ಸಚಿವ ಸಿ ಪಿ ಯೋಗೇಶ್ವರ್ 
ರಾಜಕೀಯ

ಯಾವುದೂ ಶಾಶ್ವತವಲ್ಲ, ನಾವೇನು ಶಾಶ್ವತವಾಗಿ ಮಂತ್ರಿಗಳಾಗಿ ಇರುವುದಿಲ್ಲ, ಸಿಎಂ ಹೇಳಿಕೆಗೆ ಪ್ರತಿಕ್ರಿಯಿಸಲಾರೆ: ಸಿ.ಪಿ. ಯೋಗೇಶ್ವರ್

ರಾಜ್ಯ ರಾಜಕೀಯದಲ್ಲಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರ ಬದಲಾವಣೆ ಸುದ್ದಿ ಭಾರೀ ಸದ್ದು ಮಾಡುತ್ತಿದೆ. ಜುಲೈ 26ಕ್ಕೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಎರಡು ವರ್ಷಗಳಾಗುತ್ತಿದ್ದು ಅಂದೇ ಬಿಎಸ್ ವೈ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂದು ವದಂತಿ ದಟ್ಟವಾಗಿದೆ.

ನಂದಿಬೆಟ್ಟ(ಚಿಕ್ಕಬಳ್ಳಾಪುರ): ರಾಜ್ಯ ರಾಜಕೀಯದಲ್ಲಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರ ಬದಲಾವಣೆ ಸುದ್ದಿ ಭಾರೀ ಸದ್ದು ಮಾಡುತ್ತಿದೆ. ಜುಲೈ 26ಕ್ಕೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಎರಡು ವರ್ಷಗಳಾಗುತ್ತಿದ್ದು ಅಂದೇ ಬಿಎಸ್ ವೈ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂದು ವದಂತಿ ದಟ್ಟವಾಗಿದೆ.

ಈ ಮಧ್ಯೆ ಇಂದು ನಂದಿಬೆಟ್ಟದ ತಪ್ಪಲಿನಲ್ಲಿ ಹೇಳಿಕೆ ನೀಡಿರುವ ಸಚಿವ ಸಿ ಪಿ ಯೋಗೇಶ್ವರ್, ಯಾರಿಗೆ ಯಾವುದೂ ಶಾಶ್ವತವಲ್ಲ, ನಾವು ಕೂಡ ಶಾಶ್ವತವಾಗಿ ಮಂತ್ರಿಗಳಾಗಿ ಇರುವುದಿಲ್ಲ, ಸಾರ್ವಜನಿಕ ಜೀವನದಲ್ಲಿ ಅವಕಾಶಗಳು ಸಿಕ್ಕಿದಾಗ ಬಳಸಿಕೊಂಡು ಹೋಗಬೇಕಷ್ಟೆ. ನಿನ್ನೆ ಸ್ವತಃ ಮುಖ್ಯಮಂತ್ರಿಗಳೇ ಮಾಧ್ಯಮಗಳ ಮುಂದೆ ಹೇಳಿಕೆ ನೀಡಿದ್ದಾರೆ. ಅವರ ಹೇಳಿಕೆಗೆ ನನ್ನದೇನು ಅಭಿಪ್ರಾಯವಿಲ್ಲ. ಹೈಕಮಾಂಡ್ ಎಲ್ಲವನ್ನೂ ತೀರ್ಮಾನಿಸಲಿದೆ ಎಂದು ಹೇಳಿದ್ದಾರೆ.

ಮುಖ್ಯಮಂತ್ರಿ ಯಡಿಯೂರಪ್ಪನವರು ಹಿರಿಯರಿದ್ದಾರೆ, ಅವರು ನೀಡುವ ಹೇಳಿಕೆಗೆ ಅನುಗುಣವಾಗಿ ತೀರ್ಮಾನ ತೆಗೆದುಕೊಳ್ಳುತ್ತಾರೆ, ಅವರೇ ಸ್ಪಷ್ಟಪಡಿಸುತ್ತಾರೆ, ಈ ಬಗ್ಗೆ ನನಗೇನು ಮಾಹಿತಿಯಿಲ್ಲ, ನಾನೇನು ಹೇಳುವುದಿಲ್ಲ ಎಂದರು.

ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಮಾತನಾಡಿ ಸಚಿವ ಸಿ ಪಿ ಯೋಗೇಶ್ವರ್ ಸುದ್ದಿಯಾಗಿದ್ದರು. ಇದೀಗ ಪೂರಕ ವಾತಾವರಣ ನಿರ್ಮಾಣವಾಗಿದೆ ಎನಿಸುತ್ತಿದೆಯೇ ಎಂದು ಕೇಳಿದಾಗ ಅಂದು ನನ್ನ ಸಮಸ್ಯೆ ಬಗ್ಗೆ ನಾನು ಹೇಳಿಕೊಂಡಿದ್ದೆ ಅಷ್ಟೆ, ನಾಯಕತ್ವ ಬದಲಾವಣೆ ಬಗ್ಗೆ ನನಗೇನು ಸ್ಪಷ್ಟ ಮಾಹಿತಿಯಿಲ್ಲ, ಮಾಹಿತಿಯಿಲ್ಲದೆ ನಾನು ಏನೂ ಮಾತನಾಡುವುದಿಲ್ಲ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT