ಮೊಹಮ್ಮದ್ ನಲಪಾಡ್ 
ರಾಜಕೀಯ

ಕಾಂಗ್ರೆಸ್ ಬೆಂಬಲಿಸಿ, ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಯಾಗುತ್ತಾರೆ, ನಿಮಗೆ ಸಹಾಯ ಮಾಡುತ್ತಾರೆ: ನಲಪಾಡ್

ಕಾಂಗ್ರೆಸ್ ನಲ್ಲಿ ಸಿದ್ದರಾಮಯ್ಯ ಬಣ ಮತ್ತು ಡಿ ಕೆ ಶಿವಕುಮಾರ್ ಬಣಗಳ ನಡುವಿನ ಕದನ, ಭಿನ್ನಮತ ಆಗಾಗ ಹೊರಬರುತ್ತಲೇ ಇದೆ. ತಮ್ಮ ನಾಯಕರು ಮುಖ್ಯಮಂತ್ರಿಯಾಗಬೇಕೆಂದು ಚುನಾವಣೆಗೆ ಇನ್ನೂ ಎರಡು ವರ್ಷವಿರುವಾಗಲೇ ಕಿತ್ತಾಟ ನಡೆಸುತ್ತಿದ್ದಾರೆ. ಅದೀಗ ಮತ್ತೊಮ್ಮೆ ಹೊರಬಂದಿದೆ.

ಉಡುಪಿ: ಕಾಂಗ್ರೆಸ್ ನಲ್ಲಿ ಸಿದ್ದರಾಮಯ್ಯ ಬಣ ಮತ್ತು ಡಿ ಕೆ ಶಿವಕುಮಾರ್ ಬಣಗಳ ನಡುವಿನ ಕದನ, ಭಿನ್ನಮತ ಆಗಾಗ ಹೊರಬರುತ್ತಲೇ ಇದೆ. ತಮ್ಮ ನಾಯಕರು ಮುಖ್ಯಮಂತ್ರಿಯಾಗಬೇಕೆಂದು ಚುನಾವಣೆಗೆ ಇನ್ನೂ ಎರಡು ವರ್ಷವಿರುವಾಗಲೇ ಕಿತ್ತಾಟ ನಡೆಸುತ್ತಿದ್ದಾರೆ. ಅದೀಗ ಮತ್ತೊಮ್ಮೆ ಹೊರಬಂದಿದೆ.

ನಿನ್ನೆ ಮತ್ತು ಮೊನ್ನೆ ಉಡುಪಿಯ ಮೀನುಗಾರರ ಬಳಿ ಬಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರ ಕಷ್ಟಗಳನ್ನು ಆಲಿಸಿದ್ದರು. ಇಂದು ಮೀನುಗಾರರನ್ನು ಭೇಟಿ ಮಾಡಿದ ಕಾಂಗ್ರೆಸ್ ಯುವ ನಾಯಕ ಮೊಹಮ್ಮದ್ ನಲಪಾಡ್ ಡಿ ಕೆ ಶಿವಕುಮಾರ್ ಕಾಂಗ್ರೆಸ್ ನಿಂದ ಮುಖ್ಯಮಂತ್ರಿಯಾಗುತ್ತಾರೆ ಎಂಬರ್ಥದಲ್ಲಿ ಮಾತನಾಡಿದ್ದಾರೆ.

ಮೀನುಗಾರರನ್ನು ಉದ್ದೇಶಿಸಿ ಮಾತನಾಡಿದ ಅವರು, ನಿಮಗೆಲ್ಲಾ ಡಿ ಕೆ ಶಿವಕುಮಾರ್ ಅವರು ಸಹಾಯ ಮಾಡುತ್ತಾರೆ, ಅದಕ್ಕೆ ನೀವು ಮಾಡಬೇಕಾಗಿರುವುದು ಕಾಂಗ್ರೆಸ್ ನ್ನು ಬೆಂಬಲಿಸುವುದು, ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ನ್ನು ಬೆಂಬಲಿಸಿ ಅಧಿಕಾರಕ್ಕೆ ತನ್ನಿ, ಆಗ ಡಿ ಕೆ ಶಿವಕುಮಾರ್ ಅವರು ಮುಖ್ಯಮಂತ್ರಿಯಾಗುತ್ತಾರೆ, ನಿಮಗೆ ಸಹಾಯ ಮಾಡುತ್ತಾರೆ ಎಂದರು.

ಇದಕ್ಕೆ ಸಿದ್ದರಾಮಯ್ಯ ಬಣ ಯಾವ ರೀತಿ ಪ್ರತಿಕ್ರಿಯಿಸುತ್ತದೆ ಎಂದು ಕಾದು ನೋಡಬೇಕಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ಮೊದಲ ಬಾರಿಗೆ ದಾಳಿ ಕುರಿತು ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

ಧರ್ಮಸ್ಥಳ ಪ್ರಕರಣ NIA ತನಿಖೆ ಮಾಡಿದರೆ ಆಕ್ಷೇಪವಿಲ್ಲ: ಸಚಿವ ಸತೀಶ್ ಜಾರಕಿಹೊಳಿ

ಭಾರತ- ಫಿಜಿ ರಕ್ಷಣಾ ಸಹಕಾರ ಕ್ರಿಯಾ ಯೋಜನೆ ಸಿದ್ಧ: ಇಂಡೋ ಪೆಸಿಫಿಕ್‌ ವಲಯದಲ್ಲಿ ಚೀನಾದ ಪ್ರಾಬಲ್ಯ ತಡೆಗೆ ಮಾಸ್ಟರ್ ಪ್ಲಾನ್!

SCROLL FOR NEXT