ಐಟಿ ಸಚಿವ ಡಾ. ಅಶ್ವತ್ಥ್ ನಾರಾಯಣ್ 
ರಾಜಕೀಯ

ಮತಾಂತರ ನಿಷೇಧ ಮಸೂದೆ ಆರ್ ಎಸ್ ಎಸ್ ಅಜೆಂಡಾ ಅಂತ ಒಪ್ಪಿಕೊಳ್ಳುತ್ತೇನೆ: ಅಶ್ವತ್ಥ್ ನಾರಾಯಣ್

ಧಾರ್ಮಿಕ ಸ್ವಾತಂತ್ರ್ಯ ಸಂರಕ್ಷಣಾ ಕಾಯ್ದೆ ವಿಧಾನಸಭೆಯಲ್ಲಿ ಪಾಸ್ ಆಗಿದೆ. ಮಸೂದೆ ಬಗ್ಗೆ ಸಾಕಷ್ಟು ಚರ್ಚೆ ಆಯಿತು. ಮಸೂದೆ ಕುರಿತ ಚರ್ಚೆ ಸಂದರ್ಭದಲ್ಲಿ ಹಲವಾರು ವಿಚಾರಗಳ ಬೆಳಕಿಗೆ ಬಂದಿದೆ...

ಬೆಳಗಾವಿ: ಧಾರ್ಮಿಕ ಸ್ವಾತಂತ್ರ್ಯ ಸಂರಕ್ಷಣಾ ಕಾಯ್ದೆ ವಿಧಾನಸಭೆಯಲ್ಲಿ ಪಾಸ್ ಆಗಿದೆ. ಮಸೂದೆ ಬಗ್ಗೆ ಸಾಕಷ್ಟು ಚರ್ಚೆ ಆಯಿತು. ಮಸೂದೆ ಕುರಿತ ಚರ್ಚೆ ಸಂದರ್ಭದಲ್ಲಿ ಹಲವಾರು ವಿಚಾರಗಳ ಬೆಳಕಿಗೆ ಬಂದಿದೆ ಮತ್ತು ಪ್ರತಿಪಕ್ಷಗಳಿಗೆ ತೀವ್ರ ಹಿನ್ನಡೆಯಾಗಿದೆ ಎಂದು ಸಚಿವ ಅಶ್ವತ್ಥ್ ನಾರಾಯಣ್ ಅವರು ಹೇಳಿದ್ದಾರೆ.

ಮಸೂದೆ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅಶ್ವತ್ಥ್ ನಾರಾಯಣ್ ಅವರು, ಯಾವುದೇ ಆಮಿಷಕ್ಕೆ ಒತ್ತಡಕ್ಕೆ ಒಳಗಾಗಿ ಮತಾಂತರ ಆಗಬಾರದು. ಇದು ಸಮಾಜದ ಸಂಸ್ಕೃತಿಗೆ ಪೂರಕವಾಗಿರುವುದಿಲ್ಲ. ಸಿದ್ದರಾಮಯ್ಯ ಅವರೇ ಇದನ್ನು ಜಾರಿಗೆ ತರಬೇಕು ಅಂತ ಹೊರಟಿದ್ರು. ಸಮಾಜಕ್ಕೆ ಒಳ್ಳದಾಗುವ ಕಾಯ್ದೆ ಇದು ಎಂದಿದ್ದಾರೆ.

ನಾವು ಈಗ ಧರ್ಮಗಳ ಸಂರಕ್ಷಣಾ ಕಾಯ್ದೆ ಜಾರಿಗೆ ತಂದಿದ್ದೇವೆ. ಇಡೀ ವಿಶ್ವದಲ್ಲೇ ಭಾರತೀಯರು ಇದನ್ನು ಎದುರು ನೋಡುತ್ತಿದ್ದರು. ಇದರ ಕ್ರೆಡಿಟ್ ನಮಗೆ ಬರಬೇಕು. ಅವರು ಸಹಕಾರ ನೀಡಿದ್ದರೆ ಅವರಿಗೂ ಕ್ರೆಡಿಟ್ ಬಂದಿರೋದು ಎಂದರು.

ಈ ಮಸೂದೆ ಆರ್ ಎಸ್ ಎಸ್ ನ‌ ಅಜೆಂಡಾ ಎಂಬ ವಿಚಾರಕ್ಕೆ ಪ್ರತಿಕ್ರಿಯಿಸಿದ ಅಶ್ವತ್ಥ್ ನಾರಾಯಣ್, ಸಮಾಜ‌ದ ಪರವಾಗಿದೆ. ಮತಾಂತರ ನಿಷೇಧದ ಬಗ್ಗೆ ಸಂವಿಧಾನದಲ್ಲಿದೆ. ಹೆಚ್ಚಿನ ಸ್ಪಷ್ಟತೆ ಕೊಡೋದಕ್ಕೆ ಈ ಕಾಯ್ದೆ ಜಾರಿಗೆ ತಂದಿದ್ದೇವೆ. ಇದು ಆರ್ ಎಸ್ಎಸ್ ಅಜೆಂಡಾ ಅಂತ ನಾನು ಒಪ್ಪಿಕೊಳ್ಳುತ್ತೇನೆ ಎಂದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT