ಸಿದ್ದರಾಮಯ್ಯ 
ರಾಜಕೀಯ

ನಾನು ಚಾಮರಾಜಪೇಟೆಯ ಅಳಿಯ ಎಂದ ಸಿದ್ದರಾಮಯ್ಯ: ಅಧಿಕಾರದ ಲಾಲಸೆ ವಲಸೆರಾಮಯ್ಯರಿಗೆ ಪ್ರೇರಣೆ ಎಂದು ಬಿಜೆಪಿ ಲೇವಡಿ!

ಸ್ವ ಕ್ಷೇತ್ರ ಚಾಮುಂಡೇಶ್ವರಿಯ ಜನತೆಗೂ ಸಿದ್ದರಾಮಯ್ಯ ನ್ಯಾಯ ಒದಗಿಸಿಲ್ಲ, ಅತ್ತ ಬಾದಾಮಿ ಕ್ಷೇತ್ರದ ಜನತೆಯನ್ನೂ ಮರೆತು ಬಿಟ್ಟಿದ್ದಾರೆ. ಅಧಿಕಾರದ ಲಾಲಸೆ ಚಾಮರಾಜಪೇಟೆ ವಲಸೆಗೆ ಪ್ರೇರೆಪಿಸುತ್ತಿದೆ ಎಂದು ಬಿಜೆಪಿ ಟೀಕಿಸಿದೆ.

ಬೆಂಗಳೂರು: ಸ್ವ ಕ್ಷೇತ್ರ ಚಾಮುಂಡೇಶ್ವರಿಯ ಜನತೆಗೂ ಸಿದ್ದರಾಮಯ್ಯ ನ್ಯಾಯ ಒದಗಿಸಿಲ್ಲ, ಅತ್ತ ಬಾದಾಮಿ ಕ್ಷೇತ್ರದ ಜನತೆಯನ್ನೂ ಮರೆತು ಬಿಟ್ಟಿದ್ದಾರೆ. ಅಧಿಕಾರದ ಲಾಲಸೆ ಚಾಮರಾಜಪೇಟೆ ವಲಸೆಗೆ ಪ್ರೇರೆಪಿಸುತ್ತಿದೆ ಎಂದು ಬಿಜೆಪಿ ಟೀಕಿಸಿದೆ.

ಈ ಸಂಬಂಧ ಟ್ವೀಟ್ ಮಾಡಿರುವ ಬಿಜೆಪಿ, ರಾಜಕೀಯ ಜೀವನವೇ ‌ಅಂತ್ಯವಾಯಿತು ಎನ್ನುವಾಗ ಕೈಹಿಡಿದ ಬಾದಾಮಿ ಕ್ಷೇತ್ರವನ್ನೇ ಮರೆತುಬಿಟ್ಟ ಪಾಪ ನಿಮ್ಮನ್ನು ಕಾಡದೆ ಇರದು. ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಇಷ್ಟು ವರ್ಷ ಬಾರದ ಮಾವನ ಮನೆಯ ನೆನಪು ಇತ್ತೀಚೆಗೆ ಬಾರೀ ಕಾಡುತ್ತಿದೆ. ಮುಖ್ಯಮಂತ್ರಿಯಾಗಿದ್ದಾಗಲೂ ಬಾರದ ನೆನಪು ಈಗ ಬರುತ್ತಿರುವುದರ ಹಿಂದೆ ಸುರಕ್ಷಿತ ಕ್ಷೇತ್ರದಲ್ಲಿ ನೆಲೆಯೂರುವ ತವಕ ಎದ್ದು ಕಾಣುತ್ತಿದೆ ಎಂದು ಬಿಜೆಪಿ ವಾಗ್ದಾಳಿ ನಡೆಸಿದೆ.

ಚಾಮರಾಜಪೇಟೆ ಕಾರ್ಯಕ್ರಮದಲ್ಲಿ ನಾನು ಚಾಮರಾಜಪೇಟೆ ಅಳಿಯ. ಇಲ್ಲಿ ನನ್ನ ಮಾವನ ಮನೆಯಿತ್ತು, ಈಗಲೂ ಇದೆ, ಮನೆಯನ್ನು ಬಾಡಿಗೆಗೆ ಕೊಟ್ಟಿದ್ದಾರೆ, ಹೀಗಾಗಿ ನಾನು ಚಾಮರಾಜಪೇಟೆ ಅಳಿಯ ಎಂದು ಸಿದ್ದರಾಮಯ್ಯ ಕಾರ್ಯಕ್ರಮವೊಂದರಲ್ಲಿ ಹೇಳಿಕೆ ನೀಡಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಐವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT