ರಾಜಕೀಯ

ಬಿಜೆಪಿ ನನಗೆ ಎಲ್ಲ ಹುದ್ದೆಗಳನ್ನೂ ನೀಡಿದೆ, ಈಗ ಹೈಕಮಾಂಡ್ ನಿರ್ಧಾರಕ್ಕೆ ಬದ್ಧ: ಯಡಿಯೂರಪ್ಪ 

Srinivas Rao BV

ಬೆಳಗಾವಿ: ಬಿಜೆಪಿ ನನಗೆ ಎಲ್ಲವನ್ನೂ ನೀಡಿದೆ. ಈಗ ಹೈಕಮಾಂಡ್ ನಿರ್ಧಾರಕ್ಕೆ ತಾವು ಬದ್ಧನಾಗಿರುವುದಾಗಿ ಸಿಎಂ ಯಡಿಯೂರಪ್ಪ ತಿಳಿಸಿದ್ದಾರೆ. 

ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್ ಶಾ, ಜೆಪಿ ನಡ್ಡಾ  ಅವರಿಗೆ ಕೃತಜ್ಞತೆಯನ್ನು ವ್ಯಕ್ತಪಡಿಸಿರುವ ಯಡಿಯೂರಪ್ಪ, "ನಾನು ಬಿಜೆಪಿಯಲ್ಲಿ ಎಲ್ಲಾ ಹುದ್ದೆಗಳನ್ನೂ ಪಡೆದಿದ್ದೇನೆ. ರಾಜ್ಯದಲ್ಲಿ ಬೇರೆ ಯಾವುದೇ ನಾಯಕರಿಗಿಂತಲೂ ಹೆಚ್ಚಿನ ಹುದ್ದೆಯನ್ನು ನಾನು ಪಡೆದಿದ್ದೇನೆ" ಎಂದು ಹೇಳಿದ್ದಾರೆ. 

ಬೆಳಗಾವಿಯಲ್ಲಿ ಶಾಸಕರು, ಸಚಿವರೊಂದಿಗೆ ಸುದೀರ್ಘ ಮಾತುಕತೆ ನಡೆಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿರುವ ಯಡಿಯೂರಪ್ಪ ಅವರಿಗೆ ಪತ್ರಕರ್ತರು ಸಿಎಂ ಬದಲಾವಣೆ ಬಗ್ಗೆ ಕೇಳಿದರು. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, "ಬಿಜೆಪಿಯಲ್ಲಿ ಹಲವು ಪ್ರಮುಖ ನಾಯಕರಿದ್ದಾರೆ, ಅವರೆಲ್ಲರೂ ಪಕ್ಷದ ಹೈಕಮಾಂಡ್ ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧರಾಗಿದ್ದು, ಜೊತೆಯಲ್ಲಿ  ಕೆಲಸ ಮಾಡಲಿದ್ದಾರೆ, ನಮ್ಮ ಗುರಿ ಉಳಿದ ಆಡಳಿತಾವಧಿಯನ್ನು ಪೂರ್ಣಗೊಳಿಸಿ ಮತ್ತೊಮ್ಮೆ ಬಿಜೆಪಿಯನ್ನು ಅಧಿಕಾರಕ್ಕೆ ತರುವುದಾಗಿದೆ ಎಂದು ಹೇಳಿದ್ದಾರೆ. 

ಸಿದ್ದರಾಮಯ್ಯ ಅವರ ಟೀಕೆಗೂ ಪ್ರತಿಕ್ರಿಯೆ ನೀಡಿರುವ ಅವರು ಸಿದ್ದರಾಮಯ್ಯ ಅವರಂತಹ ನೂರು ಮಂದಿ ಬಂದರೂ ಬಿಜೆಪಿ ರಾಜ್ಯದಲ್ಲಿ ಅಧಿಕಾರಕ್ಕೆ ಬರುವುದು ನಿಶ್ಚಿತ ಎಂದು ಸವಾಲು ಹಾಕಿದ್ದಾರೆ. 

SCROLL FOR NEXT