ಬಸವರಾಜ ಬೊಮ್ಮಾಯಿ - ಬಿಜೆಪಿ ನಾಯಕರು 
ರಾಜಕೀಯ

ಬೊಮ್ಮಾಯಿ ನೂತನ ಸಿಎಂ: ತಂದೆ- ಮಗ ಮುಖ್ಯಮಂತ್ರಿಯಾದ ಎರಡನೇ ರಾಜಕೀಯ ಕುಟುಂಬ

ಮುಖ್ಯಮಂತ್ರಿ ಹುದ್ದೆಗೆ ನೇಮಕವಾಗಿರುವ ಬಸವರಾಜ ಬೊಮ್ಮಾಯಿ ಅವರು ಮಾಜಿ ಮುಖ್ಯಮಂತ್ರಿ, ಎಸ್ .ಆರ್.ಬೊಮ್ಮಾಯಿಯವರ ಪುತ್ರ. ಇದರ ಜೊತೆಗೆ ತಂದೆ, ಮಗ ಮುಖ್ಯಮಂತ್ರಿಯಾದ ರಾಜ್ಯದ ಎರಡನೇ ರಾಜಕೀಯ ಕುಟುಂಬ...

ಬೆಂಗಳೂರು: ಮುಖ್ಯಮಂತ್ರಿ ಹುದ್ದೆಗೆ ನೇಮಕವಾಗಿರುವ ಬಸವರಾಜ ಬೊಮ್ಮಾಯಿ ಅವರು ಮಾಜಿ ಮುಖ್ಯಮಂತ್ರಿ, ಎಸ್ .ಆರ್.
ಬೊಮ್ಮಾಯಿಯವರ ಪುತ್ರ. ಇದರ ಜೊತೆಗೆ ತಂದೆ, ಮಗ ಮುಖ್ಯಮಂತ್ರಿಯಾದ ರಾಜ್ಯದ ಎರಡನೇ ರಾಜಕೀಯ ಕುಟುಂಬ ಎಂಬ    
ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ.

ಒಂದೇ ಕುಟುಂಬದ ಅದರಲ್ಲೂ ಅಪ್ಪ, ಮಗ ರಾಜ್ಯದ  ಮುಖ್ಯಮಂತ್ರಿಯಾಗುತ್ತಿರುವುದು ರಾಜ್ಯದಲ್ಲಿ ಎರಡನೇ ಬಾರಿಯಾಗಿದೆ.

ಇದಕ್ಕೂ ಮೊದಲು ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ದೇವೇಗೌಡ ಅವರ ಪುತ್ರ ಎಚ್.ಡಿ.
ಕುಮಾರಸ್ವಾಮಿ ರಾಜ್ಯದ ಮುಖ್ಯಮಂತ್ರಿಯಾಗಿದ್ದರು. ಒಂದೇ ಕುಟುಂಬದ ತಂದೆ, ಮಗ ಮುಖ್ಯಮಂತ್ರಿಯಾಗಿರುವುದು ಈ ಎರಡು
ಕುಟುಂಬಗಳ ರಾಜಕೀಯ ವಿಶೇಷತೆಯಾಗಿದೆ.

ಬಿ.ಎಸ್.ಯಡಿಯೂರಪ್ಪ ರಾಜೀನಾಮೆಯಿಂದ ತೆರವಾಗಿರುವ ಮುಖ್ಯಮಂತ್ರಿ ಸ್ಥಾನಕ್ಕೆ ಲಿಂಗಾಯತ ಸಮುದಾಯದ ಹಿರಿಯ ನಾಯಕ ಬಸವರಾಜ ಬೊಮ್ಮಾಯಿ ಅವರನ್ನು ಆಯ್ಕೆ ಮಾಡಲಾಗಿದೆ

ಮಂಗಳವಾರ ಸಂಜೆ ಖಾಸಗಿ ಹೊಟೇಲ್ ನಲ್ಲಿ ನಡೆದ ಬಿಜೆಪಿ ಶಾಸಕಾಂಗ ಸಭೆಯಲ್ಲಿ ಕೇಂದ್ರದ ಬಿಜೆಪಿ ವರಿಷ್ಠರ ಸೂಚನೆ ಮೇರೆಗೆ ಬಸವರಾಜ ಬೊಮ್ಮಾಯಿಯನ್ನು ಪಕ್ಷ ಆಯ್ಕೆ ಮಾಡಿದೆ.

ಹಂಗಾಮಿ ಸಿಎಂ ಯಡಿಯೂರಪ್ಪ ನೂತನ ಸಿಎಂ ಹೆಸರನ್ನು ಬಹಿರಂಗಪಡಿಸಿದರು. ಯಡಿಯೂರಪ್ಪ ಸಂಪುಟದಲ್ಲಿ ಗೃಹ ಸಚಿವರಾಗಿದ್ದ ಬಸವರಾಜ ಬೊಮ್ಮಾಯಿ ನೂತನ ಸಿಎಂ ಆಗುವ ಮೂಲಕ ಕರ್ನಾಟಕದಲ್ಲಿ ಮತ್ತೊಂದು ಐತಿಹಾಸಿಕ ರಾಜಕೀಯ ಬೆಳವಣಿಗೆ ಮರುಕಳಿಸಿದಂತಾಗುತ್ತದೆ.ಈ ಹಿಂದೆ 1988-89ರಲ್ಲಿ ಬಸವರಾಜ ಬೊಮ್ಮಾಯಿ ಅವರ ತಂದೆ ಎಸ್.ಆರ್.ಬೊಮ್ಮಾಯಿ ಕರ್ನಾಟಕದ ಹದಿಮೂರನೇ ಮುಖ್ಯಮಂತ್ರಿಯಾಗಿದ್ದರು.ಹೆಚ್.ಡಿ.ದೇವೇಗೌಡ ಹಾಗೂ ಹೆಚ್.ಡಿ.ಕುಮಾರಸ್ವಾಮಿ ಕರ್ನಾಟಕದಲ್ಲಿ ತಂದೆ-ಮಗ ಸಿಎಂ ಆದ ಉದಾಹರಣೆಯಿತ್ತು.ಇದೀಗ ಬಸವರಾಜ ಬೊಮ್ಮಾಯಿ ಸಿಎಂ ಆಗುವ ಮೂಲಕ ಈ  ಸಾಧನೆ ಪುನರಾವರ್ತನೆ ಆಗಿ ರಾಜ್ಯದ ಇತಿಹಾಸದಲ್ಲಿ ಎರಡನೇ ಬಾರಿ ತಂದೆ-ಮಗ ಸಿಎಂ ಆದ ಸಾಧನೆ ಮರುಕಳಿಸಿದಂತಾಗಿದೆ.  

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಮಹಿಳಾ ವಿಶ್ವಕಪ್ 2025: ನ್ಯೂಜಿಲ್ಯಾಂಡ್ ವಿರುದ್ಧ ಭಾರತಕ್ಕೆ 53 ರನ್‌ಗಳ ಭರ್ಜರಿ ಜಯ, ಸೆಮಿಫೈನಲ್‌ಗೆ INDIA ಲಗ್ಗೆ!

ವೆಸ್ಟ್ ಬ್ಯಾಂಕ್ ವಶಪಡಿಸಿಕೊಳ್ಳುವ ದುಸ್ಸಾಹಸಕ್ಕೆ ಕೈಹಾಕಿದರೇ ಅಮೆರಿಕದ ಬೆಂಬಲ ಕಳಕೊಳ್ಳಬೇಕಾಗುತ್ತೆ: ಇಸ್ರೇಲ್‌ಗೆ ಟ್ರಂಪ್ ಕಟು ಎಚ್ಚರಿಕೆ

ರಕ್ಷಣಾ ವಲಯಕ್ಕೆ 79,000 ಕೋಟಿ ರೂ. ಮೌಲ್ಯದ ಉಪಕರಣಗಳ ಖರೀದಿಗೆ ಕೇಂದ್ರ ಸರ್ಕಾರ ಅನುಮೋದನೆ!

ಹೊಸ ಸಿಜೆಐ ನೇಮಕಕ್ಕೆ ಪ್ರಕ್ರಿಯೆ ಆರಂಭ: ಯಾರಾಗಲಿದ್ದಾರೆ ಭಾರತದ ಮುಂದಿನ ಮುಖ್ಯ ನ್ಯಾಯಮೂರ್ತಿ?

ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಎರಡ್ಮೂರು ದಿನಗಳಲ್ಲಿ AAI ವರದಿ ಸಲ್ಲಿಕೆ- ಎಂ.ಬಿ ಪಾಟೀಲ್

SCROLL FOR NEXT