ನಿಖಿಲ್ ಕುಮಾರಸ್ವಾಮಿ 
ರಾಜಕೀಯ

ಸಂಸದೆ ಸುಮಲತಾ ಅವರಿಗೆ ರಾಜಕೀಯ ಅನುಭವದ ಕೊರತೆಯಿದೆ: ನಿಖಿಲ್ ಕುಮಾರಸ್ವಾಮಿ 

ಸಂಸದೆ ಸುಮಲತಾ ಅವರು ವೈಯಕ್ತಿಕ ಲಾಭಕ್ಕೆ ಇನ್ನೊಬ್ಬರನ್ನು ಟೀಕಿಸುವುದನ್ನು ಬಿಟ್ಟು ಮಂಡ್ಯ ಜನತೆಯ ಋಣ ತೀರಿಸುವ ಕೆಲಸ ಮಾಡಲಿ ಎಂದು ಜೆಡಿಎಸ್ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದಾರೆ.

ಕೋಲಾರ: ಸಂಸದೆ ಸುಮಲತಾ ಅವರು ವೈಯಕ್ತಿಕ ಲಾಭಕ್ಕೆ ಇನ್ನೊಬ್ಬರನ್ನು ಟೀಕಿಸುವುದನ್ನು ಬಿಟ್ಟು ಮಂಡ್ಯ ಜನತೆಯ ಋಣ ತೀರಿಸುವ ಕೆಲಸ ಮಾಡಲಿ ಎಂದು ಜೆಡಿಎಸ್ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದಾರೆ.

ಕಳೆದೆರಡು ದಿನಗಳಿಂದ ಕೆಆರ್ ಎಸ್ ಜಲಾಶಯ ಮತ್ತು ಸುತ್ತಮುತ್ತ ಅಕ್ರಮ ಗಣಿಗಾರಿಕೆ ಬಗ್ಗೆ ಜೆಡಿಎಸ್ ನಾಯಕ ಹೆಚ್ ಡಿ ಕುಮಾರಸ್ವಾಮಿ ಮತ್ತು ಸಂಸದೆ ಸುಮಲತಾ ನಡುವೆ ತೀವ್ರ ವಾಗ್ದಾಳಿ ನಡೆಯುತ್ತಿದೆ.

ಈ ಬಗ್ಗೆ ಇಂದು ಕೋಲಾರ ಜಿಲ್ಲೆಯ ಕೊಂಡರಾಜನಹಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಪ್ರತಿಕ್ರಿಯಿಸಿದ ನಿಖಿಲ್ ಕುಮಾರಸ್ವಾಮಿ, ಕೆಆರ್ ಎಸ್ ಜಲಾಶಯಕ್ಕೆ ಭವ್ಯ ಇತಿಹಾಸವಿದೆ, ಮೈಸೂರು ಮಹಾರಾಜರು ಒಡವೆ ಅಡವಿಟ್ಟು ಸರ್ ಎಂ ವಿಶ್ವೇಶ್ವರಯ್ಯನವರ ತಾಂತ್ರಿಕ ಕೌಶಲ್ಯದಲ್ಲಿ ಅಣೆಕಟ್ಟು ಕಟ್ಟಿಸಿದ್ದಾರೆ. ಜಲಾಶಯ ಬಿರುಕುಬಿಟ್ಟಿದ್ದರೆ ತಾಂತ್ರಿಕ ತಜ್ಞರು, ಅಧಿಕಾರಿಗಳು ಹೇಳಬೇಕಿತ್ತು, ಸರ್ಕಾರ ಅದನ್ನು ಗಣನೆಗೆ ತೆಗೆದುಕೊಳ್ಳಬೇಕಿತ್ತು. ಆದರೆ ಸಂಸದೆ ಸುಮಲತಾ ಅವರು ಜಲಾಶಯ ಬಿರುಕು ಬಿಟ್ಟಿದೆ ಎಂದು ಹೇಳಿ ಅಲ್ಲಿನ ಜನರಲ್ಲಿ ಆತಂಕ, ಗೊಂದಲ ಸೃಷ್ಟಿಸುತ್ತಿದ್ದಾರೆ. ಜಲಾಶಯ ಸುತ್ತಮುತ್ತ ಅಕ್ರಮ ಗಣಿಗಾರಿಕೆ ನಡೆಸುತ್ತಿರುವವರು ಎಷ್ಟೇ ಪ್ರಭಾವಿಗಳಾಗಿದ್ದರೂ ಸರ್ಕಾರ ಕ್ರಮ ಕೈಗೊಳ್ಳಲಿ ಎಂದರು.

ಸುಮಲತಾ ಅವರು ನನ್ನ ತಮ್ಮ ಪ್ರಜ್ವಲ್ ರೇವಣ್ಣರನ್ನು ಹೊಗಳಿ ರಾಜಕೀಯ ಸರ್ಟಿಫಿಕೇಟ್ ಕೊಟ್ಟಿದ್ದಾರೆ, ಕೊಡಲಿ ಅವರಿಗೆ ಅಭಿನಂದನೆ, ನಾನು ಮಂಡ್ಯದಲ್ಲಿ ಸೋತಿದ್ದರೂ ಐದೂವರೆ ಲಕ್ಷ ಜನ ನನಗೂ ಮತ ಹಾಕಿದ್ದರು. ಚುನಾವಣೆಯಲ್ಲಿ ಸೋಲು-ಗೆಲುವು ಸಾಮಾನ್ಯ, ಚುನಾವಣೆಯಲ್ಲಿ ಗೆದ್ದಿರುವ ಸುಮಲತಾ ಅವರು ವೈಯಕ್ತಿಕ ಟೀಕೆ, ಆರೋಪದಲ್ಲಿ ಕಾಲಹರಣ ಮಾಡುತ್ತಿದ್ದಾರೆ, ಅವರಿಗೆ ರಾಜಕೀಯ ಅನುಭವ ಕಡಿಮೆಯಿದೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

SCROLL FOR NEXT