ಆರ್. ಅಶೋಕ್, ವಿ. ಸೋಮಣ್ಣ 
ರಾಜಕೀಯ

ಪರಸ್ಪರ ಏಕವಚನದಲ್ಲಿ ಕಿತ್ತಾಡಿಕೊಂಡ ಬೆಂಗಳೂರಿನ ಬಿಜೆಪಿಯ ಹಿರಿಯ ಶಾಸಕರು!

ಮಹಾನಗರ ಬೆಂಗಳೂರಿನ ಹಿರಿಯ ಬಿಜೆಪಿ ಶಾಸಕರಾದ ಆರ್. ಅಶೋಕ್ ಮತ್ತು ವಿ. ಸೋಮಣ್ಣ ಪರಸ್ಪರ ಏಕವಚನದಲ್ಲಿ ಕಿತ್ತಾಡಿಕೊಂಡಿರುವ ವಿಚಾರ ಇದೀಗ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.  

ಬೆಂಗಳೂರು: ಮಹಾನಗರ ಬೆಂಗಳೂರಿನ ಹಿರಿಯ ಬಿಜೆಪಿ ಶಾಸಕರಾದ ಆರ್. ಅಶೋಕ್ ಮತ್ತು ವಿ.ಸೋಮಣ್ಣ ಪರಸ್ಪರ ಏಕವಚನದಲ್ಲಿ ಕಿತ್ತಾಡಿಕೊಂಡಿರುವ ವಿಚಾರ ಇದೀಗ  ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.  

ಮೊಬೈಲ್ ನಲ್ಲಿ ಸಂಭಾಷಣೆ ವೇಳೆ ಪರಸ್ಪರ ಏಕವಚನ ಮತ್ತು ಕೆಟ್ಟ ಪದಗಳನ್ನು ಬಳಸಿ ಜಗಳವಾಡಿಕೊಂಡಿದ್ದಾರೆ. ಆಡಿಯೋ ತುಣುಕು ಕೆಲವರಿಗೆ ಲಭ್ಯವಾಗಿದ್ದು, ಪಕ್ಷದೊಳಗೆ ಈ ಬಗ್ಗೆ ಭಾರಿ ಚರ್ಚೆ ನಡೆಯುತ್ತಿದೆ. 

ತಮ್ಮನ್ನು ಕರೆಯದೇ ದೆಹಲಿಗೆ ಹೋಗಿದ್ದ ಅಶೋಕ್, ಸಂಪುಟಕ್ಕೆ ತಮ್ಮನ್ನು ಸೇರಿಸದಂತೆ ವರಿಷ್ಠರಿಗೆ ದೂರು ನೀಡಿರಬಹುದೆಂದು ಸೋಮಣ್ಣ ಅನುಮಾನ ವ್ಯಕ್ತಪಡಿಸಿದ್ದಾರೆ. ಆಗ ಇಬ್ಬರೂ ಪರಸ್ಪರ ಪಿತೂರಿ, ಸೇಡಿನ ರಾಜಕಾರಣದ ಆರೋಪ ಮಾಡಿದ್ದು, ಕೆಲ ನಿಮಿಷಗಳ ಕಾಲ ಜಗಳವಾಡಿಕೊಂಡಿದ್ದಾರೆ ಎನ್ನಲಾಗಿದೆ.

ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿರುವ ವಿ. ಸೋಮಣ್ಣ, ನಮ್ಮಿಬ್ಬರ ನಡುವೆ ಯಾವುದೇ ಮನಸ್ತಾಪ ಇಲ್ಲ. ಯಾವುದೋ ಕಾಲದಲ್ಲಿ ನಡೆದ ಚರ್ಚೆಯನ್ನೆ ಇದೀಗ ಸಂಪುಟ ವಿಚಾರಕ್ಕೆ ತಳುಕು ಹಾಕಲಾಗುತ್ತಿದೆ. ಅಶೋಕ್ ಮತ್ತು ನನ್ನ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ  ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮೈಸೂರಿನಲ್ಲಿ ರಾಹುಲ್ ಗಾಂಧಿ ಜತೆ ಸಿದ್ದರಾಮಯ್ಯ, ಡಿಕೆಸಿ ಮಹತ್ವದ ಚರ್ಚೆ; ಬಳಿಕ ಸಿಎಂ ಹೇಳಿದ್ದೇನು? Video

'Ground Ops ಗಾಗಿ ಭಾರತೀಯ ಸೇನೆ ಸಂಪೂರ್ಣ ಸಜ್ಜು: ಪಾಕ್ ಗೆ ವಾರ್ನಿಂಗ್ ನೀಡಿದ ಸೇನಾ ಮುಖ್ಯಸ್ಥ ದ್ವಿವೇದಿ!

ಬ್ಲಿಂಕಿಟ್, ಸ್ವಿಗ್ಗಿ, ಜೆಪ್ಟೊಗೆ 10 ನಿಮಿಷಗಳ ಡೆಲಿವರಿ ಸೇವೆ ನಿಲ್ಲಿಸುವಂತೆ ಸರ್ಕಾರ ಸೂಚನೆ; ಯಾಕೆ ಗೊತ್ತಾ?

'ಹಾವು ಕಚ್ಚಿದೆ ಬೇಗ ಚಿಕಿತ್ಸೆ ಕೊಡಿ'; ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂದ ಆಟೋ ಚಾಲಕ, Video

ಜಮ್ಮು-ಕಾಶ್ಮೀರ: ಇದೇ ಮೊದಲು, ಮಸೀದಿಯ ಇಮಾಮ್ ಸೇರಿದಂತೆ ಎಲ್ಲರ ವೈಯಕ್ತಿಕ ಮಾಹಿತಿ ಕಲೆ ಹಾಕುತ್ತಿರುವ ಪೊಲೀಸರು! ಕಾರಣವೇನು ಗೊತ್ತಾ?

SCROLL FOR NEXT