ನೂತನ ಸಿಎಂ ಆಗಿ ಆಯ್ಕೆಯಾಗಿರುವ ಬಸವರಾಜ ಬೊಮ್ಮಾಯಿ 
ರಾಜಕೀಯ

ಯಡಿಯೂರಪ್ಪ ಮಾರ್ಗದರ್ಶನದಲ್ಲಿ ಜನಪರ, ನ್ಯಾಯಸಮ್ಮತ ಆಡಳಿತಕ್ಕೆ ಸಂಕಲ್ಪ- ಬಸವರಾಜ ಬೊಮ್ಮಾಯಿ

ಬಿ.ಎಸ್.ಯಡಿಯೂರಪ್ಪ ಅವರ ಮಾರ್ಗದರ್ಶನದಲ್ಲಿ ಜನಪರ, ಬಡಜನರ ಪರವಾದ ನ್ಯಾಯಸಮ್ಮತದ ಆಡಳಿತ ಕೊಡುವ ಸಂಕಲ್ಪ ಮಾಡಿರುವುದಾಗಿ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಬೆಂಗಳೂರು: ಬಿ.ಎಸ್.ಯಡಿಯೂರಪ್ಪ ಅವರ ಮಾರ್ಗದರ್ಶನದಲ್ಲಿ ಜನಪರ, ಬಡಜನರ ಪರವಾದ ನ್ಯಾಯಸಮ್ಮತದ ಆಡಳಿತ ಕೊಡುವ ಸಂಕಲ್ಪ ಮಾಡಿರುವುದಾಗಿ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ರಾಜ್ಯಪಾಲರನ್ನು ಭೇಟಿಯಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪ ಅವರ ಹೆಜ್ಜೆ ಇಟ್ಟು, ಬಡವರ, ರೈತರ, ಹಿಂದುಳಿದ, ದಲಿತ ವರ್ಗದವರ ಕಲ್ಯಾಣಕ್ಕೆ ಕೆಲಸ ಮಾಡುತ್ತೇನೆ.ಯಡಿಯೂರಪ್ಪ ಅವರ ಕಾರ್ಯಕ್ರಮಗಳನ್ನು ಮುಂದುವರೆಸಿ ಜನಪರ, ಬಡವರ, ನ್ಯಾಯಪರ ಆಡಳಿತವನ್ನು ಕೊಡಬೇಕು ಎಂಬ ಸಂಕಲ್ಪ ಮಾಡಿದ್ದೇನೆ. ಪ್ರತಿಯೊಂದು ವಿಚಾರದಲ್ಲಿ ಯಡಿಯೂರಪ್ಪ ಅವರ ಮಾರ್ಗದರ್ಶನದಲ್ಲಿ ಮುನ್ನಡೆಯುವುದಾಗಿ ತಿಳಿಸಿದರು.

ಯಡಿಯೂರಪ್ಪ 40 ವರ್ಷ ಬೆವರು ಸುರಿಸಿ ಪಕ್ಷ ಕಟ್ಟಿದ್ದಾರೆ. ಎರಡು ಬಾರಿ ಕೋವಿಡ್, ಪ್ರವಾಹದಂತಹ ಸಂಕಷ್ಟದ ಸಂದರ್ಭವನ್ನು ಎದುರಿಸಿ ರಾಜ್ಯವನ್ನು ಮುನ್ನಡೆಸಿದ್ದಾರೆ. ಹಣಕಾಸಿನ ಕೊರತೆಯಾಗದಂತೆ ನಿರ್ವಹಣೆ ಮಾಡಿದ್ದಾರೆ ಎಂದರು. ನಾಳೆ ಬೆಳಗ್ಗೆ 11 ಗಂಟೆಗೆ ತಾನೊಬ್ಬನೇ ಪ್ರಮಾಣ ವಚನ ಸ್ವೀಕರಿಸುವುದಾಗಿ ಬಸವರಾಜ ಬೊಮ್ಮಾಯಿ ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಒಬ್ಬ ಅಲ್ಲ.. ಭಾರತದ ಮೇಲೆ ದಾಳಿಗೆ ಸಾವಿರಾರು ಆತ್ಮಹತ್ಯಾ ಬಾಂಬರ್‌ಗಳು ಸಿದ್ಧ': ಪಾಕ್ ಮೂಲದ ಉಗ್ರ Masood Azhar ಆಡಿಯೋ ವೈರಲ್!

Pak ಸಚಿವನಿಗೆ ಮುಖಭಂಗ: ನೆತನ್ಯಾಹು ವಿರುದ್ಧ ಮಾತಾಡ್ತಿದ್ದಂತೆ ಶೋ ನಿಲ್ಲಿಸಿ ಆಸಿಫ್‌ನನ್ನು ಹೊರಕಹಿಸಿದ ಆ್ಯಂಕರ್, Video!

'ಅಪ್ಪ-ಅಮ್ಮನ ಪ್ರಜ್ಞೆ ತಪ್ಪಿಸಿ ಕಟ್ಟಿಹಾಕಿ ಕಳ್ಳತನ': ಮನೆಗೆಲಸದವರ ಮೇಲೆ ಮಾಜಿ ಐಎಎಸ್ ಅಧಿಕಾರಿ Puja Khedkar ಆರೋಪ!

1st ODI: ಮಿಚೆಲ್ ಸ್ಫೋಟಕ ಭರ್ಜರಿ ಬ್ಯಾಟಿಂಗ್, ಭಾರತಕ್ಕೆ ಗೆಲ್ಲಲು ಬೃಹತ್ ಗುರಿ ನೀಡಿದ ಕಿವೀಸ್

ಕೇರಳದಲ್ಲಿ ಕಾನೂನು ಸುವ್ಯವಸ್ಥೆಗೆ ಬೆದರಿಕೆ: SDPI, ಜಮಾತ್, ಸಂಘಟನೆಗಳ ಪಾತ್ರ ಪ್ರಶ್ನಿಸಿದ ಅಮಿತ್ ಶಾ!

SCROLL FOR NEXT