ವಿಶ್ವನಾಥ್ 
ರಾಜಕೀಯ

ಕೆಆರ್'ಎಸ್ ಅಣೆಕಟ್ಟು ಬಿರುಕು ವಿಚಾರ: ತಾಂತ್ರಿಕ ಸಮಿತಿ ಅಧ್ಯಯನಕ್ಕೆ ಎಂಎಲ್'ಸಿ ಎಹೆಚ್ ವಿಶ್ವನಾಥ್ ಆಗ್ರಹ

ಕೆಆರ್‍ಎಸ್ ಅಣೆಕಟ್ಟು ಕನ್ನಡಿಗರ ಅಸ್ಮಿತೆ ಹಾಗಾಗಿ ಕೂಡಲೇ ತಾಂತ್ರಿಕ ಸಮಿತಿಯ ತಂಡವನ್ನು ಸ್ಥಳಕ್ಕೆ ರವಾನಿಸಿ ಎಲ್ಲವನ್ನೂ ಪರಿಶೀಲನೆ ನಡೆಸಿ, ಅಣೆಕಟ್ಟು ಸುರಕ್ಷಿತವಾಗಿದೆಯೇ ಎಂಬುದರ ಬಗ್ಗೆ ಜನರಿಗೆ ಸ್ಪಷ್ಟನೆ ನೀಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಅವರು ಆಗ್ರಹಿಸಿದ್ದಾರೆ.

ಮೈಸೂರು: ಕೆಆರ್‍ಎಸ್ ಅಣೆಕಟ್ಟು ಕನ್ನಡಿಗರ ಅಸ್ಮಿತೆ ಹಾಗಾಗಿ ಕೂಡಲೇ ತಾಂತ್ರಿಕ ಸಮಿತಿಯ ತಂಡವನ್ನು ಸ್ಥಳಕ್ಕೆ ರವಾನಿಸಿ ಎಲ್ಲವನ್ನೂ ಪರಿಶೀಲನೆ ನಡೆಸಿ, ಅಣೆಕಟ್ಟು ಸುರಕ್ಷಿತವಾಗಿದೆಯೇ ಎಂಬುದರ ಬಗ್ಗೆ ಜನರಿಗೆ ಸ್ಪಷ್ಟನೆ ನೀಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಅವರು ಆಗ್ರಹಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಕೆಆರ್‍ಎಸ್ ಡ್ಯಾಂ ಬಿರುಕು ಬಿಟ್ಟಿರುವ ಕುರಿತು ತಜ್ಞರು ಹೇಳಬೇಕು. ಆದರೆ ಈ ವಿಚಾರವಾಗಿ ರಾಜಕೀಯ ಮಾಡುವುದು ಬೇಡ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಕೆಆರ್‍ಎಸ್ ಅಣೆಕಟ್ಟೆ ಕಟ್ಟಿದ್ದರೆ ಈಗಾಗಲೇ ಬಿದ್ದು ಹೋಗುತ್ತಿತ್ತು. ರಾಜಪ್ರಭುತ್ವದಲ್ಲಿ ನಿರ್ಮಾಣ ಮಾಡಿರುವುದಕ್ಕೆ ಇನ್ನೂ ಚೆನ್ನಾಗಿದೆ. ಅದರೊಂದಿಗೆ ನಮಗೆ ಭಾವನಾತ್ಮಕ ಸಂಬಂಧ ಇದೆ ಎಂದು ಹೇಳಿದ್ದಾರೆ. 

ಕೆಆರ್‍ಎಸ್ ವಿಚಾರವಾಗಿ ಇಷ್ಟೊತ್ತಿಗೆ ಸಿಎಂ ಅವರೇ ಸ್ಪಷ್ಟನೆ ನೀಡಿ, ಜನರ ಆತಂಕ ನಿವಾರಣೆ ಮಾಡಬೇಕಿತ್ತು. ಆದರೆ, ಅವರು ಸುಮ್ಮನಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರು ಏನು ಮಾಡುತ್ತಿದ್ದಾರೆ? ಕೆಆರ್ಎಸ್ ಅಣೆಕಟ್ಟು ಸುತ್ತಮುತ್ತ ಅಕ್ರಮ ಗಣಿಗಾರಿಕೆ ನಡೆಯುತ್ತಿರುವ ಬಗ್ಗೆ ಸರ್ಕಾರ ಸ್ಪಷ್ಟನೆ ನೀಡಬೇಕು. ಅಕ್ರಮ ಗಣಿಗಾರಿಕೆ ನಡೆಯುತ್ತಿದ್ದರೆ, ಅದನ್ನು ಶಾಶ್ವತವಾಗಿ ನಿಲ್ಲಿಸಬೇಕು ಎಂದು ಒತ್ತಾಯಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT