ಸುಧಾಕರ್ 
ರಾಜಕೀಯ

ಸಿಎಂ ಸ್ಥಾನಕ್ಕಷ್ಟೇ ಯಡಿಯೂರಪ್ಪ ರಾಜೀನಾಮೆ ನೀಡಿದ್ದಾರೆ, ರಾಷ್ಟ್ರ, ರಾಜ್ಯ ರಾಜಕಾರಣಕ್ಕಲ್ಲ: ಸಚಿವ ಸುಧಾಕರ್

ಯಡಿಯೂರಪ್ಪ ಅವರು ಮುಖ್ಯಮಂತ್ರಿ ಸ್ಥಾನಕ್ಕಷ್ಟೇ ರಾಜೀನಾಮೆ ನೀಡಿದ್ದಾರೆ, ರಾಷ್ಟ್ರ, ರಾಜ್ಯ ರಾಜಕಾರಣಕೆಕ ನೀಡಿಲ್ಲ ಎಂದು ಸಚಿವ ಸುಧಾಕರ್ ಅವರು ಸೋಮವಾರ ಹೇಳಿದ್ದಾರೆ. 

ಬೆಂಗಳೂರು: ಯಡಿಯೂರಪ್ಪ ಅವರು ಮುಖ್ಯಮಂತ್ರಿ ಸ್ಥಾನಕ್ಕಷ್ಟೇ ರಾಜೀನಾಮೆ ನೀಡಿದ್ದಾರೆ, ರಾಷ್ಟ್ರ, ರಾಜ್ಯ ರಾಜಕಾರಣಕೆಕ ನೀಡಿಲ್ಲ ಎಂದು ಸಚಿವ ಸುಧಾಕರ್ ಅವರು ಸೋಮವಾರ ಹೇಳಿದ್ದಾರೆ. 

ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಯಡಿಯೂರಪ್ಪ ಅವರು ಅಂತಿಮವಾಗಿ ನಿರ್ಣಯ ಕೈಗೊಂಡಿದ್ದಾರೆ. ಹೈಕಮಾಂಡ್ ಸಲಹೆಯಂತೆ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿ ಪಕ್ಷದ ಸಿಪಾಯಿ, ನಿಷ್ಠಾವಂತ ಕಾರ್ಯಕರ್ತರೆಂದು ಮತ್ತೊಮ್ಮೆ ಸಾಬೀತು ಪಡಿಸಿದ್ದಾರೆ. ಯಡಿಯೂರಪ್ಪ ಅವರು ಮುಖ್ಯಮಂತ್ರಿ ಸ್ಥಾನಕ್ಕಷ್ಟೇ ರಾಜೀನಾಮೆ ನೀಡಿದ್ದಾರೆ, ರಾಷ್ಟ್ರ, ರಾಜ್ಯ ರಾಜಕಾರಣಕ್ಕೆ ರಾಜೀನಾಮೆ ನೀಡಿಲ್ಲ ಎಂದು ಹೇಳಿದ್ದಾರೆ. 

ಜನಪರ ಕಾಳಜಿಯನ್ನು ಮತ್ತಷ್ಟು ಬಲದಿಂದ ಪ್ರತಿಪಾದಿಸಲು ಪಕ್ಷದ ಆಶಯ ಮತ್ತು ಸಿದ್ಧಾಂತದ ಅಡಿಯಲ್ಲಿ ಪಕ್ಷದ ಲಕ್ಷಾಂತರ ಕಾರ್ಯಕರ್ತರ ಸಹಕಾರಕ್ಕೆ, ಬೆಂಬಲಕ್ಕೆ ನಿಂತು ನಮಗೆಲ್ಲರಿಗೂ ಮಾರ್ಗದರ್ಶನ, ನಾಯಕತ್ವವನ್ನು ನೀಡಲಿದ್ದಾರೆ. ಅವರ ನಾಯಕತ್ವದಲ್ಲಿ ನಂಬಿಕೆಯಿಟ್ಟು ಭಾರತ ಜನತಾ ಪಕ್ಷದ ಆಶಯ ಮತ್ತು ಸಿದ್ಧಾಂತಗಳನ್ನು ಒಪ್ಪಿಕೊಂಡು ಬಂದಿದ್ದೇವೆ. ಯಡಿಯೂರಪ್ಪ ಅವರ ರಾಜೀನಾಮೆ ನಿಜಕ್ಕೂ ಆಶ್ಚರ್ಯ ಹಾಗೂ ನಿರಾಸೆಯನ್ನುಂಟು ಮಾಡಿದೆ. ಆದರೆ, ಪಕ್ಷ ದೊಡ್ಡದು. ನಾವೆಲ್ಲರೂ ಒಂದು ತಂಡವಾಗಿ ರಾಜ್ಯವನ್ನು ಮುನ್ನಡೆಸಬೇಕಿದೆ. 

ಯಡಿಯೂರಪ್ಪ ನಾಯಕತ್ವ ಅಡಿಯಲ್ಲಿ ಕೋವಿಡ್ ಸಾಂಕ್ರಾಮಿಕ ರೋಗವನ್ನು ನಿಯಂತ್ರಿಸುವ ಅವಕಾಶ ಸಿಕ್ಕಿದೆ. 2 ಬಾರಿ ರಾಜ್ಯದಲ್ಲಿ ಎದುರಾದ ನೆರೆಯನ್ನು ಉತ್ತಮವಾಗಿ ನಿಭಾಯಿಸಿದ್ದಾರೆ. ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿರುವುದು ವೈಯಕ್ತಿಕವಾಗಿ ನೋವು ತಂದಿದೆ. ಪಕ್ಷದ ಸಿದ್ಧಾಂತದ ಮೇಲೆ ನಂಬಿಕೆಯಿದೆ. ಮುಂದಿನ ದಿನಗಳಲ್ಲಿ ಹೈಕಮಾಂಡ್ ನೀಡಿದ ನಿರ್ಧಾರದಂತೆ ನಡೆದುಕೊಳ್ಳುತ್ತೇವೆಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

ಬಿಗ್ ಬಾಸ್ 12 ಫಿನಾಲೆ ಹೊತ್ತಲ್ಲಿ ಕಿಚ್ಚ ಸುದೀಪ್‌ಗೆ ಸಂಕಷ್ಟ ತಂದ 'ರಣಹದ್ದು'!

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

ಮಹಾತ್ಮ ಗಾಂಧಿ ಸಂದೇಶಗಳು ಹಿಂದೆಂದಿಗಿಂತಲೂ ಈಗ ಹೆಚ್ಚು ಪ್ರಸ್ತುತ: ಸಬರಮತಿ ಆಶ್ರಮದಲ್ಲಿ ಜರ್ಮನ್ ಚಾನ್ಸೆಲರ್!

'sir' ವಿವಾದ ಕೊನೆಗೂ ಅಂತ್ಯ: 'ಸರ್.. ನೀವು ನನ್ನ ಹಿರಿಯರು': ಕಿಚ್ಚಾ ಸುದೀಪ್ ಗೆ ಧನ್ಯವಾದ ಹೇಳಿದ ನಟ ಯಶ್!

SCROLL FOR NEXT