ಯಡಿಯೂರಪ್ಪ 
ರಾಜಕೀಯ

ಸಿಎಂ ಬಸವರಾಜ ಬೊಮ್ಮಾಯಿ ಸಂಪುಟ ವಿಸ್ತರಣೆ: ಯಡಿಯೂರಪ್ಪ ಬದ್ಧವೈರಿಗಳು ಮೌನವಾಗಿರುವುದೇಕೆ?

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಮಾಡಿದ ನಂತರವೂ ಮಾಜಿ ಸಿಎಂ ಯಡಿಯೂರಪ್ಪ ಅವರ ವಿರೋಧಿ ಬಣದ ನಾಯಕರ ಹೇಳಿಕೆಗಳು ಇನ್ನೂ ನಿಂತಿಲ್ಲ. 

ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಮಾಡಿದ ನಂತರವೂ ಮಾಜಿ ಸಿಎಂ ಯಡಿಯೂರಪ್ಪ ಅವರ ವಿರೋಧಿ ಬಣದ ನಾಯಕರ ಹೇಳಿಕೆಗಳು ಇನ್ನೂ ನಿಂತಿಲ್ಲ. 

ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಯಡಿಯೂರಪ್ಪ ವಿರುದ್ಧ ಕಿಡಿಕಾರುವುದನ್ನು ಇನ್ನೂ ನಿಲ್ಲಿಸಿಲ್ಲ. ಶುಕ್ರವಾರ ಕೂಡ ಮಾಜಿ ಸಿಎಂ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. 

ಆದರೆ ಕೆಲವು ಯಡಿಯೂರಪ್ಪ ವಿರೋಧಿ ಬಣದ ನಾಯಕರು ಕೂಡ ಮೌನವಾಗಿದ್ದಾರೆ. ಮುಂದಿನ ವಾರ ಸಂಪುಟ ವಿಸ್ತರಣೆ ನಡೆಯುವ ಕಾರಣದಿಂದ ಸಂಪುಟದಲ್ಲಿ ಪ್ರವೇಶ ಪಡೆಯುವ ಕಾರಣದಿಂದಾಗಿ ಇವರೆಲ್ಲಾ ಮೌನಕ್ಕೆ ಶರಣಾಗಿದ್ದಾರೆ ಎನ್ನಲಾಗಿದೆ.

ಯಡಿಯೂರಪ್ಪ ಅವರ ಬದ್ಧ ವೈರಿ ಸಿಪಿ ಯೋಗೇಶ್ವರ್ ಕೂಡ ಇತ್ತೀಚೆಗೆ ಯಾವುದೇ ಪ್ರತಿಕ್ರಿಯೆ ನೀಡದೇ ಮೌನವಾಗಿದ್ದಾರೆ. ಶುಕ್ರವಾರ ನವದೆಹಲಿಗೆ ತೆರಳಿದ್ದ ಯೋಗೇಶ್ವರ್ ಬಿಜೆಪಿ ಮುಖಂಡರನ್ನು ಭೇಟಿ ಮಾಡಿ ಸಚಿವ ಸ್ಥಾನ ನೀಡುವಂತೆ ಕೋರಿದ್ದಾರೆ.

ಇನ್ನೂ ಎಚ್.ವಿಶ್ವನಾಥ್, ಅರವಿಂದ್ ಬೆಲ್ಲದ್ ಕೂಡ ಈ ಹಿಂದೆ ಯಡಿಯೂರಪ್ಪ ವಿರುದ್ಧ ಪೋನ್ ಟ್ಯಾಪಿಂಗ್ ನಂತ ಗಂಭೀರ ಆರೋಪ ಮಾಡಿದ್ದರು. ಅವರು ಕೂಡ ಸದ್ಯದ ಪರಿಸ್ಥಿತಿಯಲ್ಲಿ ಮಗುಮ್ಮಾಗಿದ್ದಾರೆ. ಭಿನ್ನಮತೀಯ ನಾಯಕರು ಪರಸ್ಪರ ಸಂಪರ್ಕದಲ್ಲಿದ್ದಾರೆ ಮತ್ತು ಉತ್ತಮವಾಗಿ ಸಂಘಟಿತರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ಒಂದು ವೇಳೆ ಸಚಿವ ಸಂಪುಟ ರಚನೆ ಅವರಿಗೆ ತೃಪ್ತಿ ತರದಿದ್ದರೇ ಬಿಜೆಪಿಯೊಳಗೆ ಭಿನ್ನಮತವು ಮತ್ತೆ ಕಾಣಿಸಿಕೊಳ್ಳಬಹುದು ಎಂದು ಅವರು ಎಚ್ಚರಿಕೆ ರವಾನಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

2030 Commonwealth Games: ಭಾರತದ ಬಿಡ್‌ಗೆ ಕ್ಯಾಬಿನೆಟ್ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

SCROLL FOR NEXT