ಸಚಿವ ಮಾಧುಸ್ವಾಮಿ 
ರಾಜಕೀಯ

ಪ್ರಧಾನಿ ಮೋದಿಯವರನ್ನು ದೂರಿದರೆ ಒಳ್ಳೆಯದಾಗಲ್ಲ: ಸಚಿವ ಮಾಧುಸ್ವಾಮಿ

ಕೋವಿಡ್‌–19 ಲಸಿಕೆ ವಿಚಾರದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಟೀಕೆ ಮಾಡುವವರಿಗೆ ಒಳ್ಳೆಯದಾಗುವುದಿಲ್ಲ ಎಂದು ಸಣ್ಣ ನೀರಾವರಿ ಸಚಿವ ಜೆ.ಸಿ.ಮಾಧುಸ್ವಾಮಿಯನರು ಭಾನುವಾರ ಹೇಳಿದ್ದಾರೆ.

ಉಡುಪಿ: ಕೋವಿಡ್‌–19 ಲಸಿಕೆ ವಿಚಾರದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಟೀಕೆ ಮಾಡುವವರಿಗೆ ಒಳ್ಳೆಯದಾಗುವುದಿಲ್ಲ ಎಂದು ಸಣ್ಣ ನೀರಾವರಿ ಸಚಿವ ಜೆ.ಸಿ.ಮಾಧುಸ್ವಾಮಿಯನರು ಭಾನುವಾರ ಹೇಳಿದ್ದಾರೆ.

ಭಾನುವಾರ ‘ಹಡಿಲುಭೂಮಿ ಕೃಷಿ ಆಂದೋಲನ’ಕ್ಕೆ ಚಾಲನೆ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋವಿಡ್ ಲಸಿಕೆ ವಿಚಾರದಲ್ಲಿ ಪ್ರಧಾನಿ ಮೋದಿಯವರನ್ನು ದೂರಿದರೆ ಒಳ್ಳೆಯದಾಗಲ್ಲ. 80 ಕೋಟಿ ಜನರಿಗೆ ಉಚಿತ ಲಸಿಕೆ ಕೊಡುವುದು ಸುಲಭವಲ್ಲ. ಟೀಕೆ ಮಾಡಬೇಕು ಸರಿ, ಆದರೆ ಇದು ನೈಸರ್ಗಿಕ ವಿಪತ್ತು. ಎಲ್ಲರೂ ಒಟ್ಟಾಗಿ ಎದುರಿಸಬೇಕು ಎಂದು ಹೇಳಿದ್ದಾರೆ. 

ಕೋವಿಡ್ ಲಸಿಕೆಯನ್ನು ದಿಢೀರ್ ಉತ್ಪಾದನೆ ಮಾಡಲು ಆಗುವುದಿಲ್ಲ. ಅದಕ್ಕೂ ಸಮಯ ತೆಗೆದುಕೊಳ್ಳುತ್ತದೆ. ಆದರೆ ಕಾಂಗ್ರೆಸ್ ನವರು ವಿರೋಧ ಪಕ್ಷ ಇದೆ ಎಂದು ತೋರಿಸಲು ಟೀಕೆ ಮಾಡುತ್ತಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ. 

ಇದೇ ವೇಳೆ ರಮೇಶ್ ಜಾರಕಿಹೊಳಿ ಪತ್ರಿಕಾಗೋಷ್ಠಿ ವಿಚಾರವಾಗಿ ಮಾತನಾಡಿದ ಅವರು, ರಮೇಶ್ ಜಾರಕಿಹೊಳಿಯವರಿಗೆ ಪಕ್ಷದಿಂದ ತೊಂದರೆಯಾಗಿಲ್ಲ. ಅದೊಂದು ಆಕಸ್ಮಿಕವಾಗಿ ನಡೆದ ಘಟನೆ. ನೈತಿಕವಾಗಿ ಈಗಾಗಲೇ ರಾಜೀನಾಮೆ ನೀಡಿದ್ದಾರೆ. ಕಾನೂನಾತ್ಮಕವಾಗಿ ಶಿಕ್ಷೆ ಆಗಲಾರದು. ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಿಲ್ಲ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT