ಈಶ್ವರಪ್ಪ 
ರಾಜಕೀಯ

ತಾಲೂಕು ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆ ಮೀಸಲಾತಿ: ಈಶ್ವರಪ್ಪ ಅಸಮಾಧಾನ

ತಾಲೂಕು ಮತ್ತು ಜಿಲ್ಲಾ ಪಂಚಾಯತ್ ಚುನಾವಣೆಯಲ್ಲಿ ಮೀಸಲಾತಿ ನಿಗದಿಗೆ ಸಂಬಂಧಿಸಿದಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್ ಈಶ್ವರಪ್ಪ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕಲಬುರಗಿ: ತಾಲೂಕು ಮತ್ತು ಜಿಲ್ಲಾ ಪಂಚಾಯತ್ ಚುನಾವಣೆಯಲ್ಲಿ ಮೀಸಲಾತಿ ನಿಗದಿಗೆ ಸಂಬಂಧಿಸಿದಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್ ಈಶ್ವರಪ್ಪ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕಲಬುರಗಿಯಲ್ಲಿ ಮಾತನಾಡಿದ ಅವರು, ಇದೊಂದು ಆತುರದ ನಿರ್ಧಾರವಾಗಿದೆ. ಜನ ಪ್ರತಿನಿಧಿಯಾಗಿ ಇದು ನನ್ನ ವಯಕ್ತಿಕ ಅಭಿಪ್ರಾಯವೇ ಹೊರತು ಸಚಿವನಾಗಿ ಅಲ್ಲ ಎಂದು ಹೇಳಿದ್ದಾರೆ.

ಡಿಸೆಂಬರ್ ವರೆಗೆ ಚುನಾವಣೆಯನ್ನು ಮುಂದೂಡಬೇಕೆಂದು ಸರ್ಕಾರ ರಾಜ್ಯ ಚುನಾವಣಾ ಆಯೋಗಕ್ಕೆ ಮನವಿ ಮಾಡಿತ್ತು, ಆದರೆ ಇದ್ದಕ್ಕಿದ್ದಂತೆ,  ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗಳಿಗೆ ಮೀಸಲಾತಿ ವಿಭಾಗಗಳನ್ನು ಘೋಷಿಸಲಾಗಿದೆ ಎಂದು ಅವರು ಹೇಳಿದರು.

ರಾಜ್ಯ ಚುನಾವಣಾ ಆಯೋಗದ ನಡೆಯನ್ನು ಪ್ರಶ್ನಿಸಿದ ಈಶ್ವರಪ್ಪ ಸರ್ಕಾರ ಆಯೋಗದ ಜೊತೆ ಸಹಕಾರದಿಂದ ವರ್ತಿಸುವುದು ಎಂದು ತಿಳಿಸಿದ್ದಾರೆ. ರಾಜಕೀಯ ಪಕ್ಷವಾಗಿ ಬಿಜೆಪಿ ಚುನಾವಣೆ ಎದುರಿಸಲು ಸಿದ್ಧವಾಗಿದೆ ಹಾಗೂ ತಾಲೂಕು ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆಗಳಲ್ಲಿ ಗೆಲುವು ಸಾಧಿಸಲಿದೆ ಎಂದು ತಿಳಿಸಿದ್ದಾರೆ.

ಸದಾನಂದಗೌಡ ರಾಜಿನಾಮೆ ಬಗ್ಗೆ ಪ್ರಶ್ನೆಗೆ ಉತ್ತರಿಸಿದ ಈಶ್ವರಪ್ಪ, ಗೌಡರು ಪಕ್ಷದ ನಿಷ್ಠಾವಂತ ಕಾರ್ಯಕರ್ತರು. ನಿಜವಾದ ಕಾರ್ಯಕರ್ತರು ಅಧಿಕಾರ ಕೇಳುವುದಿಲ್ಲ, ಅವರು ಪಾರ್ಟಿಗೆ ವಿಧೇಯರಾಗಿರುತ್ತಾರೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮ ಕಡೆಯಿಂದ ವೈಮಾನಿಕ ದಾಳಿ ಇರುವುದಿಲ್ಲ: 5 ವರ್ಷಗಳಲ್ಲಿ ಮೊದಲ ಬಾರಿಗೆ ಕದನ ವಿರಾಮ ಪ್ರಸ್ತಾಪಿಸಿದ ಯುಕ್ರೇನ್ ಅಧ್ಯಕ್ಷ Zelensky

ಡ್ರಗ್ಸ್ ಸೇವನೆ ದೃಢ: ಫುಕೆಟ್- ದೆಹಲಿ ಏರ್ ಇಂಡಿಯಾ ವಿಮಾನದ ಮುಖ್ಯ ಪೈಲಟ್ ವಜಾ!

Video: 'ಪೊಲೀಸರು ಬುದ್ದಿ ಕಲಿಸಿದ್ದಾರೆ, ತಪ್ಪನ್ನ ಕ್ಷಮಿಸಲ್ಲ'; ಮಗ ಸಾಮ್ರಾಟ್‌ ಬಗ್ಗೆ ಕೊನೆಗೂ ಮೌನ ಮುರಿದ ನಟ Duniya Vijay

‘ಹೂತುಹಾಕಬೇಕು ಎನ್ನುವವರಲ್ಲ ನಾವು’.. ‘ಮಹಿಳೆಯರಿಗೆ ಶಿಕ್ಷಣ, ಅವಕಾಶ ನೀಡುತ್ತಿದ್ದೇವೆ’: ‘ಮನೆಯಲ್ಲೇ ಇರಬೇಕು’ ಹೇಳಿಕೆಗೆ ಮುಸ್ಲಿಂ ಧರ್ಮಗುರು ಸ್ಪಷ್ಟನೆ, Video

ಜಮ್ಮು-ಕಾಶ್ಮೀರ: ಬುಡ್ಗಾಮ್‌ ಎನ್ ಕೌಂಟರ್ ನಲ್ಲಿ ಉಗ್ರನ ಹತ್ಯೆ; AK ರೈಫಲ್ ಮತ್ತಿತರ ಶಸ್ತ್ರಾಸ್ತ್ರಗಳು ವಶ!