ಜೆ.ಪಿ ನಡ್ಡಾ 
ರಾಜಕೀಯ

ನಾಯಕತ್ವ ಬದಲಾವಣೆ ಗುಸುಗುಸು: ಬಿರುಕು- ಭಿನ್ನಮತಕ್ಕೆ ಬ್ರೇಕ್ ಹಾಕಲು ನಡ್ಡಾ ಎಂಟ್ರಿ; ಪಕ್ಷ ತೊರೆಯುುವವರಿಗೆ ತಕ್ಕ ಶಾಸ್ತಿ!

ಬುಧವಾರ ಹುಬ್ಬಳ್ಳಿಯಲ್ಲಿ ನಡೆಯುವ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭಾಗವಹಿಸಲಿದ್ದಾರೆ.

ಬೆಂಗಳೂರು: ಬುಧವಾರ ಹುಬ್ಬಳ್ಳಿಯಲ್ಲಿ ನಡೆಯುವ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭಾಗವಹಿಸಲಿದ್ದಾರೆ.

ಕಾರ್ಯಕಾರಿಣಿಯಲ್ಲಿ ಭಾಗವಹಿಸುವ  ಮೂಲಕ ರಾಜ್ಯದಲ್ಲಿ ಸದ್ಯ ಚರ್ಚೆಯಾಗುತ್ತಿರುವ ನಾಯಕತ್ವ ಬದಲಾವಣೆ ವಿಷಯಕ್ಕೆ ಸಬಂಧಿಸಿದಂತೆ ಸ್ಪಷ್ಟ ಸಂದೇಶ ನೀಡಲಿದ್ದಾರೆ.

ಡಿಸೆಂಬರ್ 28 ಮತ್ತು 29 ರಂದು ನಡೆಯುವ ಕಾರ್ಯಕಾರಿಣಿಯಲ್ಲಿ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್  ಮಾತ್ರ ಭಾಗವಹಿಸುವುದಾಗಿ ತಿಳಿದು ಬಂದಿತ್ತು.  ಆದರೆ ನಾಯಕತ್ವ ಬದಲಾವಣೆ ಗುಸುಗುಸು ಕೇಳಿ ಬರುತ್ತಿರುವ ಹಿನ್ನೆಲೆಯಲ್ಲಿ ನಡ್ಡಾ ಅಖಾಡಕ್ಕಿಳಿಯುವುದು ಖಚಿತವಾಗಿದೆ ಎಂದು ಮೂಲಗಳು ತಿಳಿಸಿವೆ.

2023ರ ವಿಧಾನಸಭಾ ಚುನಾವಣೆಯ ಪೂರ್ವದಲ್ಲಿ ಪಕ್ಷದ ರಾಜ್ಯ ನಾಯಕತ್ವದ ಕೂಲಂಕುಷ ಪರೀಕ್ಷೆ ನಿರೀಕ್ಷಿಸಲಾಗಿದ್ದರೂ, ಬೇರೆ ರೀತಿಯ ಊಹಾಪೋಹಗಳಿಗೆ ತೆರೆ ಎಳೆಯಬೇಕಾಗಿದೆ. ಪಕ್ಷದ ಕೇಂದ್ರ ನಾಯಕತ್ವವು ಆಡಳಿತ ವಿರೋಧಿ ಮತ್ತು ಆಂತರಿಕ ಕಚ್ಚಾಟದ ವಿರುದ್ಧ ಹೋರಾಡಬೇಕಾಗಿದೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಜನವರಿ 8 ಮತ್ತು 9 ರಂದು ಬೆಂಗಳೂರಿಗೆ ಭೇಟಿ ನೀಡುವ ಸಂದರ್ಭದಲ್ಲಿ ಪಕ್ಷದ ಕಾರ್ಯಕರ್ತರಿಗೆ ಮತ್ತೊಂದು ಸುತ್ತಿನ ಚುನಾವಣಾ ಪೂರ್ವ ತಯಾರಿ ಕಾರ್ಯಕ್ರಮ ನಡೆಸುವ ಸಾಧ್ಯತೆಯಿದೆ.

ಸಿಎಂ ಬದಲಾವಣೆ ಬಗ್ಗೆ ಮಾತನಾಡುತ್ತಿರುವ ಹಿರಿಯ ನಾಯಕರಾದ ವಿಶೇಷವಾಗಿ ಕೆ ಎಸ್ ಈಶ್ವರಪ್ಪ ಮತ್ತು ಮುರುಗೇಶ್ ನಿರಾಣಿ ಗೆ ಎಚ್ಚರಿಕೆ ನೀಡುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ. ಎಂಎಲ್‌ಸಿ ಚುನಾವಣೆ ವೇಳೆ ಪಕ್ಷದ ಹಿತಾಸಕ್ತಿಗೆ ವಿರುದ್ಧವಾಗಿ ನಡೆದುಕೊಂಡ ನಾಯಕರ ವಿರುದ್ಧ ಹಂತಹಂತವಾಗಿ ಕ್ರಮಕೈಗೊಳ್ಳಲಾಗುವುದು.

ಅಲ್ಲದೆ, ವಿಧಾನಸಭೆ ಚುನಾವಣೆಗೂ ಮುನ್ನ ಪಕ್ಷ ತೊರೆಯಲು ಮುಂದಾಗಿರುವವರನ್ನು ವಜಾಗೊಳಿಸಲಾಗುವುದು ಎಂದು ಮೂಲಗಳು ತಿಳಿಸಿವೆ.  ಮಾಜಿ ಸಚಿವ ರಮೇಶ ಜಾರಕಿಹೊಳಿ ಅವರ ಕಿರಿಯ ಸಹೋದರ ಲಖನ್ ಸ್ಪರ್ಧಿಸಿ ಗೆದ್ದ ನಂತರ ಬೆಳಗಾವಿಯ ಉಭಯ ಕ್ಷೇತ್ರದಲ್ಲಿ ಪಕ್ಷದ ಅಧಿಕೃತ ಅಭ್ಯರ್ಥಿ ಮಹಾಂತೇಶ ಕವಟಗಿಮಠ ಅವರು ಅನುಭವಿಸಿದ ಸೋಲನ್ನು ಹೈಕಮಾಂಡ್ ಗಮನಿಸಿದೆ ಎಂದು ಮೂಲಗಳು ತಿಳಿಸಿವೆ.

ಹುಬ್ಬಳ್ಳಿಯಲ್ಲ ಕಾರ್ಯಕಾರಣಿಯಲ್ಲಿ ಎರಡು ನಿರ್ಣಯಗಳನ್ನು ಅಂಗೀಕರಿಸುವ ಸಾಧ್ಯತೆಯಿದೆ . ಉತ್ತರ ಕರ್ನಾಟಕದ ಅಭಿವೃದ್ಧಿಗೆ ಒತ್ತು ನೀಡಿದ ಬೊಮ್ಮಾಯಿ ಅವರನ್ನು ಶ್ಲಾಘಿಸುವುದು  ಹಾಗೂ ಎರಡನೆಯದು ಬೆಳಗಾವಿ ಚಳಿಗಾಲದ ಅಧಿವೇಶನವನ್ನು ಯಶಸ್ವಿಯಾಗಿ ನಡೆಸಿರುವುದಕ್ಕೆ ಬೊಮ್ಮಾಯಿ ಅವರಿಗೆ ಅಭಿನಂದಿಸುವುದು. ಹೈದರಾಬಾದ್‌ನಲ್ಲಿರುವ ಅಮಿತ್ ಶಾ ಕೂಡ ಹುಬ್ಬಳ್ಳಿ ಸಭೆ ವೇಳೆ  ಭೇಟಿ ನೀಡುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

IPL 2026 Eliminator: ವಿಶ್ವದಾಖಲೆಯ ಹೊಸ್ತಿಲಲ್ಲಿ ಎಡವಿದ Vaibhav Suryavanshi, ಮತ್ತೊಂದು ರೆಕಾರ್ಡ್ ಜಸ್ಟ್ ಮಿಸ್!

ಬೆಂಗಳೂರು: ಮಾಜಿ ಪ್ರೇಯಸಿ ಕರೆದಳೆಂದು ಮನೆಗೆ ಹೋದ ಪ್ರಿಯಕರ ದುರಂತ ಸಾವು: ಅಷ್ಟಕ್ಕೂ ಆಗಿದ್ದೇನು?

SCROLL FOR NEXT