ಸಿದ್ದರಾಮಯ್ಯ 
ರಾಜಕೀಯ

'ಹಮಾರಾ ಕುತ್ತಾ ಹಮಾರೆ ಗಲ್ಲಿಮೇ ಶೇರ್': ಯಡಿಯೂರಪ್ಪ ವಿರುದ್ಧ ಸಿದ್ದು ವಾಗ್ದಾಳಿ!

ಹಮಾರಾ ಕುತ್ತಾ ಹಮಾರೆ ಗಲ್ಲಿಮೇ ಶೇರ್” ಎಂದು ನಾಣ್ನುಡಿಯನ್ನು ಉಲ್ಲೇಖಿಸುವ ಮೂಲಕ ವಿಪಕ್ಷ ನಾಯಕ ಸಿದ್ದರಾಮಯ್ಯ, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ದರ್ಪವೇನಿದ್ದರೂ ನಮ್ಮ ರಾಜ್ಯದಲ್ಲಿಯೇ ಹೊರತು ಕೇಂದ್ರದ ಮುಂದಾಗಲೀ ಪಿಎಂ ಮುಂದಾಗಲಿ ಅಲ್ಲ ಎಂದು ಹೇಳಿದ್ದಾರೆ.

ಬೆಂಗಳೂರು: ಹಮಾರಾ ಕುತ್ತಾ ಹಮಾರೆ ಗಲ್ಲಿಮೇ ಶೇರ್” ಎಂದು ನಾಣ್ನುಡಿಯನ್ನು ಉಲ್ಲೇಖಿಸುವ ಮೂಲಕ ವಿಪಕ್ಷ ನಾಯಕ ಸಿದ್ದರಾಮಯ್ಯ, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ದರ್ಪವೇನಿದ್ದರೂ ನಮ್ಮ ರಾಜ್ಯದಲ್ಲಿಯೇ ಹೊರತು ಕೇಂದ್ರದ ಮುಂದಾಗಲೀ ಪಿಎಂ ಮುಂದಾಗಲಿ ಅಲ್ಲ ಎಂದು ಹೇಳಿದ್ದಾರೆ.

ಬಸವನಗುಡಿಯಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಕರ್ನಾಟಕಕ್ಕೆ ದ್ರೋಹ ಮಾಡಿದ್ದಾರೆ. ಒಂದು ವೇಳೆ ನಾನು ಸಿಎಂ ಆಗಿದ್ದಿದ್ದರೆ ನಿರ್ಮಲಾ ಸೀತಾರಾಮನ್ ವಿರುದ್ಧ ಪ್ರತಿಭಟನೆ ಮಾಡುತ್ತಿದ್ದೆ. ಯಡಿಯೂರಪ್ಪ ಕೇಂದ್ರದ ಬಳಿ ಮಾತನಾಡುವುದೇ ಇಲ್ಲ. ಹಮಾರಾ ಕುತ್ತಾ ಹಮಾರಾ ಗಲ್ಲಿ ಮೇ ಶೇರ್ ಎನ್ನುತ್ತಾರಲ್ಲ ಹಾಗೆ ಇವರ ನಡೆ ಎಂದರು.

ಸರ್ಕಾರ ಕೊರೊನಾ ಸಂದರ್ಭದಲ್ಲಿ ಜನರ ಸಂಕಷ್ಟ ಬಗೆಹರಿಸುವ ಕೆಲಸ ಮಾಡಬೇಕಿತ್ತು. ಪ್ರತಿಯೊಬ್ಬರಿಗೂ 10 ಸಾವಿರ ರೂಪಾಯಿ ಕೊಡಿ ಎಂದು ಒತ್ತಾಯ ಮಾಡಿದ್ದೆವು. ನಮ್ಮ ಸರ್ಕಾರವಿದ್ದಿದ್ದರೆ 10 ಕೆಜಿ ಅಕ್ಕಿ ಕೊಡುತ್ತಿದ್ದೆವೆ. ಆದರೆ ಈಗ ಇವರು ಎರಡು ಕೆಜಿ ಅಕ್ಕಿ ಕೊಡುತ್ತಿದ್ದಾರೆ. ಹತ್ತು ಕೆಜಿ ಕೊಟ್ಟಿದ್ದರೆ ಇವರ ಗಂಟೇನಾದರೂ ಹೋಗುತ್ತಿತ್ತೇ? ಎಂದು ವಾಗ್ದಾಳಿ ನಡೆಸಿದರು.

ಇದೇ ವೇಳೆ ಸಂಸದ ತೇಜಸ್ವಿ ಸೂರ್ಯ ವಿರುದ್ಧ ವಾಗ್ದಾಳಿ ನಡೆಸಿದ ಸಿದ್ದರಾಮಯ್ಯ, ಅವನು ಸೂರ್ಯ ಅಲ್ಲ ಕತ್ತಲು, ರವಿ ಸುಬ್ರಮಣ್ಯ ಏನು ಮಾಡುತ್ತಿದ್ದಾರೆ ಎಂದು ನೀವು ಕೇಳಬೇಕು. ಈ ದೇಶದ ರಾಜಕೀಯ ಸೂರ್ಯ ಎಂದರೆ ಡಾ.ಅಂಬೇಡ್ಕರ್. ಇವನು ಸುಮ್ಮನೆ ಸೂರ್ಯ ಎಂದು ಹೆಸರಿಟ್ಟುಕೊಂಡಿದ್ದಾನೆ. ನೀವು ನನ್ನನ್ನ ಗೆಲ್ಲಿಸುತ್ತೇನೆ ಎಂದರೆ ಬಸವನಗುಡಿಗೆ ಬರುತ್ತೇನೆ. ಆ ರವಿಸುಬ್ರಹ್ಮಣ್ಯ, ಸೂರ್ಯನ್ನೇ ಗೆಲ್ಲಿಸುತ್ತೇನೆ. ಎಂದರೆ ಏನು ಮಾಡಲೀ? ಎಂದು ಮಾರ್ಮಿಕವಾಗಿ ನುಡಿದ ಸಿದ್ದರಾಮಯ್ಯ, ಡಾ.ಅಂಬೇಡ್ಕರ್ ಬರೆದ ಸಂವಿಧಾನ ಸುಟ್ಟುಹಾಕುವವರು, ಸಮಾಜ ಒಡೆಯುವವರು ಇವರು. ಜಾತಿ ನಡುವೆ ಜಗಳ ತಂದಿಡುತ್ತಾರೆ, ಚೆನ್ನಾಗಿದ್ರೆ ಸಹಿಸುವುದಿಲ್ಲ. ಬಿಜೆಪಿಯನ್ನು ಬೇರು ಸಹಿತ ಕಿತ್ತುಹಾಕುವುದು ಒಳ್ಳೆಯದು ಎಂದು ಕಿಡಿಕಾರಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

ಮನೆ ಮುಂದೆ ನಿಲ್ಲಿಸೋ ವಾಹನಗಳಿಗೆ ಪಾರ್ಕಿಂಗ್ ಶುಲ್ಕಕ್ಕೆ ರಾಮಲಿಂಗಾರೆಡ್ಡಿ ತೀವ್ರ ಆಕ್ಷೇಪ; CM ಡಿಕೆಶಿಗೆ ಪತ್ರ

'30 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ,ಇನ್ನು ಸಾಧ್ಯವಿಲ್ಲ': ನಿವೃತ್ತಿಯ ಸುಳಿವು ನೀಡಿದ ಕೇಂದ್ರ ಸಚಿವ ನಿತಿನ್ ಗಡ್ಕರಿ; ಹೊಸ ಪೀಳಿಗೆಗೆ ದಾರಿ ಮಾಡಿಕೊಡುವ ಇಂಗಿತ!