ರಾಜಕೀಯ

ಸೂಪರ್ ಸಿಎಂ ಟ್ಯಾಗ್ ಲೈನ್ ನಿಂದ ಹೊರಬಂದಿದ್ದೇನೆ: ಬಿ.ವೈ.ವಿಜಯೇಂದ್ರ

Nagaraja AB

ಬೆಂಗಳೂರು: ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಿರುವುದರಿಂದ ಸೂಪರ್ ಸಿಎಂ ಎಂಬ ಟ್ಯಾಗ್ ಲೈನ್ ನಿಂದ  ಹೊರ ಬಂದಿದ್ದೇನೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.

ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೊಮ್ಮಾಯಿ ನೇತೃತ್ವದ ಸರ್ಕಾರದಲ್ಲಿ ಯುವಕರಿಗೆ ಹೆಚ್ಚಿನ ಅವಕಾಶ ಸಿಗುವ ನಿರೀಕ್ಷೆ ಇದೆ.‌ ರಾಜ್ಯದಲ್ಲಿ ಮತ್ತಷ್ಟು ಅಭಿವೃದ್ಧಿ ಕಾರ್ಯಗಳು ಹೊಸ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಚುರುಕು ಪಡೆಯಲಿವೆ ಎಂದರು.

ನೂತನ ಸಿಎಂ ಬೊಮ್ಮಾಯಿ ಅವರು ಯಡಿಯೂರಪ್ಪನವರ ಛಾಯಾ ಸಿಎಂ ಎನ್ನುವುದೆಲ್ಲಾ ಊಹಾಪೋಹ. ಈ ರೀತಿಯ ವದಂತಿಗಳಿಗೆ ಯಾರೂ ಮಹತ್ವ ನೀಡಬಾರದು. ಕಾಂಗ್ರೆಸ್‌, ಜೆಡಿಎಸ್‌ ತೊರೆದು ಬಿಜೆಪಿಗೆ ಬಂದ 17 ಮಂದಿಯನ್ನು ಪಕ್ಷ ಗೌರವಯುತವಾಗಿ ನಡೆಸಿಕೊಳ್ಳುತ್ತದೆ. ಅವರು ಯಡಿಯೂರಪ್ಪನವರನ್ನು ಮಾತ್ರವಲ್ಲ, ಬಿಜೆಪಿಯನ್ನೂ ನಂಬಿ ಬಂದಿದ್ದಾರೆ ಎಂದು ಹೇಳಿದರು.

ಸರಕಾರ ಹಾಗೂ ಪಕ್ಷದಲ್ಲಿ ನನಗೆ ಯಾವ ಸ್ಥಾನಮಾನ ನೀಡಬೇಕು ಎಂಬುದನ್ನು ಕೇಂದ್ರ- ರಾಜ್ಯ ನಾಯಕರು ನಿರ್ಧರಿಸುತ್ತಾರೆ. ಆ ಬಗ್ಗೆ ಹೆಚ್ಚು ಚರ್ಚಿಸುವುದಿಲ್ಲ ಎಂದು ತಿಳಿಸಿದರು.

SCROLL FOR NEXT