ಆರ್. ಅಶೋಕ್, ವಿ. ಸೋಮಣ್ಣ 
ರಾಜಕೀಯ

ಪರಸ್ಪರ ಏಕವಚನದಲ್ಲಿ ಕಿತ್ತಾಡಿಕೊಂಡ ಬೆಂಗಳೂರಿನ ಬಿಜೆಪಿಯ ಹಿರಿಯ ಶಾಸಕರು!

ಮಹಾನಗರ ಬೆಂಗಳೂರಿನ ಹಿರಿಯ ಬಿಜೆಪಿ ಶಾಸಕರಾದ ಆರ್. ಅಶೋಕ್ ಮತ್ತು ವಿ. ಸೋಮಣ್ಣ ಪರಸ್ಪರ ಏಕವಚನದಲ್ಲಿ ಕಿತ್ತಾಡಿಕೊಂಡಿರುವ ವಿಚಾರ ಇದೀಗ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.  

ಬೆಂಗಳೂರು: ಮಹಾನಗರ ಬೆಂಗಳೂರಿನ ಹಿರಿಯ ಬಿಜೆಪಿ ಶಾಸಕರಾದ ಆರ್. ಅಶೋಕ್ ಮತ್ತು ವಿ.ಸೋಮಣ್ಣ ಪರಸ್ಪರ ಏಕವಚನದಲ್ಲಿ ಕಿತ್ತಾಡಿಕೊಂಡಿರುವ ವಿಚಾರ ಇದೀಗ  ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.  

ಮೊಬೈಲ್ ನಲ್ಲಿ ಸಂಭಾಷಣೆ ವೇಳೆ ಪರಸ್ಪರ ಏಕವಚನ ಮತ್ತು ಕೆಟ್ಟ ಪದಗಳನ್ನು ಬಳಸಿ ಜಗಳವಾಡಿಕೊಂಡಿದ್ದಾರೆ. ಆಡಿಯೋ ತುಣುಕು ಕೆಲವರಿಗೆ ಲಭ್ಯವಾಗಿದ್ದು, ಪಕ್ಷದೊಳಗೆ ಈ ಬಗ್ಗೆ ಭಾರಿ ಚರ್ಚೆ ನಡೆಯುತ್ತಿದೆ. 

ತಮ್ಮನ್ನು ಕರೆಯದೇ ದೆಹಲಿಗೆ ಹೋಗಿದ್ದ ಅಶೋಕ್, ಸಂಪುಟಕ್ಕೆ ತಮ್ಮನ್ನು ಸೇರಿಸದಂತೆ ವರಿಷ್ಠರಿಗೆ ದೂರು ನೀಡಿರಬಹುದೆಂದು ಸೋಮಣ್ಣ ಅನುಮಾನ ವ್ಯಕ್ತಪಡಿಸಿದ್ದಾರೆ. ಆಗ ಇಬ್ಬರೂ ಪರಸ್ಪರ ಪಿತೂರಿ, ಸೇಡಿನ ರಾಜಕಾರಣದ ಆರೋಪ ಮಾಡಿದ್ದು, ಕೆಲ ನಿಮಿಷಗಳ ಕಾಲ ಜಗಳವಾಡಿಕೊಂಡಿದ್ದಾರೆ ಎನ್ನಲಾಗಿದೆ.

ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿರುವ ವಿ. ಸೋಮಣ್ಣ, ನಮ್ಮಿಬ್ಬರ ನಡುವೆ ಯಾವುದೇ ಮನಸ್ತಾಪ ಇಲ್ಲ. ಯಾವುದೋ ಕಾಲದಲ್ಲಿ ನಡೆದ ಚರ್ಚೆಯನ್ನೆ ಇದೀಗ ಸಂಪುಟ ವಿಚಾರಕ್ಕೆ ತಳುಕು ಹಾಕಲಾಗುತ್ತಿದೆ. ಅಶೋಕ್ ಮತ್ತು ನನ್ನ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ  ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT