ಡಿಕೆ ಶಿವಕುಮಾರ್ 
ರಾಜಕೀಯ

ಕೋವಿಡ್ ವೇಳೆ ಅಸಮರ್ಪಕ ಕಾರ್ಯನಿರ್ವಹಣೆಯೇ ಸಂಪುಟದಿಂದ ಹರ್ಷವರ್ಧನ್ ಹೊರಬೀಳಲು ಕಾರಣ: ಡಿಕೆ ಶಿವಕುಮಾರ್

ಆರೋಗ್ಯ ಸಚಿವ ಹರ್ಷವರ್ದನ್ ಅವರು ಕೇಂದ್ರ ಸಚಿವ ಸಂಪುಟದಿಂದ ಹೊರ ಬಿದ್ದಿದ್ದು, ಕೋವಿಡ್ ಸಮಯದಲ್ಲಿ ಸರ್ಕಾರ ಸರಿಯಾಗಿ ನಿರ್ವಹಣೆ ಮಾಡಿಲ್ಲ ಎಂಬುದಕ್ಕೆ ಇದು ಬಹು ದೊಡ್ಡ ಸಾಕ್ಷಿಯಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ.

ದಕ್ಷಿಣ ಕನ್ನಡ: ಆರೋಗ್ಯ ಸಚಿವ ಹರ್ಷವರ್ದನ್ ಅವರು ಕೇಂದ್ರ ಸಚಿವ ಸಂಪುಟದಿಂದ ಹೊರ ಬಿದ್ದಿದ್ದು, ಕೋವಿಡ್ ಸಮಯದಲ್ಲಿ ಸರ್ಕಾರ ಸರಿಯಾಗಿ ನಿರ್ವಹಣೆ ಮಾಡಿಲ್ಲ ಎಂಬುದಕ್ಕೆ ಇದು ಬಹು ದೊಡ್ಡ ಸಾಕ್ಷಿಯಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ.

ಶಿರಶಿಯಲ್ಲಿ ಮಾತನಾಡಿದ ಅವರು, ಇದು ಕೇವಲ ಹರ್ಷವರ್ಧನ್ ಅವರೊಬ್ಬರ ಜವಾಬ್ದಾರಿ ಅಲ್ಲ, ಕೇಂದ್ರ ಹಾಗೂ ರಾಜ್ಯ ಸರ್ಕಾರ ಎರಡೂ ಈ ಜವಾಬ್ದಾರಿ ಹೊರಬೇಕು. ಜನರಿಗೆ ಆಗಿರುವ ನೋವಿಗೆ ಸ್ಪಂದಿಸಬೇಕು ಎಂದರು.

ನಮ್ಮ ರಾಜ್ಯದಲ್ಲಿ ಕೊರೋನಾ ಸಮಯದಲ್ಲಿ ಜನ ಬಹಳ ನೋವು ಅನುಭವಿಸಿದ್ದಾರೆ. ಅದರ ನಡುವೆ ರಾಜ್ಯ ಹಾಗೂ ಕೇಂದ್ರದಲ್ಲಿ ಬೆಲೆ ಏರಿಕೆಯಿಂದ ಎಲ್ಲರಿಗೂ ವಿಪರೀತ ತೊಂದರೆಯಾಗುತ್ತಿದೆ. ಸರ್ಕಾರದ ಅಧಿಕೃತ ಮಾಹಿತಿ ಪ್ರಕಾರ ಈ ಜಿಲ್ಲೆಯಲ್ಲಿ 711 ಜನ ಸತ್ತಿದ್ದಾರೆ. 51,902 ಜನ ಆಸ್ಪತ್ರೆ ಸೇರಿದ್ದಾರೆ. ಇನ್ನು ಹಲವರು ಮನೆಯಲ್ಲೇ ಮೃತಪಟ್ಟಿದ್ದಾರೆ. ಹೀಗಾಗಿ ಇವರ   ಮಾಹಿತಿ ಸಂಗ್ರಹಿಸಲು, ಕೋವಿಡ್ ಸಂತ್ರಸ್ತರಿಗೆ ಸರ್ಕಾರದಿಂದ ಪರಿಹಾರ ದೊರೆಯುವಂತೆ ಮಾಡಲು ನಮ್ಮ ಕಾರ್ಯಕರ್ತರು
ಪ್ರಯತ್ನಿಸುತ್ತಾರೆ. ಈ ಮಧ್ಯೆ 3 ಲಕ್ಷಕ್ಕೂ ಹೆಚ್ಚು ಜನ  ಸತ್ತಿದ್ದು, ಸರ್ಕಾರ ಕೇವಲ 30 ಸಾವಿರ ಎಂದು ಅಂಕಿ-ಅಂಶದಲ್ಲಿ ತೋರಿಸುತ್ತಿದೆ. ಕೋವಿಡ್ ನಿಂದ ಸತ್ತ ಎಲ್ಲರಿಗೂ ಹೈಕೋರ್ಟ್ ನಿಗದಿ ಮಾಡುವ ಪರಿಹಾರ ಸಿಗುವಂತಾಗಬೇಕು.

ಸರ್ಕಾರದ ಎಲ್ಲ ಅಧಿಕಾರಿಗಳು ಮನೆ, ಮನೆಗೂ ಹೋಗಬೇಕು, ಕೋವಿಡ್ ಸಂದರ್ಭದಲ್ಲಿ ರೈತರು, ಕಾರ್ಮಿಕರು, ಸಂಪ್ರಾದಾಯಿಕ ವೃತ್ತಿದಾರರಿಗೆ ಆಗಿರುವ ನಷ್ಟದ ಬಗ್ಗೆ ಮಾಹಿತಿ ಕಲೆ ಹಾಕಬೇಕು. ನಾವು ನಮ್ಮ ಕೆಲಸ ಮಾಡುತ್ತೇವೆ. ಸರ್ಕಾರ ಕೂಡ ಅಧಿಕಾರಿಗಳ ಮೂಲಕ ಈ ಬಗ್ಗೆ ಮಾಹಿತಿ ಕಲೆ ಹಾಕಬೇಕು ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT