ಶಿಲ್ಪಾ ನಾಗ್ ಮತ್ತು ರೋಹಿಣಿ ಸಿಂಧೂರಿ 
ರಾಜಕೀಯ

ಆಡಳಿತ ಯಂತ್ರದಲ್ಲಿ ಮಿತಿಮೀರಿರುವ ಅಹಂ, ಪ್ರತಿಷ್ಠೆ; ಅಧಿಕಾರಿಗಳನ್ನು ನಿಯಂತ್ರಿಸಲು ಸರ್ಕಾರ ವಿಫಲ; ಜನರ ಬದುಕು ಮೂರಾಬಟ್ಟೆ!

ಮೈಸೂರಿನ ಇಬ್ಬರು ಉನ್ನತ ಅಧಿಕಾರಿಗಳ ಅಸಹಕಾರ, ವೈಮಸ್ಸು ತಾರಕಕ್ಕೇರುವರೆಗೂ ಉಸ್ತುವಾರಿ ಸಚಿವರು ಕ್ರಮ ಕೈಗೊಳ್ಳದಿರುವುದು ಅವರ ನಿಷ್ಕ್ರಿಯತೆಗೆ ನಿದರ್ಶನವಾಗಿದೆ ಎಂದು ಕರ್ನಾಟಕ ಕಾಂಗ್ರೆಸ್ ಲೇವಡಿ ಮಾಡಿದೆ.

ಬೆಂಗಳೂರು: ಮೈಸೂರಿನ ಇಬ್ಬರು ಉನ್ನತ ಅಧಿಕಾರಿಗಳ ಅಸಹಕಾರ, ವೈಮಸ್ಸು ತಾರಕಕ್ಕೇರುವರೆಗೂ ಉಸ್ತುವಾರಿ ಸಚಿವರು ಕ್ರಮ ಕೈಗೊಳ್ಳದಿರುವುದು ಅವರ ನಿಷ್ಕ್ರಿಯತೆಗೆ ನಿದರ್ಶನವಾಗಿದೆ ಎಂದು ಕರ್ನಾಟಕ ಕಾಂಗ್ರೆಸ್ ಲೇವಡಿ ಮಾಡಿದೆ. 

ಈ ಸಂಬಂಧ ಟ್ವೀಟ್ ಮಾಡಿರುವ ಕಾಂಗ್ರೆಸ್, ಸರ್ಕಾರದಲ್ಲೂ ಕಚ್ಚಾಟ, ಅಧಿಕಾರಿಗಳಲ್ಲೂ ಕಿತ್ತಾಟ, ಜನಸಾಮಾನ್ಯರಿಗೆ ಪರದಾಟ. ಸಂಕಷ್ಟದ ನಡುವೆ ಈ ಪ್ರತಿಷ್ಠೆಯ ಆಟಗಳನ್ನ ಸಹಿಸಲಾಗದು, ಸರ್ಕಾರ ಕೂಡಲೇ ಈ ಬಗ್ಗೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಹೇಳಿದೆ.

ಕರೋನಾ ಪಿಡುಗಿನ ನಡುವೆಯೂ ಆಡಳಿತ ಯಂತ್ರದಲ್ಲಿ ಪ್ರತಿಷ್ಠೆ, ಅಹಂ ಮಿತಿ ಮೀರಿದ ಕಾರಣ ಜನತೆ ಸಂಕಷ್ಟಕ್ಕೀಡಾಗಿದ್ದಾರೆ. ಸರ್ಕಾರದಲ್ಲಿ ಸಾಮರಸ್ಯವಿಲ್ಲ, ಸಚಿವರಲ್ಲಿ ಸಮನ್ವಯತೆ ಇಲ್ಲ, ಅಧಿಕಾರಿಗಳಲ್ಲೂ ಸಮನ್ವಯತೆ ಇಲ್ಲ. ಅಧಿಕಾರಿಗಳನ್ನು ನಿಯಂತ್ರಿಸುವಲ್ಲಿ ಸರ್ಕಾರ ಸಂಪೂರ್ಣ ಸೋತಿರುವ ಪರಿಣಾಮ ಜನರ ಬದುಕು ಮೂರಾಬಟ್ಟೆಯಾಗಿದೆ ಎಂದು ಟೀಕಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್ ಜೊತೆ ರಷ್ಯಾ ಗೌಪ್ಯ ಮಾಹಿತಿ ಹಂಚಿಕೆ: ವಿಶ್ವದಲ್ಲೇ ಅತ್ಯುತ್ತಮ ಗುಪ್ತಚರ ವ್ಯವಸ್ಥೆ ನಮ್ಮದು, ಭಯವಿಲ್ಲ ಎಂದ ಅಮೆರಿಕಾ

LPG Price Hike: ದೇಶದ ನಾಗರಿಕರಿಗೆ ತಟ್ಟಿದ ಬಿಸಿ, ಇರಾನ್ ಯುದ್ಧ ಮಧ್ಯೆ ಎಲ್ ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

ಬಿಹಾರದ ನೂತನ ಸಾರಥಿ ಯಾರು: ದಲಿತ ನಾಯಕನಿಗೆ ಸಿಎಂ ಪಟ್ಟವೋ? ಅಮಿತ್ ಶಾ ಭಂಟನಿಗೆ ಸಿಂಹಾಸನವೋ!

Karnataka Budget 2026-ಬೆಂಗಳೂರು ನಂತರ ರಾಜ್ಯದ ಎರಡನೇ ಐಟಿ ನಗರವಾಗಿ ಮೈಸೂರು ಅಭಿವೃದ್ಧಿ: ಸಿಎಂ ಸಿದ್ದರಾಮಯ್ಯ

ನ್ಯೂಯಾರ್ಕ್ ನಲ್ಲೇ ನಿಮ್ಮ ಬುಡ ಗಟ್ಟಿ ಇಲ್ಲ; ಇನ್ನು ನಮ್ಮ ದೇಶದ ಅಧಿಕಾರ ಬದಲಾಯಿಸ್ತೀರಾ?: ಟ್ರಂಪ್ ಬಗ್ಗೆ ಇರಾನ್ ಅಪಹಾಸ್ಯ!

SCROLL FOR NEXT