ರಾಜಭವನದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಬರಮಾಡಿಕೊಂಡ ರಾಜ್ಯಪಾಲ ವಜುಭಾಯಿ ವಾಲಾ 
ರಾಜಕೀಯ

ಸಿಎಂ ಯಡಿಯೂರಪ್ಪ- ರಾಜ್ಯಪಾಲ ವಜುಭಾಯಿ ವಾಲಾ ಹಠಾತ್ ಭೇಟಿ, ರಾಜಕೀಯ ವಲಯದಲ್ಲಿ ಕುತೂಹಲ!

ಹಠಾತ್ ಬೆಳವಣಿಗೆಯೊಂದರಲ್ಲಿ ನಿನ್ನೆ ಸಾಯಂಕಾಲ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ರಾಜ್ಯಪಾಲ ವಜುಭಾಯಿ ವಾಲಾ ಅವರನ್ನು ಭೇಟಿ ಮಾಡಿದ್ದಾರೆ. ರಾಜಕೀಯ ವಲಯದಲ್ಲಿ ಇದು ಸಹಜವಾಗಿ ಚರ್ಚೆಯ ವಿಷಯವಾಗಿದೆ.

ಬೆಂಗಳೂರು: ಹಠಾತ್ ಬೆಳವಣಿಗೆಯೊಂದರಲ್ಲಿ ನಿನ್ನೆ ಸಾಯಂಕಾಲ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ರಾಜ್ಯಪಾಲ ವಜುಭಾಯಿ ವಾಲಾ ಅವರನ್ನು ಭೇಟಿ ಮಾಡಿದ್ದಾರೆ. ರಾಜಕೀಯ ವಲಯದಲ್ಲಿ ಇದು ಸಹಜವಾಗಿ ಚರ್ಚೆಯ ವಿಷಯವಾಗಿದೆ.

ಇದೊಂದು ಸೌಹಾರ್ದ ಭೇಟಿ ಎಂದು ರಾಜಭವನ ಹೇಳಿದ್ದು, ರಾಜ್ಯಪಾಲರಿಗೆ ಕಣ್ಣಿನ ಶಸ್ತ್ರಚಿಕಿತ್ಸೆ ಆಗಿದ್ದರಿಂದ ಅವರ ಆರೋಗ್ಯ ವಿಚಾರಿಸಲು ಹೋಗಿದ್ದೆ ಎಂದು ಮುಖ್ಯಮಂತ್ರಿಗಳು ಹೇಳಿದ್ದಾರೆ. ಇತ್ತೀಚೆಗೆ ಬಿಜೆಪಿಯಲ್ಲಿ ಕೇಳಿಬಂದ ನಾಯಕತ್ವ ಬದಲಾವಣೆ, ಬಿಜೆಪಿ ನಾಯಕರಿಂದ ಕೇಂದ್ರ ನಾಯಕರ ಭೇಟಿ ಮತ್ತು ಸಚಿವ ಸಂಪುಟ ಪುನಾರಚನೆ ಬಗ್ಗೆ ಊಹಾಪೋಹಗಳು ಕೇಳಿಬರುತ್ತಿರುವ ಸಂದರ್ಭದಲ್ಲಿಯೇ ಮುಖ್ಯಮಂತ್ರಿಗಳು ರಾಜ್ಯಪಾಲರನ್ನು ಭೇಟಿ ಮಾಡಿದ್ದಾರೆ.

ನಿನ್ನೆ ರಾಜ್ಯಪಾಲರನ್ನು ಭೇಟಿ ಮಾಡುವ ಕೆಲವೇ ಗಂಟೆಗಳ ಮೊದಲು 81ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ಕೋರ್ಟ್ ಮುಖ್ಯಮಂತ್ರಿ ಯಡಿಯೂರಪ್ಪ, ಸಹಕಾರ ಸಚಿವ ಎಸ್ ಟಿ ಸೋಮಶೇಖರ್, ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ ವೈ ವಿಜಯೇಂದ್ರ, ಯಡಿಯೂರಪ್ಪ ಅವರ ಮೊಮ್ಮಗ ಶಶಿಧರ್ ಮರಡಿ, ಅಳಿಯ ವಿರೂಪಾಕ್ಷಪ್ಪ ಯಮಕನಮರಡಿ ಮತ್ತು ಮಗಳ ಅಳಿಯ ಸಂಜಯ್ ಶ್ರೀ ಹೀಗೆ ಕುಟುಂಬಸ್ಥರ ವಿರುದ್ಧ ಕೋರ್ಟ್ ವಿಚಾರಣೆ ನಡೆಸಿತ್ತು. ಅದರ ತೀರ್ಪನ್ನು ನ್ಯಾಯಾಲಯ ಜುಲೈ 8ಕ್ಕೆ ಕಾಯ್ದಿರಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT