ರಂದೀಪ್ ಸಿಂಗ್ ಸುರ್ಜೆವಾಲಾ 
ರಾಜಕೀಯ

ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ತೊರೆಯಲು ರಂದೀಪ್ ಸಿಂಗ್ ಸುರ್ಜೆವಾಲಾ ಇಚ್ಛೆ?: ಕೇಳಿಬರುತ್ತಿದೆ ಹೀಗೊಂದು ವದಂತಿ!

ಕರ್ನಾಟಕ ರಾಜ್ಯದ ಕಾಂಗ್ರೆಸ್ ಉಸ್ತುವಾರಿಯಾಗಿ ರಂದೀಪ್ ಸಿಂಗ್ ಸುರ್ಜೆವಾಲಾ ಮುಂದುವರಿಯುವುದು ಸಂಶಯವಾಗಿದೆ. 

ಬೆಂಗಳೂರು: ಕರ್ನಾಟಕ ರಾಜ್ಯದ ಕಾಂಗ್ರೆಸ್ ಉಸ್ತುವಾರಿಯಾಗಿ ರಂದೀಪ್ ಸಿಂಗ್ ಸುರ್ಜೆವಾಲಾ ಮುಂದುವರಿಯುವುದು ಸಂಶಯವಾಗಿದೆ. 

ವೈಯಕ್ತಿಕ ಕಾರಣಗಳಿಂದ ತಮ್ಮ ತವರು ರಾಜ್ಯ ಹರ್ಯಾಣದ ಕಾಂಗ್ರೆಸ್ ಉಸ್ತುವಾರಿ ಕೊಡಿ ಎಂದು ಹೈಕಮಾಂಡ್ ಬಳಿ ರಂದೀಪ್ ಸುರ್ಜೆವಾಲಾ ಕೇಳಿದ್ದಾರೆ ಎಂಬ ವದಂತಿಗಳು ಕೇಳಿಬರುತ್ತಿವೆ. ಬೆಂಗಳೂರಿಗೆ ಬಂದು ಹೋಗುವುದು ಕಷ್ಟವಾಗಿದ್ದು ದೆಹಲಿಗೆ ಸಮೀಪದ ರಾಜ್ಯದಲ್ಲಿಯೇ ತಮಗೆ ಉಸ್ತುವಾರಿ ಕೊಡಿ ಎಂದು ರಂದೀಪ್ ಕೇಳುತ್ತಿದ್ದಾರೆ ಎಂಬ ಸುದ್ದಿಗಳು ಬರುತ್ತಿದ್ದು ಆದರೆ ಇದು ದೃಢಪಟ್ಟಿಲ್ಲ, ಕೇವಲ ವದಂತಿಯಷ್ಟೆ.

ಅನಾರೋಗ್ಯ ಕಾರಣದಿಂದ ದೀರ್ಘ ಪ್ರಯಾಣ ದೃಷ್ಟಿಯಿಂದ ಕರ್ನಾಟಕ ಉಸ್ತುವಾರಿ ಬೇಡ ಎಂದು ರಂದೀಪ್ ಕೇಳುತ್ತಿದ್ದಾರೆ ಎಂಬ ಮಾಹಿತಿ ಬಂದಿದ್ದು ಈ ಬಗ್ಗೆ ಅವರಿಂದಲಾಗಲಿ, ಕಾಂಗ್ರೆಸ್ ಹೈಕಮಾಂಡ್ ನಿಂದಾಗಲಿ ಮಾಹಿತಿ ಬಂದಿಲ್ಲ. ರಾಹುಲ್ ಗಾಂಧಿಯವರಿಗೆ ಆಪ್ತರಾಗಿರುವ ಸುರ್ಜೆವಾಲಾ ಎಐಸಿಸಿಯ ಮಾಧ್ಯಮ ವಿಭಾಗದ ಉಸ್ತುವಾರಿಯನ್ನು ಕಳೆದ 5 ವರ್ಷಗಳಿಂದ ಹೊತ್ತುಕೊಂಡಿದ್ದಾರೆ.

ಹರ್ಯಾಣ ವಿಧಾನಸಭೆ ಚುನಾವಣೆ 2024ರಲ್ಲಿ ನಡೆಯಲಿದೆ. ಅದಕ್ಕೂ ಮುನ್ನ ರಾಜ್ಯದಲ್ಲಿ ರಾಜಕೀಯವಾಗಿ ಭದ್ರ ನೆಲೆ ಕಂಡುಕೊಳ್ಳುವ ಇಂಗಿತವನ್ನು ಸುರ್ಜೆವಾಲಾ ಹೊಂದಿದ್ದಾರೆ. ಇದನ್ನು ಕಾಂಗ್ರೆಸ್ ನಾಯಕರೊಬ್ಬರೇ ಹೇಳುತ್ತಾರೆ. 10 ತಿಂಗಳ ಹಿಂದೆ ಕರ್ನಾಟಕ ರಾಜ್ಯ ಉಸ್ತುವಾರಿ ನೇಮಕಗೊಂಡ ಸುರ್ಜೆವಾಲಾ ಅವರಿಗಿಂತ ಮೊದಲು ಕೆ ಸಿ ವೇಣುಗೋಪಾಲ್ ಉಸ್ತುವಾರಿ ವಹಿಸಿಕೊಂಡಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT