ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ 
ರಾಜಕೀಯ

ಸ್ವಾಮೀಜಿಗಳು ರಾಜಕೀಯದಿಂದ ದೂರ ಉಳಿಯಬೇಕು: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್

ನಾಯಕತ್ವ ಬದಲಾವಣೆ ವಿಚಾರ ಸಂಬಂಧ ಪ್ರತಿಭಟನೆಗಿಳಿದಿರುವ ವೀರಶೈವ-ಲಿಂಗಾಯತ ಮಠಗಳ ಸ್ವಾಮೀಜಿಗಳ ವಿರುದ್ಧ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ತೀವ್ರವಾಗಿ ಕಿಡಿಕಾರಿದ್ದಾರೆ. 

ವಿಜಯಪುರ: ನಾಯಕತ್ವ ಬದಲಾವಣೆ ವಿಚಾರ ಸಂಬಂಧ ಪ್ರತಿಭಟನೆಗಿಳಿದಿರುವ ವೀರಶೈವ-ಲಿಂಗಾಯತ ಮಠಗಳ ಸ್ವಾಮೀಜಿಗಳ ವಿರುದ್ಧ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ತೀವ್ರವಾಗಿ ಕಿಡಿಕಾರಿದ್ದಾರೆ. 

ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಮಠದ ಮುಖ್ಯಸ್ಥರ ನೇಮಕ ವಿಚಾರದಲ್ಲಿ ರಾಜಕೀಯ ಮಧ್ಯೆ ಪ್ರವೇಶ ಮಾಡುವುದಿಲ್ಲ. ಹಾಗೆಯೇ ಸ್ವಾಮೀಜಿಗಳೂ ಕೂಡ ರಾಜಕೀಯ ನೇಮಕಾತಿ ವಿಚಾರದಲ್ಲಿ ಮಧ್ಯಪ್ರವೇಶ ಮಾಡಬಾರದು ಎಂದು ಹೇಳಿದ್ದಾರೆ. 

ವೀರಶೈವ-ಲಿಂಗಾಯತ ಸಮುದಾಯದ ಮಠಾಧೀಶರು ಒಬ್ಬ ನಿರ್ದಿಷ್ಟ ನಾಯಕನಿಗಾಗಿ ಲಾಬಿ ಮಾಡುತ್ತಿದ್ದರೆ, ಇದು ಇತರ ಸಮುದಾಯಗಳ ಧಾರ್ಮಿಕ ಮುಖ್ಯಸ್ಥರ ಮೇಲೆ ಪರಿಣಾಮ ಬೀರುತ್ತದೆ. ಇದು ರಾಜ್ಯದಲ್ಲಿ ಅಭೂತಪೂರ್ವ ರಾಜಕೀಯ ಪ್ರಕ್ಷುಬ್ಧತೆಗೆ ಕಾರಣವಾಗಬಹುದು. ಇದು ನಮ್ಮ ಸಮುದಾಯಕ್ಕೆ ಕೆಟ್ಟ ಹೆಸರು ತಂದುಕೊಡಲಿದೆ ಎಂದು ತಿಳಿಸಿದ್ದಾರೆ. 

ಮಠಾಧೀಶರು, ಧಾರ್ಮಿಕ ಮುಖ್ಯಸ್ಥರು, ಸಂತರು, ಹಿಂದೂ ಕಾರ್ಯಕರ್ತರು, ದೇವಾಲಯಗಳು ಮತ್ತು ಮಠಗಳ ಮೇಲೆ ದಾಳಿ ಮಾಡಿದಾಗ ಎಲ್ಲಾ ಹಿಂದೂಗಳ ಪರವಾಗಿ ಧ್ವನಿ ಎತ್ತಬೇಕು ಮತ್ತು ಹೋರಾಡಬೇಕು... ಒಬ್ಬ ವ್ಯಕ್ತಿಯ ಸಲುವಾಗಿ (ಯಡಿಯೂರಪ್ಪ) ಅಲ್ಲ ಎಂದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Parliament Monsoon Session: ರಾಹುಲ್ ವಿರುದ್ಧ ಆಕ್ರೋಶ; ಸಂಸತ್ ಆವರಣದಲ್ಲಿ NDA ಸಂಸದರ ಬೃಹತ್ ಪ್ರತಿಭಟನಾ ಮೆರವಣಿಗೆ, ಲೋಕಸಭೆ ಕಲಾಪ ಮಧ್ಯಾಹ್ನ 2ಕ್ಕೆ ಮುಂದೂಡಿಕೆ..!

ಪಶ್ಚಿಮ ಕೊಲಂಬಿಯಾದಲ್ಲಿ 7.4 ತೀವ್ರತೆಯ ಭೂಕಂಪ; ಮೃತರ ಸಂಖ್ಯೆ 111ಕ್ಕೆ ಏರಿಕೆ, ಹಲವರಿಗೆ ಗಾಯ

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಬಾರ್ ಕ್ಯಾಷಿಯರ್‌ಗೆ ಬೆದರಿಕೆ; ಇಬ್ಬರು ಉದ್ಯಮಿಗಳು, ಪ್ರಭಾವಿ ಮಹಿಳೆ ಮೇಲೆ ಕಣ್ಣಿಟ್ಟ ಪೊಲೀಸರು!

ಬಿಲಿಯನೇರ್ Gautam Adaniಗೆ ಬಿಗ್ ರಿಲೀಫ್: ಎಲ್ಲಾ ಕ್ರಿಮಿನಲ್ ಪ್ರಕರಣಗಳ ವಜಾಗೊಳಿಸಿದ ಅಮೆರಿಕಾ ನ್ಯಾಯಾಲಯ..!

ಬಿಡದಿ ಹೋರಾಟ ಅರ್ಧಕ್ಕೆ ಸ್ಥಗಿತ; ‘ರೈತರ ನ್ಯಾಯಕ್ಕಾಗಿ ತಾರ್ಕಿಕ ಅಂತ್ಯದವರೆಗೆ ಹೋರಾಟ’ ಎಂದ ದೇವೇಗೌಡ, ಆ.18ಕ್ಕೆ ವಿಧಾನಸೌಧ ಮುತ್ತಿಗೆ..!