ವಿಧಾನಸಭೆಯಲ್ಲಿ ಮತಾಂತರ ನಿಷೇಧ ಮಸೂದೆ ಅಂಗೀಕಾರ 
ರಾಜಕೀಯ

ಕಾಂಗ್ರೆಸ್ ವರ್ತನೆಗೆ ಯಡಿಯೂರಪ್ಪ ಗರಂ; ನಾವು ಮುಸ್ಲಿಂ, ಕ್ರಿಶ್ಚಿಯನ್ ವಿರೋಧಿಗಳಲ್ಲ ಎಂದ ಮಾಜಿ ಸಿಎಂ

ಮತಾಂತರ ನಿಷೇಧ ಮಸೂದೆ ಕುರಿತ ಚರ್ಚೆ ವೇಳೆ ವಿಪಕ್ಷ ಕಾಂಗ್ರೆಸ್ ವಿರುದ್ಧ ತೀವ್ರ ಕಿಡಿಕಾರಿದ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು, ನಾವು ಮುಸ್ಲಿಂ, ಕ್ರಿಶ್ಚಿಯನ್ ವಿರೋಧಿಗಳಲ್ಲ ಎಂದು  ಹೇಳಿದರು.

ಬೆಳಗಾವಿ: ತೀವ್ರ ಕುತೂಹಲ ಮತ್ತು ಭಾರಿ ಗದ್ದಲಕ್ಕೆ ಕಾರಣವಾಗಿದ್ದ ಮತಾಂತರ ನಿಷೇಧ ವಿಧೇಯಕಕ್ಕೆ ವಿಧಾನಸಭೆಯಲ್ಲಿ ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಅಂಗೀಕಾರ ದೊರೆತಿದೆ.

ವಿಧಾನಸಭೆಯಲ್ಲಿ ಮಂಗಳವಾರ ‘ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ರಕ್ಷಣಾ ವಿಧೇಯಕ-2021’ ಮಂಡನೆಯಾಗಿದೆ. ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ನ ತೀವ್ರ ವಿರೋಧದ ನಡುವೆಯೂ ಮತಾಂತರ ನಿಷೇಧ ಮಸೂದೆಗೆ ಬೆಳಗಾವಿ ಸುವರ್ಣಸೌಧದಲ್ಲಿ ಅಂಗೀಕಾರ ಸಿಕ್ಕಿದೆ. ಇಂದು ಸದನದಲ್ಲಿ ಸ್ಪೀಕರ್‌ ಕಾಗೇರಿ ಮಂತಾತರ ನಿಷೇಧ ಮಸೂದೆಯನ್ನು ದ್ವನಿ ಮತಕ್ಕೆ ಹಾಕಿದರು. ಈ ವೇಳೆ ವಿಧಾನಸಭಾ ಹೆಚ್ಚಿನ ಸದಸ್ಯರು ಮಸೂದೆ ಪರ ಮತ ಹಾಕಿದ್ದು, ಈಗ ಅಂಗೀಕಾರಗೊಂಡಿದೆ.

ಎರಡು ದಿನಗಳ ಹಿಂದೆಯಷ್ಟೇ ಗೃಹ ಸಚಿವ ಆರಗ ಜ್ಞಾನೇಂದ್ರ ಮಂತಾತರ ಕಾಯ್ದೆ ಮಂಡಿಸಿದರು. ಬಳಿಕ ಒಂದಿಡೀ ದಿನ ಕಾಯ್ದೆ ಪರ-ವಿರೋಧ ಚರ್ಚೆ ನಡೆಸಲಾಯ್ತು. ಈಗ ಕೊನೆಗೂ ಧ್ವನಿ ಮತಕ್ಕೆ ಹಾಕಿ ಸರ್ಕಾರ ಒಪ್ಪಿಗೆ ಪಡೆದುಕೊಂಡಿದೆ.

ಸದನ ಮುಂದೂಡಿಕೆ
ಇನ್ನು ಕಾಂಗ್ರೆಸ್ ಸದಸ್ಯರ ಭಾರಿ ಗದ್ದಲದ ನಡುವೆಯೇ ಸ್ಪೀಕರ್ ಕಾಗೇರಿ ಅವರು ವಿಧೇಯಕ ಅಂಗೀಕಾರ ಪಡೆದಿದೆ ಎಂದು ಸದನವನ್ನು 10 ನಿಮಿಷಗಳ ಕಾಲ ಮುಂದೂಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT