ಡಾ ಯತೀಂದ್ರ, ಸಿದ್ದರಾಮಯ್ಯ(ಸಂಗ್ರಹ ಚಿತ್ರ) 
ರಾಜಕೀಯ

'ಸಿದ್ದರಾಮಯ್ಯ ಯಾವುದೇ ತಪ್ಪು ಮಾಡಿಲ್ಲ, ಅವರ ನೇತೃತ್ವದಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರುತ್ತದೆ': ತಂದೆ ಪರ ಮಗ ಯತೀಂದ್ರ ಬ್ಯಾಟಿಂಗ್

ಜೆಡಿಎಸ್ ನಾಯಕ ಹೆಚ್ ಡಿ ಕುಮಾರಸ್ವಾಮಿಯವರು ಹೇಳಿದಂತೆ ಸಿದ್ದರಾಮಯ್ಯನವರು ಪಾಪ ಮಾಡಿಲ್ಲ, ಪಾಪದ ಕೊಡ ತುಂಬಿಲ್ಲ ಎಂದು ಅವರ ಪುತ್ರ ಶಾಸಕ ಡಾ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.

ಯಾದಗಿರಿ: ಜೆಡಿಎಸ್ ನಾಯಕ ಹೆಚ್ ಡಿ ಕುಮಾರಸ್ವಾಮಿಯವರು ಹೇಳಿದಂತೆ ಸಿದ್ದರಾಮಯ್ಯನವರು ಪಾಪ ಮಾಡಿಲ್ಲ, ಪಾಪದ ಕೊಡ ತುಂಬಿಲ್ಲ ಎಂದು ಅವರ ಪುತ್ರ ಶಾಸಕ ಡಾ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.

ತಮ್ಮ ತಂದೆ ಯಾವುದೇ ಪಾಪ ಮಾಡಿಲ್ಲ, ಸಿದ್ದರಾಮಯ್ಯ ತಾವಾಗಿ ಜೆಡಿಎಸ್ ಪಕ್ಷ ಬಿಡಲಿಲ್ಲ. ಜೆಡಿಎಸ್‌ನಲ್ಲಿ ಬೆಳೆಯುತ್ತಿದ್ದ ನಾಯಕರನ್ನು ಮೊಟಕುಗೊಳಿಸಲು ಉಚ್ಚಾಟನೆ ಮಾಡಲಾಯ್ತು. ಜೆಡಿಎಸ್‌ನಿಂದ ಹೊರಬಂದ ಮೇಲೆ ತಮ್ಮ ತಂದೆ ಸಿದ್ದರಾಮಯ್ಯ ಅವರಿಗೆ ತುಂಬಾ ಒಳ್ಳೆಯದೇ ಆಗಿದೆ. ಸಿಎಂ ಆದರು, ಈಗಲೂ ಒಳ್ಳೆಯದೇ ಆಗುತ್ತಿದೆ. ಜೆಡಿಎಸ್ ಪಕ್ಷ ತನ್ನ ನೆಲೆ ಕಳೆದುಕೊಳ್ಳಲಿದೆ ಎಂದು ವರುಣ ಕ್ಷೇತ್ರದ ಸೋಮೇಶ್ವರಪುರದಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿದ್ದಾರೆ.

ಮುಂದಿನ ವಿಧಾನಸಭೆ ಚುನಾವಣೆಯನ್ನು ಕಾಂಗ್ರೆಸ್ ಪಕ್ಷ ಸಿದ್ದರಾಮಯ್ಯನವರ ನೇತೃತ್ವದಲ್ಲಿ ಎದುರಿಸಲಿದ್ದು ಅಧಿಕಾರಕ್ಕೆ ಬರುತ್ತದೆ ಎನ್ನುವ ವಿಶ್ವಾಸವನ್ನು ಕೂಡ ಯತೀಂದ್ರ ಸಿದ್ದರಾಮಯ್ಯ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ವಿರುದ್ಧ ಯುದ್ಧ ಮಾಡಿದರೆ ಸೋಲು ಖಚಿತ: ಪಾಕಿಸ್ತಾನಕ್ಕೆ ಮಾಜಿ CIA ಅಧಿಕಾರಿ ಎಚ್ಚರಿಕೆ

Maharashtra: ಮಹಿಳಾ ಡಾಕ್ಟರ್ ಆತ್ಮಹತ್ಯೆ ಪ್ರಕರಣ, ಓರ್ವನ ಬಂಧನ; ಪ್ರಮುಖ ಆರೋಪಿಗಾಗಿ ಪೊಲೀಸರ ಶೋಧ!

'ನೀವು ನಡೆದು ಬಂದ ದಾರಿಯನ್ನು ಹಿಂತಿರುಗಿ ನೋಡಿ' ಶಿಷ್ಯರ ಬೀದಿ ಜಗಳ, ಕಿತ್ತಾಟಕ್ಕೆ ಬ್ರೇಕ್ ಹಾಕಲು ಎಂಟ್ರಿಯಾದ ಗುರು!

Kurnool Bus Fire- ಬಸ್ಸಿನ ಸೀಟುಗಳನ್ನು ಅಕ್ರಮವಾಗಿ ಸ್ಲೀಪರ್ ಕೋಚ್ ಆಗಿ ಮಾರ್ಪಡಿಸಲಾಗಿತ್ತು: ದಾಖಲೆಗಳಿಂದ ಬಹಿರಂಗ

ಸಚಿವ ಸ್ಥಾನ ತ್ಯಾಗಕ್ಕೆ ಸಿದ್ಧ: ಸಚಿವ ಕೃಷ್ಣ ಭೈರೇಗೌಡ ಅಚ್ಚರಿ ಹೇಳಿಕೆ !

SCROLL FOR NEXT