು ಸದನಕ್ಕೆ ಹೋಗಲಾ? ಎಂದು ಪ್ರಶ್ನಿಸಿದ್ದಾರೆ.

ಬೆಂಗಳೂರು: ಸದನಕ್ಕೆ ಗೈರಾಗಿರುವ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ  ಟಿಎ, ಡಿಎ ಪಡೆಯುವುದಕ್ಕೆ ನಾನು ಸದನಕ್ಕೆ ಹೋಗಲಾ? ಎಂದು ಪ್ರಶ್ನಿಸಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ, 5 ದಿನದ ಅಧಿವೇಶನದಲ್ಲಿ ಏನು ಚರ್ಚೆಯಾಗಿದೆ. ಒಂದು ದಿನ ಭೈರತಿ ಬಸವರಾಜ್ ವಿರುದ್ಧ ಪ್ರತಿಭಟನೆ ಮಾಡಿದರು. ಇನ್ನೊಂದು ದಿನ ತಹಶೀಲ್ದಾರರ ವಿರುದ್ಧ ಪ್ರತಿಭಟನೆ ಮಾಡಿದರು. ಅದನ್ನೆಲ್ಲಾ ನೋಡುವುದಕ್ಕೆ ನಾನು ಅಲ್ಲಿಗೆ ಹೋಗಬೇಕಿತ್ತಾ?

ಇನ್ನು ಮೇಧಾವಿ ಪಂಡಿತರೊಬ್ಬರು (ರಮೇಶ್ ಕುಮಾರ್) ಸದನದಲ್ಲಿ ಹೆಣ್ಣು ಮಕ್ಕಳಿಗೆ ಸಲಹೆ ಕೊಟ್ಟಿದ್ದನ್ನು ನೋಡಲು ಸದನಕ್ಕೆ ಹೋಗಬೇಕಾ?  ಎಂದು ಪ್ರಶ್ನಿಸಿದ್ದಾರೆ.

ಸೆಷನ್​ಗೆ ಹೋಗಿ ನಾನು ಏನು ಮಾಡಲಿ? ಟಿಎ-ಡಿಎ ಕ್ಲೈಮ್ ಮಾಡೋಕೆ ಹೋಗಬೇಕು ಅಷ್ಟೇ. ಸದನದಲ್ಲಿ ರಾಜ್ಯದ ಸಮಸ್ಯೆ ಬಗ್ಗೆ ಎಷ್ಟು ಚರ್ಚೆ ಆಯ್ತು? ಇದರಿಂದ ಏನು ಸಾಧನೆ ಆಯ್ತು. ಸಮಯ ಸಿಕ್ಕರೆ ಉತ್ತರ ಕರ್ನಾಟಕದ ಸಮಸ್ಯೆ ಬಗ್ಗೆ ಚರ್ಚೆ ಮಾಡುತ್ತೀನಿ ಎಂದು ಸಿಎಂ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

SCROLL FOR NEXT