ಎಚ್.ಡಿ ಕುಮಾರಸ್ವಾಮಿ 
ರಾಜಕೀಯ

'ಕಟುಕರ ಕೈಯ್ಯಲ್ಲಿ ಕನ್ನಡ ಸಿಕ್ಕಿಕೊಂಡಿದೆ, ಕನ್ನಡಿಗರ ಬಗ್ಗೆ ಈ ಕಠಿಣತೆ ಏಕೆ?': ಎಚ್.ಡಿ. ಕುಮಾರಸ್ವಾಮಿ ಆಕ್ರೋಶ

‘ಯುಜಿಸಿ–ಎನ್‌ಇಟಿ’ ಕನ್ನಡ ಐಚ್ಛಿಕ ಭಾಷೆಯ ಪ್ರಶ್ನೆ ಪತ್ರಿಕೆಯ ಪ್ರಶ್ನೆಗಳು ಹಿಂದಿ ಭಾಷೆಯಲ್ಲಿದ್ದ ವಿಚಾರವಾಗಿ ಪ್ರತಿಕ್ರಿಯಿಸಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, 'ಕನ್ನಡ ಕಟುಕರ ಕೈಯಲ್ಲಿ ಸಿಕ್ಕಿಕೊಂಡಿದೆ' ಎಂದಿದ್ದಾರೆ.

ಬೆಂಗಳೂರು: ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯು (ಎನ್‌ಟಿಎ) ಭಾನುವಾರ ನಡೆಸಿದ ‘ಯುಜಿಸಿ–ಎನ್‌ಇಟಿ’ ಕನ್ನಡ ಐಚ್ಛಿಕ ಭಾಷೆಯ ಪ್ರಶ್ನೆ ಪತ್ರಿಕೆಯ ಪ್ರಶ್ನೆಗಳು ಹಿಂದಿ ಭಾಷೆಯಲ್ಲಿದ್ದ ವಿಚಾರವಾಗಿ ಪ್ರತಿಕ್ರಿಯಿಸಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, 'ಕನ್ನಡ ಕಟುಕರ ಕೈಯಲ್ಲಿ ಸಿಕ್ಕಿಕೊಂಡಿದೆ' ಎಂದಿದ್ದಾರೆ.

ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಅವರು, 'ನಾನು ಮೊದಲಿನಿಂದಲೂ ಹೇಳುತ್ತಿರುವ ಮಾತಿದು. ಈ ಮಾತು ಪದೇ ಪದೆೇ ಮರುಕಳಿಸುತ್ತಿರುವುದು ನನಗೆ ಬಹಳ ನೋವುಂಟು ಮಾಡಿದೆ. ಕೇಂದ್ರ ಸರಕಾರದ ಉದ್ಯೋಗ ಅವಕಾಶಗಳಲ್ಲಿ ಕನ್ನಡಿಗರನ್ನು ಹತ್ತಿಕ್ಕುವ ಮತ್ತು ಅವಕಾಶಗಳನ್ನು ನಿರಾಕರಿಸುವ ಕುತಂತ್ರ ನಿರಂತರವಾಗಿ ನಡೆಯುತ್ತಲೇ ಇದೆ' ಎಂದು ಅಸಮಾಧಾನ ವ್ಯಕ್ತ ಪಡಿಸಿದ್ದಾರೆ.

ನಿನ್ನೆ ರಾಷ್ಟ್ರೀಯ ಪರಿಕ್ಷಾ ಸಂಸ್ಥೆ ನಡೆಸಿದ ಪರೀಕ್ಷೆಯಲ್ಲಿ ಯುಜಿಸಿ-ಎನ್‌ಇಟಿ ಕನ್ನಡ ಐಚ್ಛಿಕ ಭಾಷಾ ಪಶ್ನೆ ಪತ್ರಿಕೆಯ 100 ಪ್ರಶ್ನೆಗಳಲ್ಲಿ 90 ಪ್ರಶ್ನೆಗಳು ಹಿಂದಿಯಲ್ಲೇ ಇದ್ದವು. ಅದನ್ನು ಕಂಡ ಅಭ್ಯರ್ಥಿಗಳು ಗೊಂದಲಕ್ಕೆ ಒಳಗಾಗಿ ಪರೀಕ್ಷೆಯನ್ನು ಬಹಿಷ್ಕರಿಸಿ, ಪ್ರತಿಭಟನೆ ನಡೆಸಿದ್ದಾರೆ. ಇದು ಕನ್ನಡದ ಮೇಲಿನ ತಾತ್ಸಾರ ಹಾಗೂ ಹಿಂದಿ ಹೇರಿಕೆಯ ವಿಪರೀತ. ಪರೀಕ್ಷೆ ನಡೆಸಿದ ಸಂಸ್ಥೆ ಮಾಡಿರುವ ಕನ್ನಡ ದ್ರೋಹ. ಉದ್ದೇಶಪೂರ್ವಕವಾಗಿಯೇ ಇಂಥ ಕೃತ್ಯಗಳನ್ನು ಕನ್ನಡದ ವಿರುದ್ಧ ಎಸಗಲಾಗುತ್ತಿದೆ. ಕನ್ನಡಿಗರ ಬಗ್ಗೆ ಈ ಕಠಿಣತೆ ಏಕೆ?' ಎಂದು ಕಿಡಿಕಾರಿದ್ದಾರೆ

'ರೈಲ್ವೆ, ಬ್ಯಾಂಕಿಂಗ್ ಸೇರಿದಂತೆ ಕೇಂದ್ರ ಸರಕಾರದ  ಇನ್ನು ಹಲವಾರು ಉದ್ಯೋಗ ಅವಕಾಶಗಳಲ್ಲಿ ಕನ್ನಡದ ಪ್ರತಿಭಾವಂತ ಯುವಜನರಿಗೆ ಅನ್ಯಾಯ ಆಗುತ್ತಿದೆ. ಕನ್ನಡಿಗರ ಕಡೆಗಣನೆ ದೇಶಕ್ಕೆ ಒಳ್ಳೆಯದಲ್ಲ. ನಮ್ಮ ಮೌನ ನಮ್ಮ  ದೌರ್ಬಲ್ಯವಲ್ಲ ಎಂಬುದು ನೆನಪಿರಲಿ. ಈ ಅನ್ಯಾಯವನ್ನು ಸಹಿಸುವ ಪ್ರಶ್ನೆಯೇ ಇಲ್ಲ.

ಕೂಡಲೇ ಪರಿಕ್ಷಾ ಸಂಸ್ಥೆಯು ಆಗಿರುವ ಲೋಪ ಸರಿಮಾಡಿ ಪುನಃ ಪರೀಕ್ಷೆ ನಡೆಸಬೇಕು. ಎರಡು ವರ್ಷಗಳಿಂದ ಪರಿಕ್ಷೆಗಾಗಿ ತಯಾರಿ ನಡೆಸಿರುವ ಅಭ್ಯರ್ಥಿಗಳಿಗೆ ನ್ಯಾಯ ಸಿಗುವಂತೆ ಕ್ರಮ ವಹಿಸಬೇಕು' ಎಂದು ಒತ್ತಾಯಿಸಿದ್ದಾರೆ. 'ಪರೀಕ್ಷೆ ಅವ್ಯವಸ್ಥೆ ಆಗರವಾಗಿತ್ತು ಎನ್ನುವುದು ತಿಳಿದುಬಂದಿದೆ. ಅದನ್ನು ಸರಿಪಡಿಸಿ ಉತ್ತಮ ರೀತಿಯಲ್ಲಿ ಪರೀಕ್ಷೆ ನಡೆಸಬೇಕು' ಎಂದು ಆಗ್ರಹಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel