ಕಾರ್ಯಕಾರಿಣಿ ಸಭೆಗೆ ಸಜ್ಜಾಗಿರುವ ಹುಬ್ಬಳ್ಳಿ. 
ರಾಜಕೀಯ

ಹುಬ್ಬಳ್ಳಿಯಲ್ಲಿಂದು ಬಿಜೆಪಿ ಕಾರ್ಯಕಾರಿಣಿ ಸಭೆ: ಜೆಪಿ. ನಡ್ಡಾ ಗೈರು

ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಬರೋಬ್ಬರಿ 11 ವರ್ಷದ ಬಳಿಕ ಪಕ್ಷದ ರಾಜ್ಯ ಕಾರ್ಯಕಾರಿಣಿ ಸಭೆಗೆ ಸಜ್ಜಾಗಿ ನಿಂತಿದೆ. ಮಂಗಳವಾರದಿಂದ 2 ದಿನಗಳ ಕಾಲ ನಡೆಯಲಿರುವ ಈ ಕಾರ್ಯಕಾರಿಣಿಗೆ ಹುಬ್ಬಳ್ಳಿ ರಸ್ತೆಗಳು ಸಿಂಗಾರಗೊಂಡಿದೆ. ಇಡೀ ಹುಬ್ಬಳ್ಳಿ ನಗರದಲ್ಲಿ ಕೇಸರಿ ರಾರಾಜಿಸುತ್ತಿದೆ.

ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಬರೋಬ್ಬರಿ 11 ವರ್ಷದ ಬಳಿಕ ಪಕ್ಷದ ರಾಜ್ಯ ಕಾರ್ಯಕಾರಿಣಿ ಸಭೆಗೆ ಸಜ್ಜಾಗಿ ನಿಂತಿದೆ. ಮಂಗಳವಾರದಿಂದ 2 ದಿನಗಳ ಕಾಲ ನಡೆಯಲಿರುವ ಈ ಕಾರ್ಯಕಾರಿಣಿಗೆ ಹುಬ್ಬಳ್ಳಿ ರಸ್ತೆಗಳು ಸಿಂಗಾರಗೊಂಡಿದೆ. ಇಡೀ ಹುಬ್ಬಳ್ಳಿ ನಗರದಲ್ಲಿ ಕೇಸರಿ ರಾರಾಜಿಸುತ್ತಿದೆ.

ಪಕ್ಷದ ಕಾರ್ಯಕಾರಣಿ ಸಭೆಯಲ್ಲಿ ರಾಷ್ಟ್ರೀಯ ನಾಯಕರು ಹಾಗೂ ಕೇಂದ್ರ ಸಚಿವರು ಪಾಲ್ಗೊಳ್ಳುತ್ತಿದ್ದು, ಈ ಸಭೆ  ಹುಬ್ಬಳ್ಳಿಯಲ್ಲಿ ನಡೆಸುತ್ತಿರುವುದಕ್ಕೆ ಜನತೆ ಕೂಡ ಸಂತಸ ವ್ಯಕ್ತಪಡಿಸುತ್ತಿದ್ದಾರೆ.

ಈ ನಡುವೆ ನೂತನ ಕೋವಿಡ್ ಮಾರ್ಗಸೂಚಿ ಹಿನ್ನೆಲೆಯಲ್ಲಿ ಸಭೆಯಲ್ಲಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಪಾಲ್ಗೊಳ್ಳುತ್ತಿಲ್ಲ. ಅವರ ನೇತೃತ್ವದಲ್ಲಿ ನಡೆಯಬೇಕಿದ್ದ ಸಭೆಯನ್ನು ಮುಂದೂಡಲಾಗಿದೆ ಎಂದು ತಿಳಿದುಬಂದಿದೆ.

ಡಿಸೆಂಬರ್ 28 ಹಾಗೂ 29 ರಂದು ಎರಡು ದಿನ ಹುಬ್ಬಳ್ಳಿಯ ಡೆನಿಸನ್ಸ್ ಹೋಟೆಲ್‌ನಲ್ಲಿ ರಾಜ್ಯ ಬಿಜೆಪಿ ಕಾರ್ಯಕಾರಿಣಿ ನಿಗದಿಯಾಗಿದ್ದು, ಸಭೆಯಲ್ಲಿ ಬಿಜೆಪಿ ರಾಷ್ಟ್ರೀಯ ನಾಯಕರು, ಕೇಂದ್ರ ಸಚಿವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪಾಲ್ಗೊಳ್ಳುವ ನಿರೀಕ್ಷೆಯಿದೆ. ಆದ್ದರಿಂದ, ವಿಮಾನ ನಿಲ್ದಾಣದಿಂದ ಹೋಟೆಲ್‌ಗೆ ಹೋಗುವ ರಸ್ತೆಗಳನ್ನು ಭಾರೀ ಭದ್ರತೆ ಹಾಗೂ ವ್ಯವಸ್ಥೆಗಳನ್ನು ಕಲ್ಪಿಸಲಾಗಿದೆ.

ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಕೊಂಚ ಪ್ರಮಾಣದಲ್ಲಿ ಹೆಚ್ಚಳಗೊಂಡಿದ್ದು, ಸರ್ಕಾರ ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಹೀಗಾಗಿ ನಡ್ಡಾ ಭೇಟಿಯನ್ನು ರದ್ದುಗೊಳಿಸಲಾಗಿದೆ.

ನಡ್ಡಾ ಅವರನ್ನು ಸ್ವಾಗತಿಸಲು 50 ಕಿಮೀವರೆಗೂ ರ್ಯಾಲಿಯನ್ನು ಆಯೋಜಿಸಲಾಗಿತ್ತು. ರ್ಯಾಲಿಯಲ್ಲಿ 25,000-30,000 ಜನರನ್ನು ನಿರೀಕ್ಷಿಸಲಾಗಿತ್ತು. ಆದರೆ ಸಾರ್ವಜನಿಕ ಸ್ಥಳಗಳಲ್ಲಿ ಜನರನ್ನು 300 ಕ್ಕಿಂತ ಹೆಚ್ಚು ಜನರು ಸೇರ್ಪಡೆಗೊಳ್ಳುವಂತಿಲ್ಲ ಎಂಬ ನಿಯಮವನ್ನು ವಿಧಿಸಿರುವ ಹಿನ್ನೆಲೆಯಲ್ಲಿ ರ್ಯಾಲಿಯನ್ನು ರದ್ದುಗೊಳಿಸಲಾಗಿದೆ. ನಡ್ಡಾ ಅವರ ಭೇಟಿಯನ್ನು ಮುಂದೂಡಲಾಗಿದೆ. ಆದರೆ ಸಭೆಯು ಯೋಜನೆಯ ಪ್ರಕಾರವೇ ನಡೆಯಲಿದೆ. ಇತರೆ ಕಾರ್ಯಕ್ರಮಗಳನ್ನು ನಡೆಸಲಾಗುತ್ತದೆ ಎಂದು ಅರುಣ್ ಸಿಂಗ್ ಅವರು ಮಾಹಿತಿ ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT