ಡಿಕೆ ಶಿವಕುಮಾರ್ 
ರಾಜಕೀಯ

ಯಡಿಯೂರಪ್ಪನವರಿಗೆ ಕಣ್ಣೀರಿನ ನೋವು ಕೊಟ್ಟವರಾರು ಎಂಬುದನ್ನು ಬಹಿರಂಗಪಡಿಸಲಿ: ಡಿಕೆ ಶಿವಕುಮಾರ್

ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಘೋಷಿಸುವಾಗ ಕಣ್ಣೀರಿಟ್ಟ ಯಡಿಯೂರಪ್ಪ ಅವರು ತಮ್ಮ ಕಣ್ಣೀರಿಗೆ ನೋವು ಕೊಟ್ಟವರು ಯಾರು? ಕಣ್ಣೀರಿನ ಹಿಂದಿನ ನೋವು ಏನು? ಎನ್ನುವುದನ್ನು ಬಹಿರಂಗಪಡಿಸಬೇಕು....

ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಘೋಷಿಸುವಾಗ ಕಣ್ಣೀರಿಟ್ಟ ಯಡಿಯೂರಪ್ಪ ಅವರು ತಮ್ಮ ಕಣ್ಣೀರಿಗೆ ನೋವು ಕೊಟ್ಟವರು ಯಾರು? ಕಣ್ಣೀರಿನ ಹಿಂದಿನ ನೋವು ಏನು? ಎನ್ನುವುದನ್ನು ಬಹಿರಂಗಪಡಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪ್ರಶ್ನಿಸಿದ್ದಾರೆ.

'ಯಡಿಯೂರಪ್ಪ ಅವರ ರಾಜೀನಾಮೆ ಹಿಂದೆ ಸಂತೋಷ ಕಾಣುತ್ತಿಲ್ಲ. ಬದಲಿಗೆ ಅವರ ನಿರ್ಧಾರದಲ್ಲಿ ನೋವು ಕಾಣುತ್ತಿದೆ. ಆ ನೋವು ಏನು? ರಾಜೀನಾಮೆ ಕುರಿತ ನಮ್ಮ ವಿಮರ್ಶೆಯನ್ನು ಮುಂದೆ ತಿಳಿಸುತ್ತೇವೆ. ಆದರೆ ಅದಕ್ಕೂ ಮೊದಲು ಮುಖ್ಯಮಂತ್ರಿಗಳು ತಮ್ಮ ನೋವಿನ ಬಗ್ಗೆ ಜನರಿಗೆ ತಿಳಿಸಬೇಕು. ಎರಡು ವರ್ಷಗಳಲ್ಲಿ ಜನರು ಕೋವಿಡ್ ಸಮಸ್ಯೆಗೆ ತುತ್ತಾಗಿದ್ದರಿಂದ ನೋವಾಯ್ತಾ? ಪಕ್ಷದ ಶಾಸಕರನ್ನು ಹೈಕಮಾಂಡ್ ನಿಯಂತ್ರಣ ಮಾಡಲಿಲ್ಲ ಎಂದು ನೋವಾಯ್ತಾ? ಎಂಬುದು ಜನರಿಗೆ ಗೊತ್ತಾಗಬೇಕು.'ಬಿಜೆಪಿ ನಾಯಕರುಗಳೇ ಯಡಿಯೂರಪ್ಪ ಅವರಿಗೆ ಹಿಂದೆಯಿಂದ ಮುಂದೆಯಿಂದ ಚುಚ್ಚಿದ್ದಾರೆ. ಅವರ ಬೆನ್ನಿಗೆ ಚೂರಿ ಹಾಕುವ ಕೆಲಸ ಮಾಡಿದ್ದಾರೆ. ಈಶ್ವರಪ್ಪನವರು ರಾಜ್ಯಪಾಲರಿಗೆ ದೂರು ಕೊಡ್ತಾರೆ, ಮತ್ತೊಬ್ಬ ಪರೀಕ್ಷೆ ಬರೆದಿದ್ದೀನಿ ಎಂದರು, ಮಗದೊಬ್ಬರು ಅವರ ವಿರುದ್ಧ ಹಾದಿ-ಬೀದಿಯಲ್ಲಿ ಟೀಕೆ ಮಾಡುತ್ತಾ ಮಾನ ಕಳೆದರು. ಬಿಜೆಪಿಯ ರಾಜ್ಯ ಮತ್ತು ರಾಷ್ಟ್ರ ನಾಯಕರು ಯಡಿಯೂರಪ್ಪ ಅವರಿಗೆ ಮೊದಲಿಂದಲೂ ತೊಂದರೆ ಕೊಟ್ಟಿದ್ದಾರೆ. ಯಡಿಯೂರಪ್ಪ ಅವರಿಗೆ ಅವರ ಪಕ್ಷದ ಹೈಕಮಾಂಡ್ ನಿಂದ ಬೆಂಬಲ ಸಿಗಲಿಲ್ಲ. ಯಡಿಯೂರಪ್ಪ ವಿರುದ್ಧ ಮಾತನಾಡಿದವರನ್ನು ನಿಯಂತ್ರಿಸಲಿಲ್ಲ ಎಂದು ಡಿಕೆಶಿ ಹೇಳಿದರು.

ಯಡಿಯೂರಪ್ಪ ಇವತ್ತು ರಾಜೀನಾಮೆ ಕೊಟ್ಟು ಇದೆಲ್ಲದಕ್ಕೂ ತೆರೆ ಎಳೆದಿದ್ದಾರೆ. ನಾವು ಯಡಿಯೂರಪ್ಪ ಅವರಿಗೆ ತೊಂದರೆ ಕೊಡಲಿಲ್ಲ. ಚಪ್ಪಾಳೆ ತಟ್ಟಿ ಅಂದಾಗ ತಟ್ಟಿದ್ದೇವೆ. ಕೊರೋನಾ ಸಮಯದಲ್ಲಿ ಜನರಿಗೆ ಸಹಾಯ ಮಾಡಿ ಎಂದು ಹೇಳಿದ್ದೇವೆ. ಅಷ್ಟು ಬಿಟ್ರೆ ನಮ್ಮಿಂದ ಅವರಿಗೆ ಯಾವುದೇ ತೊಂದರೆ ಆಗಿಲ್ಲ. ಆದರೂ ಬಿಜೆಪಿ ಸರ್ಕಾರ ಸಪೂರ್ಣ ವಿಫಲವಾಗಿದೆ ಎಂದರು.

ಯಡಿಯೂರಪ್ಪನವರ ಸ್ಥಾನ ಯಾರು ತುಂಬುತ್ತಾರೆ ಎಂಬುದರ ಬಗ್ಗೆ ನಾನು ಮಾತಾಡಲ್ಲ. ಅದು ಅವರ ಪಕ್ಷಕ್ಕೆ ಬಿಟ್ಟ ವಿಚಾರ. ಕಾಂಗ್ರೆಸ್ ಬಿಟ್ಟು ಹೋದವರು ಇಂದು ಮಾಜಿಗಳಾಗಿದ್ದಾರೆ. ಅವರು ಪಕ್ಷಕ್ಕೆ ಬರುವ ವಿಚಾರವನ್ನು ಮುಂದೆ ನೋಡೋಣ. ಬಿಜೆಪಿ ನಾಯಕತ್ವದಿಂದ ಯಡಿಯೂರಪ್ಪ ಅವರನ್ನು ಬದಲಿಸಿದ್ದರಿಂದ ನಮಗೇನೂ ಲಾಭ ಇಲ್ಲ. ಮುಂದಿನ ದಿನಗಳಲ್ಲಿ ಬಿಜೆಪಿಯನ್ನು ಬದಲಿಸಬೇಕು ಎಂದು ರಾಜ್ಯದ ಜನರೇ ತೀರ್ಮಾನಿಸಿದ್ದಾರೆ ಎಂದು ಮಾರ್ಮಿಕವಾಗಿ ಶಿವಕುಮಾರ್ ಹೇಳಿದರು,

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT