ವಿಧಾನಸಭೆಯಲ್ಲಿ ಮತಾಂತರ ನಿಷೇಧ ಮಸೂದೆ ಅಂಗೀಕಾರ 
ರಾಜಕೀಯ

ಕಾಂಗ್ರೆಸ್ ವರ್ತನೆಗೆ ಯಡಿಯೂರಪ್ಪ ಗರಂ; ನಾವು ಮುಸ್ಲಿಂ, ಕ್ರಿಶ್ಚಿಯನ್ ವಿರೋಧಿಗಳಲ್ಲ ಎಂದ ಮಾಜಿ ಸಿಎಂ

ಮತಾಂತರ ನಿಷೇಧ ಮಸೂದೆ ಕುರಿತ ಚರ್ಚೆ ವೇಳೆ ವಿಪಕ್ಷ ಕಾಂಗ್ರೆಸ್ ವಿರುದ್ಧ ತೀವ್ರ ಕಿಡಿಕಾರಿದ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು, ನಾವು ಮುಸ್ಲಿಂ, ಕ್ರಿಶ್ಚಿಯನ್ ವಿರೋಧಿಗಳಲ್ಲ ಎಂದು  ಹೇಳಿದರು.

ಬೆಳಗಾವಿ: ತೀವ್ರ ಕುತೂಹಲ ಮತ್ತು ಭಾರಿ ಗದ್ದಲಕ್ಕೆ ಕಾರಣವಾಗಿದ್ದ ಮತಾಂತರ ನಿಷೇಧ ವಿಧೇಯಕಕ್ಕೆ ವಿಧಾನಸಭೆಯಲ್ಲಿ ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಅಂಗೀಕಾರ ದೊರೆತಿದೆ.

ವಿಧಾನಸಭೆಯಲ್ಲಿ ಮಂಗಳವಾರ ‘ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ರಕ್ಷಣಾ ವಿಧೇಯಕ-2021’ ಮಂಡನೆಯಾಗಿದೆ. ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ನ ತೀವ್ರ ವಿರೋಧದ ನಡುವೆಯೂ ಮತಾಂತರ ನಿಷೇಧ ಮಸೂದೆಗೆ ಬೆಳಗಾವಿ ಸುವರ್ಣಸೌಧದಲ್ಲಿ ಅಂಗೀಕಾರ ಸಿಕ್ಕಿದೆ. ಇಂದು ಸದನದಲ್ಲಿ ಸ್ಪೀಕರ್‌ ಕಾಗೇರಿ ಮಂತಾತರ ನಿಷೇಧ ಮಸೂದೆಯನ್ನು ದ್ವನಿ ಮತಕ್ಕೆ ಹಾಕಿದರು. ಈ ವೇಳೆ ವಿಧಾನಸಭಾ ಹೆಚ್ಚಿನ ಸದಸ್ಯರು ಮಸೂದೆ ಪರ ಮತ ಹಾಕಿದ್ದು, ಈಗ ಅಂಗೀಕಾರಗೊಂಡಿದೆ.

ಎರಡು ದಿನಗಳ ಹಿಂದೆಯಷ್ಟೇ ಗೃಹ ಸಚಿವ ಆರಗ ಜ್ಞಾನೇಂದ್ರ ಮಂತಾತರ ಕಾಯ್ದೆ ಮಂಡಿಸಿದರು. ಬಳಿಕ ಒಂದಿಡೀ ದಿನ ಕಾಯ್ದೆ ಪರ-ವಿರೋಧ ಚರ್ಚೆ ನಡೆಸಲಾಯ್ತು. ಈಗ ಕೊನೆಗೂ ಧ್ವನಿ ಮತಕ್ಕೆ ಹಾಕಿ ಸರ್ಕಾರ ಒಪ್ಪಿಗೆ ಪಡೆದುಕೊಂಡಿದೆ.

ಸದನ ಮುಂದೂಡಿಕೆ
ಇನ್ನು ಕಾಂಗ್ರೆಸ್ ಸದಸ್ಯರ ಭಾರಿ ಗದ್ದಲದ ನಡುವೆಯೇ ಸ್ಪೀಕರ್ ಕಾಗೇರಿ ಅವರು ವಿಧೇಯಕ ಅಂಗೀಕಾರ ಪಡೆದಿದೆ ಎಂದು ಸದನವನ್ನು 10 ನಿಮಿಷಗಳ ಕಾಲ ಮುಂದೂಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: 56 ಸಾವಿರ ಹುದ್ದೆ ನೇಮಕಕ್ಕೆ ಸಚಿವ ಸಂಪುಟ ಅಸ್ತು

ದಲಿತ ಸಚಿವರ ನಿಯೋಗ ಭೇಟಿ ಬೆನ್ನಲ್ಲೇ SC ಒಳ ಮೀಸಲಾತಿ ಮಸೂದೆಗೆ ರಾಜ್ಯಪಾಲರ ಅಂಕಿತ

T20 World Cup 2026: ಅಭಿಷೇಕ್, ಹಾರ್ದಿಕ್ ಅಬ್ಬರ; ಜಿಂಬಾಬ್ವೆ ವಿರುದ್ಧ ಟೀಂ ಇಂಡಿಯಾ ಭರ್ಜರಿ ಗೆಲುವು

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

SCROLL FOR NEXT