ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ 
ರಾಜಕೀಯ

ಸ್ವಾಮೀಜಿಗಳು ರಾಜಕೀಯದಿಂದ ದೂರ ಉಳಿಯಬೇಕು: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್

ನಾಯಕತ್ವ ಬದಲಾವಣೆ ವಿಚಾರ ಸಂಬಂಧ ಪ್ರತಿಭಟನೆಗಿಳಿದಿರುವ ವೀರಶೈವ-ಲಿಂಗಾಯತ ಮಠಗಳ ಸ್ವಾಮೀಜಿಗಳ ವಿರುದ್ಧ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ತೀವ್ರವಾಗಿ ಕಿಡಿಕಾರಿದ್ದಾರೆ. 

ವಿಜಯಪುರ: ನಾಯಕತ್ವ ಬದಲಾವಣೆ ವಿಚಾರ ಸಂಬಂಧ ಪ್ರತಿಭಟನೆಗಿಳಿದಿರುವ ವೀರಶೈವ-ಲಿಂಗಾಯತ ಮಠಗಳ ಸ್ವಾಮೀಜಿಗಳ ವಿರುದ್ಧ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ತೀವ್ರವಾಗಿ ಕಿಡಿಕಾರಿದ್ದಾರೆ. 

ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಮಠದ ಮುಖ್ಯಸ್ಥರ ನೇಮಕ ವಿಚಾರದಲ್ಲಿ ರಾಜಕೀಯ ಮಧ್ಯೆ ಪ್ರವೇಶ ಮಾಡುವುದಿಲ್ಲ. ಹಾಗೆಯೇ ಸ್ವಾಮೀಜಿಗಳೂ ಕೂಡ ರಾಜಕೀಯ ನೇಮಕಾತಿ ವಿಚಾರದಲ್ಲಿ ಮಧ್ಯಪ್ರವೇಶ ಮಾಡಬಾರದು ಎಂದು ಹೇಳಿದ್ದಾರೆ. 

ವೀರಶೈವ-ಲಿಂಗಾಯತ ಸಮುದಾಯದ ಮಠಾಧೀಶರು ಒಬ್ಬ ನಿರ್ದಿಷ್ಟ ನಾಯಕನಿಗಾಗಿ ಲಾಬಿ ಮಾಡುತ್ತಿದ್ದರೆ, ಇದು ಇತರ ಸಮುದಾಯಗಳ ಧಾರ್ಮಿಕ ಮುಖ್ಯಸ್ಥರ ಮೇಲೆ ಪರಿಣಾಮ ಬೀರುತ್ತದೆ. ಇದು ರಾಜ್ಯದಲ್ಲಿ ಅಭೂತಪೂರ್ವ ರಾಜಕೀಯ ಪ್ರಕ್ಷುಬ್ಧತೆಗೆ ಕಾರಣವಾಗಬಹುದು. ಇದು ನಮ್ಮ ಸಮುದಾಯಕ್ಕೆ ಕೆಟ್ಟ ಹೆಸರು ತಂದುಕೊಡಲಿದೆ ಎಂದು ತಿಳಿಸಿದ್ದಾರೆ. 

ಮಠಾಧೀಶರು, ಧಾರ್ಮಿಕ ಮುಖ್ಯಸ್ಥರು, ಸಂತರು, ಹಿಂದೂ ಕಾರ್ಯಕರ್ತರು, ದೇವಾಲಯಗಳು ಮತ್ತು ಮಠಗಳ ಮೇಲೆ ದಾಳಿ ಮಾಡಿದಾಗ ಎಲ್ಲಾ ಹಿಂದೂಗಳ ಪರವಾಗಿ ಧ್ವನಿ ಎತ್ತಬೇಕು ಮತ್ತು ಹೋರಾಡಬೇಕು... ಒಬ್ಬ ವ್ಯಕ್ತಿಯ ಸಲುವಾಗಿ (ಯಡಿಯೂರಪ್ಪ) ಅಲ್ಲ ಎಂದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT