ರಾಜಭವನದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಬರಮಾಡಿಕೊಂಡ ರಾಜ್ಯಪಾಲ ವಜುಭಾಯಿ ವಾಲಾ 
ರಾಜಕೀಯ

ಸಿಎಂ ಯಡಿಯೂರಪ್ಪ- ರಾಜ್ಯಪಾಲ ವಜುಭಾಯಿ ವಾಲಾ ಹಠಾತ್ ಭೇಟಿ, ರಾಜಕೀಯ ವಲಯದಲ್ಲಿ ಕುತೂಹಲ!

ಹಠಾತ್ ಬೆಳವಣಿಗೆಯೊಂದರಲ್ಲಿ ನಿನ್ನೆ ಸಾಯಂಕಾಲ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ರಾಜ್ಯಪಾಲ ವಜುಭಾಯಿ ವಾಲಾ ಅವರನ್ನು ಭೇಟಿ ಮಾಡಿದ್ದಾರೆ. ರಾಜಕೀಯ ವಲಯದಲ್ಲಿ ಇದು ಸಹಜವಾಗಿ ಚರ್ಚೆಯ ವಿಷಯವಾಗಿದೆ.

ಬೆಂಗಳೂರು: ಹಠಾತ್ ಬೆಳವಣಿಗೆಯೊಂದರಲ್ಲಿ ನಿನ್ನೆ ಸಾಯಂಕಾಲ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ರಾಜ್ಯಪಾಲ ವಜುಭಾಯಿ ವಾಲಾ ಅವರನ್ನು ಭೇಟಿ ಮಾಡಿದ್ದಾರೆ. ರಾಜಕೀಯ ವಲಯದಲ್ಲಿ ಇದು ಸಹಜವಾಗಿ ಚರ್ಚೆಯ ವಿಷಯವಾಗಿದೆ.

ಇದೊಂದು ಸೌಹಾರ್ದ ಭೇಟಿ ಎಂದು ರಾಜಭವನ ಹೇಳಿದ್ದು, ರಾಜ್ಯಪಾಲರಿಗೆ ಕಣ್ಣಿನ ಶಸ್ತ್ರಚಿಕಿತ್ಸೆ ಆಗಿದ್ದರಿಂದ ಅವರ ಆರೋಗ್ಯ ವಿಚಾರಿಸಲು ಹೋಗಿದ್ದೆ ಎಂದು ಮುಖ್ಯಮಂತ್ರಿಗಳು ಹೇಳಿದ್ದಾರೆ. ಇತ್ತೀಚೆಗೆ ಬಿಜೆಪಿಯಲ್ಲಿ ಕೇಳಿಬಂದ ನಾಯಕತ್ವ ಬದಲಾವಣೆ, ಬಿಜೆಪಿ ನಾಯಕರಿಂದ ಕೇಂದ್ರ ನಾಯಕರ ಭೇಟಿ ಮತ್ತು ಸಚಿವ ಸಂಪುಟ ಪುನಾರಚನೆ ಬಗ್ಗೆ ಊಹಾಪೋಹಗಳು ಕೇಳಿಬರುತ್ತಿರುವ ಸಂದರ್ಭದಲ್ಲಿಯೇ ಮುಖ್ಯಮಂತ್ರಿಗಳು ರಾಜ್ಯಪಾಲರನ್ನು ಭೇಟಿ ಮಾಡಿದ್ದಾರೆ.

ನಿನ್ನೆ ರಾಜ್ಯಪಾಲರನ್ನು ಭೇಟಿ ಮಾಡುವ ಕೆಲವೇ ಗಂಟೆಗಳ ಮೊದಲು 81ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ಕೋರ್ಟ್ ಮುಖ್ಯಮಂತ್ರಿ ಯಡಿಯೂರಪ್ಪ, ಸಹಕಾರ ಸಚಿವ ಎಸ್ ಟಿ ಸೋಮಶೇಖರ್, ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ ವೈ ವಿಜಯೇಂದ್ರ, ಯಡಿಯೂರಪ್ಪ ಅವರ ಮೊಮ್ಮಗ ಶಶಿಧರ್ ಮರಡಿ, ಅಳಿಯ ವಿರೂಪಾಕ್ಷಪ್ಪ ಯಮಕನಮರಡಿ ಮತ್ತು ಮಗಳ ಅಳಿಯ ಸಂಜಯ್ ಶ್ರೀ ಹೀಗೆ ಕುಟುಂಬಸ್ಥರ ವಿರುದ್ಧ ಕೋರ್ಟ್ ವಿಚಾರಣೆ ನಡೆಸಿತ್ತು. ಅದರ ತೀರ್ಪನ್ನು ನ್ಯಾಯಾಲಯ ಜುಲೈ 8ಕ್ಕೆ ಕಾಯ್ದಿರಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT