ಯಡಿಯೂರಪ್ಪ 
ರಾಜಕೀಯ

ಯಡಿಯೂರಪ್ಪ ಪದತ್ಯಾಗದ ಮೂಲಕ ಚಾಮರಾಜನಗರಕ್ಕೆ ಅಂಟಿದ್ದ ಕಳಂಕ ದೂರ?  ಸಿಎಂ ರಾಜಿನಾಮೆಯಿಂದ ಜಿಲ್ಲೆಯ ಜನರಿಗೆ ಸಂತೋಷ!

ಮುಖ್ಯಮಂತ್ರಿ ಸ್ಥಾನಕ್ಕೆ ಬಿಎಸ್ ಯಡಿಯೂರಪ್ಪ ಅವರು ರಾಜಿನಾಮೆ ನೀಡಿದ್ದರಿಂದ ಅವರ ಬೆಂಬಲಿಗರಿಗೆ ತೀವ್ರ ನಿರಾಶೆಯಾಗಿದೆ. ಆದರೆ ವಿಶೇಷ ಕಾರಣಕ್ಕಾಗಿ ಚಾಮರಾಜನಗರ ಜಿಲ್ಲೆ ಜನರಿಗೆ ಸಂತಸ ಉಂಟಾಗಿದೆ.

ಮೈಸೂರು: ಮುಖ್ಯಮಂತ್ರಿ ಸ್ಥಾನಕ್ಕೆ ಬಿಎಸ್ ಯಡಿಯೂರಪ್ಪ ಅವರು ರಾಜಿನಾಮೆ ನೀಡಿದ್ದರಿಂದ ಅವರ ಬೆಂಬಲಿಗರಿಗೆ ತೀವ್ರ ನಿರಾಶೆಯಾಗಿದೆ. ಆದರೆ ವಿಶೇಷ ಕಾರಣಕ್ಕಾಗಿ ಚಾಮರಾಜನಗರ ಜಿಲ್ಲೆ ಜನರಿಗೆ ಸಂತಸ ಉಂಟಾಗಿದೆ.

ತಮ್ಮ ಅಧಿಕಾರವಧಿಯಲ್ಲಿ ಒಮ್ಮೆಯೂ ಚಾಮರಾಜನಗರಕ್ಕೆ ಭೇಟಿ ನೀಡದಿದ್ದರೂ ಯಡಿಯೂರಪ್ಪ ಅಧಿಕಾರ ಕಳೆದುಕೊಂಡಿದ್ದಾರೆ, ಇದರಿಂದ ಜಿಲ್ಲೆಯ ಜನ ಸಂತೋಷಗೊಂಡಿದ್ದಾರೆ. 

ತಮ್ಮ ಜಿಲ್ಲೆಗೆ ಅಂಟಿದ ಕಳಂಕ ತೊಲಗಿದ್ದಕ್ಕಾಗಿ ಗಡಿ ಜಿಲ್ಲೆಯ ಜನರು ಖುಷಿಯಾಗಿದ್ದಾರೆ. ಚಾಮರಾಜನಗರಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿಗಳು ಅಧಿಕಾರ ಕಳೆದುಕೊಳ್ಳುತ್ತಾರೆ ಎಂಬ ಹಣೆಪಟ್ಟಿ ಕಳಚಿದ್ದಕ್ಕಾಗಿ ಸಂತೋಷ ವ್ಯಕ್ತ ಪಡಿಸಿದ್ದಾರೆ.

ಸಿಎಂ ಆಗಿ ಅಧಿಕಾರ ಸ್ವೀಕರಿಸಿದ ಯಾವುದೇ ಮುಖ್ಯಮಂತ್ರಿ ಚಾಮರಾಜನಗರಕ್ಕೆ ಭೇಟಿ ನೀಡಿದರೇ ತಮ್ಮ ಹುದ್ದೆ ಕಳೆದುಕೊಳ್ಳುತ್ತಾರೆ ಎಂಬ ಮೂಡ ನಂಬಿಕೆ ಹಲವು ದಶಕಗಳಿಂದ ರಾಜಕೀಯ ವಲಯದಲ್ಲಿ ನಡೆದುಕೊಂಡು ಬಂದಿದೆ.  ಹೀಗಾಗಿ ದಶಕಗಳ ಕಾಲದಿಂದ ಯಾರೇ ಸಿಎಂ ಆದರೂ ಚಾಮರಾಜನಗರಕ್ಕೆ ಭೇಟಿ ನೀಡದೇ ದೂರ ಉಳಿಯುತ್ತಿದ್ದರು.

ಯಡಿಯೂರಪ್ಪ ಕೂಡ ಇದಕ್ಕೆ ಹೊರತಾಗಿರಲಿಲ್ಲ, ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ದುರಂತ ನಡೆದು 2 ಮಂದಿ ಸಾವನ್ನಪ್ಪಿದ್ದರೂ ಸಿಎಂ ಯಡಿಯೂರಪ್ಪ ಜಿಲ್ಲೆಗೆ ಭೇಟಿ ನೀಡಿರಲಿಲ್ಲ. ಆದರೂ ಸಿಎಂ ತನ್ನ ಸ್ಥಾನ ಕಳೆದುಕೊಂಡಿದ್ದಾರೆ, ಇದು ಜಿಲ್ಲೆಯ ಜನರಿಗೆ ಸಂತಸ ತಂದಿದೆ. ಚಾಮರಾಜನಗರ ಕಳಂಕಿತ ಜಿಲ್ಲೆಯಲ್ಲ ಎಂಬುದು ಅವರ ಅಭಿಪ್ರಾಯವಾಗಿದೆ.

ಸಿಎಂ ಗಳಾಗಿದ್ದ ಡಿ.ದೇವರಾಜ ಅರಸ್, ಆರ್.ಗುಂಡೂರಾವ್, ರಾಮಕೃಷ್ಣ ಹೆಗಡೆ, ಎಸ್ ಆರ್ ಬೊಮ್ಮಾಯಿ ಮತ್ತು ವೀರೇಂದ್ರ ಪಾಟೀಲ್ ಚಾಮರಾಜನಗರಕ್ಕೆ ಭೇಟಿ ನೀಡಿದ ನಂತರ ಅಧಿಕಾರಕಳೆದುಕೊಂಡರು ಎಂಬ ನಂಬಿಕೆಯಿದೆ, ಆದರೆ ಸಿಎಂ ಆಗಿದ್ದ ಅವಧಿಯಲ್ಲಿ ಈ ಎಲ್ಲಾ ಮೂಡ ನಂಬಿಕೆಗಳಿಗೆ ಸೆಡ್ಡುಹೊಡೆದಿದ್ದ ಸಿದ್ದರಾಮಯ್ಯ ಸುಮಾರು 8-9 ಬಾರಿ ಜಿಲ್ಲೆಗೆ ಭೇಟಿ ನೀಡಿದ್ದರೂ, ಆಗಿದ್ದರೂ ಅವರು ತಮ್ಮ ಅಧಿಕಾರ ಪೂರೈಸಿದ್ದರು.

ಆದರೆ ಜಿಲ್ಲೆಗೆ ಭೇಟಿ ನೀಡದಿದ್ದರೂ ಯಡಿಯೂರಪ್ಪ ಅಧಿಕಾರ ಕಳೆದುಕೊಂಡಿದ್ದರೆ,ಹೀಗಾಗಿ ಚಾಮರಾಜನಗರಕ್ಕೆ ಅಂಟಿದ್ದ ಕಳಂಕ ದೂರಾಗಿದೆ ಎಂದು ಜನತೆ ತಿಳಿಸಿದ್ದಾರೆ. ಇದರ ಮೂಲಕ ಜಿಲ್ಲೆಗೆ ಅಂಟಿದ್ದ ಶಾಪ ತೊಳೆದಂತಾಗಿದೆ ಎಂದು ಗ್ರಾಮ ಪಂಚಾಯಿತಿ ಸದಸ್ಯ ಶಿವಕುಮಾರ್ ಎಂಬುವರು ತಿಳಿಸಿದ್ದಾರೆ.

1997 ರಲ್ಲಿ ಮೈಸೂರಿನಿಂದ ಹೊಸದಾಗಿ ಚಾಮರಾಜನಗರ ಜಿಲ್ಲೆ ರಚಿಸಲ್ಪಟ್ಟಿತ್ತು. ಆದರೆ ಹೊಸ ಜಿಲ್ಲೆಯ ಅಭಿವೃದ್ಧಿ ಕನಸಾಗಿಯೇ ಉಳಿಯಿತು. ಇನ್ನದರೂ ನಾಯಕರೆಂದು ಕರೆಸಿಕೊಳ್ಳುವವರು ಜಿಲ್ಲೆಗೆ ಅಂಟಿದ್ದ ಶಾಪಗ್ರಸ್ತ ನಗರ ಎಂಬ ಹಣೆಪಟ್ಟಿ ಕಳಚಿ ಅಭಿವೃದ್ಧಿಯತ್ತ ಗಮನ ಹರಿಸಬೇಕು, ಹೊಸ ಸಿಎಂ ನಮ್ಮ ಜಿಲ್ಲೆಗೆ ಭೇಟಿ ನೀಡಿ ಹಳೇಯ ಮೂಢನಂಬಿಕೆಗಳನ್ನು ಮುರಿಯಬೇಕು ಎಂದು ಸಾಮಾಜಿಕ ಕಾರ್ಯಕರ್ತ ವಿರೇಶ್ ಎಂಬುವರು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT