ಬಸವರಾಜ ಬೊಮ್ಮಾಯಿ 
ರಾಜಕೀಯ

ಸಿಎಂ ಬಸವರಾಜ ಬೊಮ್ಮಾಯಿ ಏಕ ಚಕ್ರಾದಿಪತ್ಯ! ಉಪಮುಖ್ಯಮಂತ್ರಿ ನೇಮಕ ಸಂಸ್ಕೃತಿಗೆ ತಿಲಾಂಜಲಿ?

ಬಸವರಾಜ ಬೊಮ್ಮಾಯಿ ಉಪ ಮುಖ್ಯಮಂತ್ರಿಗಳನ್ನು ನೇಮಕ ಮಾಡಿಕೊಳ್ಳುವರೆ ಎಂಬ ಚರ್ಚೆ ಆರಂಭವಾಗಿದೆ. ಹಲವು ನಾಯಕರು ಡಿಸಿಎಂ ಸ್ಥಾನಕ್ಕಾಗಿ ಲಾಭಿ ನಡೆಸುತ್ತಿರುವ ಬೆನ್ನಲ್ಲೇ ಬಿಜೆಪಿ ಹೈಕಮಾಂಡ್ ಯಾವುದೇ ಡಿಸಿಎಂ ನೇಮಕ ಮಾಡುವುದಿಲ್ಲ ಎಂದು ಹೇಳಿದೆ.

ಬೆಂಗಳೂರು: ಬಿಜೆಪಿ ಶಾಸಕಾಂಗ ಪಕ್ಷದ ನಾಯಕನಾಗಿ ಬಸವರಾಜ ಬೊಮ್ಮಾಯಿ ಅವರು ಆಯ್ಕೆಯಾದ  ನಂತರ ಸಿಎಂ ಆಗಿ ಅಧಿಕಾರ ಸ್ವೀಕರಿಸಿದರು. 

ಬಸವರಾಜ ಬೊಮ್ಮಾಯಿ ಉಪ ಮುಖ್ಯಮಂತ್ರಿಗಳನ್ನು ನೇಮಕ ಮಾಡಿಕೊಳ್ಳುವರೆ ಎಂಬ ಚರ್ಚೆ ಆರಂಭವಾಗಿದೆ. ಹಲವು ನಾಯಕರು ಡಿಸಿಎಂ ಸ್ಥಾನಕ್ಕಾಗಿ ಲಾಭಿ ನಡೆಸುತ್ತಿರುವ ಬೆನ್ನಲ್ಲೇ ಬಿಜೆಪಿ ಹೈಕಮಾಂಡ್ ಯಾವುದೇ ಡಿಸಿಎಂ ನೇಮಕ ಮಾಡುವುದಿಲ್ಲ ಎಂದು ಹೇಳಿದೆ,  ಇದರ ಜೊತೆಗೆ ಬೊಮ್ಮಾಯಿ ಅವರು ಕೂಡ ಡಿಸಿಎಂ ಗಳ ನೇಮಕ ಮಾಡುವ ಸಂಸ್ಕೃತಿಗೆ ತಿಲಾಂಜಲಿ ಇಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಬಿಎಸ್ ಯಡಿಯೂರಪ್ಪನವರ ಅವಧಿಯಲ್ಲಿ ಮೂವರು ಉಪಮುಖ್ಯಮಂತ್ರಿಗಳನ್ನು ನೇಮಿಸಲಾಗಿತ್ತು. ಯಡಿಯೂರಪ್ಪ ಅವರಿಗೆ ಪರ್ಯಾಯ ನಾಯಕತ್ವವನ್ನು ಅಭಿವೃದ್ಧಿಪಡಿಸುವುದು ಇದರ ಹಿಂದಿನ ಉದ್ದೇಶವಾಗಿತ್ತು. ಯಡಿಯೂರಪ್ಪ ಅವರು ಹೊರಡುವ ಸಮಯ ಬಂದಾಗ ಡಿಸಿಎಂ ಸ್ಥಾನದಲ್ಲಿ ಇರುವವರು ಸಿಎಂ ಹುದ್ದೆಗೆ ಬರುತ್ತಾರೆ ಎಂಬ ಆಲೋಚನೆ ಇತ್ತು, ಆದರೆ ಅದು ಆಗಲಿಲ್ಲ ಎಲ್ಲಾ ಲೆಕ್ಕಾಚಾರ ತಲೆಕೆಳಗಾಯಿತು.

ಈ ಸಮಯದಲ್ಲಿ, ಅಂತಹ ಪರ್ಯಾಯ ನಾಯಕತ್ವದ ಅಗತ್ಯವಿಲ್ಲ ಎಂದು ಆರ್‌ಎಸ್‌ಎಸ್‌ ಜೊತೆ ನಿಕಟ ಸಂಪರ್ಕ ಹೊಂದಿರುವ ಪಕ್ಷದ ಹಿರಿಯ ನಾಯಕರೊಬ್ಬರು ಸಲಹೆ ನೀಡಿದರು. ಪ್ರಾದೇಶಿಕ, ಜಾತಿ ಮತ್ತು ಸಮುದಾಯದ ಸಮತೋಲನ ಸಾಧಿಸುವ ಉದ್ದೇಶದಿಂದ ಹಲವು ಸಮುದಾಯದ ನಾಯಕರನ್ನು ಡಿಸಿಎಂ ಮಾಡಲಾಗಿತ್ತು.

2019 ರಲ್ಲಿ ಯಡಿಯೂರಪ್ಪ ಸಿಎಂ ಆಗಿ ಅಧಿಕಾರ ವಹಿಸಿಕೊಂಡಾಗ ಯಾವುದೇ ಡಿಸಿಎಮ್‌ಗಳನ್ನು ಹೊಂದುವ ಆಲೋಚನೆಯನ್ನು ವಿರೋಧಿಸಿದರು. ಡಾ ಸಿ ಎನ್ ಅಶ್ವತ್ಥ ನಾರಾಯಣ್ ಒಕ್ಕಲಿಗ ಮತ್ತು ಲಕ್ಷ್ಮಣ ಸವದಿ- ಲಿಂಗಾಯತ ಅವರನ್ನು ಉಪ ಮುಖ್ಯಮಂತ್ರಿಗಳನ್ನಾಗಿ ಪಕ್ಷದ ಹೈಕಮಾಂಡ್ ಆಯ್ಕೆ ಮಾಡಿದರು. ನಂತರ ಸಿಎಂ ಯಡಿಯೂರಪ್ಪ ತಮ್ಮ ಪರಮಾಪ್ತ ಗೋವಿಂದ ಕಾರಜೋಳ ಅವರನ್ನು ಡಿಸಿಎಂ ಮಾಡುವಂತೆ ಬಿಜೆಪಿ ಹೈಕಮಾಂಡ್ ಬಳಿ ಪಟ್ಟು ಹಿಡಿದು ನೇಮಕ ಮಾಡಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT