ಶಿಲ್ಪಾ ನಾಗ್ ಮತ್ತು ರೋಹಿಣಿ ಸಿಂಧೂರಿ 
ರಾಜಕೀಯ

ಆಡಳಿತ ಯಂತ್ರದಲ್ಲಿ ಮಿತಿಮೀರಿರುವ ಅಹಂ, ಪ್ರತಿಷ್ಠೆ; ಅಧಿಕಾರಿಗಳನ್ನು ನಿಯಂತ್ರಿಸಲು ಸರ್ಕಾರ ವಿಫಲ; ಜನರ ಬದುಕು ಮೂರಾಬಟ್ಟೆ!

ಮೈಸೂರಿನ ಇಬ್ಬರು ಉನ್ನತ ಅಧಿಕಾರಿಗಳ ಅಸಹಕಾರ, ವೈಮಸ್ಸು ತಾರಕಕ್ಕೇರುವರೆಗೂ ಉಸ್ತುವಾರಿ ಸಚಿವರು ಕ್ರಮ ಕೈಗೊಳ್ಳದಿರುವುದು ಅವರ ನಿಷ್ಕ್ರಿಯತೆಗೆ ನಿದರ್ಶನವಾಗಿದೆ ಎಂದು ಕರ್ನಾಟಕ ಕಾಂಗ್ರೆಸ್ ಲೇವಡಿ ಮಾಡಿದೆ.

ಬೆಂಗಳೂರು: ಮೈಸೂರಿನ ಇಬ್ಬರು ಉನ್ನತ ಅಧಿಕಾರಿಗಳ ಅಸಹಕಾರ, ವೈಮಸ್ಸು ತಾರಕಕ್ಕೇರುವರೆಗೂ ಉಸ್ತುವಾರಿ ಸಚಿವರು ಕ್ರಮ ಕೈಗೊಳ್ಳದಿರುವುದು ಅವರ ನಿಷ್ಕ್ರಿಯತೆಗೆ ನಿದರ್ಶನವಾಗಿದೆ ಎಂದು ಕರ್ನಾಟಕ ಕಾಂಗ್ರೆಸ್ ಲೇವಡಿ ಮಾಡಿದೆ. 

ಈ ಸಂಬಂಧ ಟ್ವೀಟ್ ಮಾಡಿರುವ ಕಾಂಗ್ರೆಸ್, ಸರ್ಕಾರದಲ್ಲೂ ಕಚ್ಚಾಟ, ಅಧಿಕಾರಿಗಳಲ್ಲೂ ಕಿತ್ತಾಟ, ಜನಸಾಮಾನ್ಯರಿಗೆ ಪರದಾಟ. ಸಂಕಷ್ಟದ ನಡುವೆ ಈ ಪ್ರತಿಷ್ಠೆಯ ಆಟಗಳನ್ನ ಸಹಿಸಲಾಗದು, ಸರ್ಕಾರ ಕೂಡಲೇ ಈ ಬಗ್ಗೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಹೇಳಿದೆ.

ಕರೋನಾ ಪಿಡುಗಿನ ನಡುವೆಯೂ ಆಡಳಿತ ಯಂತ್ರದಲ್ಲಿ ಪ್ರತಿಷ್ಠೆ, ಅಹಂ ಮಿತಿ ಮೀರಿದ ಕಾರಣ ಜನತೆ ಸಂಕಷ್ಟಕ್ಕೀಡಾಗಿದ್ದಾರೆ. ಸರ್ಕಾರದಲ್ಲಿ ಸಾಮರಸ್ಯವಿಲ್ಲ, ಸಚಿವರಲ್ಲಿ ಸಮನ್ವಯತೆ ಇಲ್ಲ, ಅಧಿಕಾರಿಗಳಲ್ಲೂ ಸಮನ್ವಯತೆ ಇಲ್ಲ. ಅಧಿಕಾರಿಗಳನ್ನು ನಿಯಂತ್ರಿಸುವಲ್ಲಿ ಸರ್ಕಾರ ಸಂಪೂರ್ಣ ಸೋತಿರುವ ಪರಿಣಾಮ ಜನರ ಬದುಕು ಮೂರಾಬಟ್ಟೆಯಾಗಿದೆ ಎಂದು ಟೀಕಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

ಸಂಭಾಲ್ ದೇವಸ್ಥಾನದಿಂದ ಸಾಯಿಬಾಬಾ ವಿಗ್ರಹಕ್ಕೆ ಗೇಟ್ ಪಾಸ್! ಗಂಗಾ ನದಿಯಲ್ಲಿ ವಿಸರ್ಜನೆ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

SCROLL FOR NEXT