ನಿನ್ನೆ ವಿಧಾನಸಭೆಯ ಕಲಾಪದ ಚಿತ್ರ 
ರಾಜಕೀಯ

ಬೆಳಗಾವಿ ಅಧಿವೇಶನದ ಕೊನೆಯ ದಿನದ ಕಲಾಪ, ಹಲವು ಸದಸ್ಯರು ಗೈರು; ವಿಧಾನಸಭಾಧ್ಯಕ್ಷ ಕಾಗೇರಿ ಅಸಮಾಧಾನ

ಇಂದು ಡಿಸೆಂಬರ್ 24ರಂದು ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲ ಅಧಿವೇಶನದ ಕೊನೆಯ ದಿನ. ಕೊನೆಯ ದಿನದ ಅಧಿವೇಶನದ ಕಲಾಪ ಮಹತ್ವದ್ದಾಗಿರುತ್ತದೆ. ಹಲವು ಪ್ರಮುಖ ವಿಚಾರಗಳು ಚರ್ಚೆಗೆ ಬರುತ್ತವೆ.

ಬೆಳಗಾವಿ: ಇಂದು ಡಿಸೆಂಬರ್ 24ರಂದು ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲ ಅಧಿವೇಶನದ ಕೊನೆಯ ದಿನ. ಕೊನೆಯ ದಿನದ ಅಧಿವೇಶನದ ಕಲಾಪ ಮಹತ್ವದ್ದಾಗಿರುತ್ತದೆ. ಹಲವು ಪ್ರಮುಖ ವಿಚಾರಗಳು ಚರ್ಚೆಗೆ ಬರುತ್ತವೆ.

ಆದರೆ ಇಂದು ಸದನಕ್ಕೆ ಹಲವು ಸದಸ್ಯರು ಗೈರಾಗಿದ್ದಾರೆ. ಇಂದು ಬೆಳಗ್ಗೆ ಕಲಾಪ ಆರಂಭವಾದಾಗ ವಿಧಾನಸಭೆಯಲ್ಲಿ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಸದಸ್ಯರ ಹಾಜರಾತಿ ಖಚಿತಪಡಿಸಿಕೊಳ್ಳಲು ಹೆಸರು ಕರೆಯುತ್ತಾ ಹೋದರು. ಆದರೆ ಬಹುತೇಕ ಸದಸ್ಯರ ಅನುಪಸ್ಥಿತಿಯೇ ಎದ್ದುಕಂಡಿತು.

''ಶುಕ್ರವಾರ ಬಂದರೆ ಇದೇ ಕಥೆ'' ಎಂದು ವಿಧಾನಸಭಾಧ್ಯಕ್ಷರು ತಮ್ಮ ಅಸಹನೆ, ಅಸಮಾಧಾನವನ್ನು ವ್ಯಕ್ತಪಡಿಸಿದರು. ನಿನ್ನೆ ಮತಾಂತರ ನಿಷೇಧ ಕಾಯ್ದೆ ಎರಡೂ ಸದನಗಳಲ್ಲಿ ಮಂಡನೆಯಾಗಿ ಅನುಮೋದನೆಗೊಂಡಿದೆ. ಇಂದು ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳ ಬಗ್ಗೆ ಚರ್ಚೆಯಾಗಲಿದೆ. ಅದರ ಜೊತೆಗೆ ಬಿಟ್ ಕಾಯಿನ್ ದಂಧೆಯ ವಿಚಾರವನ್ನು ಕೂಡ ಇಂದಿನ ಕಲಾಪದಲ್ಲಿ ಕಾಂಗ್ರೆಸ್ ಪ್ರಸ್ತಾಪಿಸುವ ಸಾಧ್ಯತೆಯಿದೆ.

ತಮ್ಮ ಕ್ಷೇತ್ರಗಳ ಜನರ ಸಮಸ್ಯೆಗಳು, ಆಗಬೇಕಾದ ಕೆಲಸಗಳ ಬಗ್ಗೆ ಸರ್ಕಾರದ ಗಮನ ಸೆಳೆಯಲು ಸದನದಲ್ಲಿ ಹಾಜರಿರಬೇಕಾದ ಸದಸ್ಯರು ಈ ರೀತಿ ಅಸಡ್ಡೆ ತೋರಿಸಿದರೆ ಹೇಗೆ ಎಂಬ ಪ್ರಶ್ನೆ ಸಾರ್ವಜನಿಕ ವಲಯದಲ್ಲಿ ಉದ್ಭವವಾಗಿದೆ.

ಇಂದಿನ ಸಭೆಯಲ್ಲಿ ವಿಧಾನಸಭಾಧ್ಯಕ್ಷರು ಬಹಳ ಅಸಮಾಧಾನಗೊಂಡಿದ್ದಾರೆ. ಶಾಸಕರು ನಡೆದುಕೊಳ್ಳುವ ರೀತಿಯಿಂದ ಅಸಂತೋಷಗೊಂಡಿದ್ದು ಇದೇನು ನೀವು ಸದನದಲ್ಲಿ ನಡೆದುಕೊಳ್ಳುವ ರೀತಿಯಾ ಎಂದು ಕೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ವಿಶ್ವಕಪ್ ವಿಜೇತ ಅಂಧ ಕರ್ನಾಟಕದ ಆಟಗಾರ್ತಿಯರಿಗೆ ತಲಾ 10 ಲಕ್ಷ ನಗದು, ಸರ್ಕಾರಿ ಉದ್ಯೋಗ: ಸಿಎಂ ಸಿದ್ದರಾಮಯ್ಯ ಘೋಷಣೆ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಮತ್ತೊಂದು ಹೆಣ್ಣಿನೊಂದಿಗೆ ಮೋಹ, ನಂಬಿಕೆ ದ್ರೋಹ; ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಬರವಣಿಗೆಯಲ್ಲಿ ಖುಷಿ ಕಂಡ ಪೊಲೀಸ್ ಅಧಿಕಾರಿ: 'ಬಸವಣ್ಣನ ವಚನ' ಗಳನ್ನು ಇಂಗ್ಲೀಷ್ ಗೆ ಅನುವಾದ ಮಾಡ್ತಿರೋ DYSP ಬಸವರಾಜ್ ಯಲಿಗಾರ್!

ರಾಜ್ಯದಲ್ಲಿ ಸಿಎಂ ಗದ್ದುಗೆ ಗುದ್ದಾಟ: ಎಲ್ಲ ಗೊಂದಲಗಳಿಗೆ ಹೈಕಮಾಂಡ್ ತೆರೆ ಎಳೆಯಬೇಕು- ಸಿಎಂ ಸಿದ್ದರಾಮಯ್ಯ

SCROLL FOR NEXT