ಸಿಎಂ ಯಡಿಯೂರಪ್ಪ 
ರಾಜಕೀಯ

ಹೈಕಮಾಂಡ್ ಬಯಸಿದರೆ ತಕ್ಷಣ ರಾಜೀನಾಮೆ ನೀಡಲು ನಾನು ಸಿದ್ಧ: ಮುಖ್ಯಮಂತ್ರಿ ಯಡಿಯೂರಪ್ಪ ಸ್ಫೋಟಕ ಹೇಳಿಕೆ 

ಹೈಕಮಾಂಡ್ ಸೂಚಿಸಿದರೆ ರಾಜೀನಾಮೆ ನೀಡಲು ನಾನು ಸದಾ ಸಿದ್ದ ಎಂದು ಹೇಳುವ ಮೂಲಕ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ರಾಜ್ಯ ರಾಜಕೀಯದಲ್ಲಿ ತೀವ್ರ ಸಂಚಲನ ಮೂಡಿಸಿದ್ದಾರೆ.

ಬೆಂಗಳೂರು: ಹೈಕಮಾಂಡ್ ಸೂಚಿಸಿದರೆ ರಾಜೀನಾಮೆ ನೀಡಲು ನಾನು ಸದಾ ಸಿದ್ದ ಎಂದು ಹೇಳುವ ಮೂಲಕ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ರಾಜ್ಯ ರಾಜಕೀಯದಲ್ಲಿ ತೀವ್ರ ಸಂಚಲನ ಮೂಡಿಸಿದ್ದಾರೆ.

ಬಿಜೆಪಿ ಹೈಕಮಾಂಡ್ ಗೆ ನನ್ನ ಮೇಲೆ ಎಲ್ಲಿಯವರೆಗೆ ವಿಶ್ವಾಸವಿರುತ್ತೋ ಅಲ್ಲಿಯವರೆಗೆ ಮುಖ್ಯಮಂತ್ರಿ ಪದವಿಯಲ್ಲಿ ಮುಂದುವರಿಯುತ್ತೇನೆ, ನನ್ನ ಶಕ್ತಿಮೀರಿ ಕೆಲಸ ಮಾಡುತ್ತೇನೆ, ಮುಂದೆಯೂ ರಾಜ್ಯದ ಜನತೆಯ ಮತ್ತು ಪಕ್ಷದ ಒಳಿತಿಗಾಗಿ ಕೆಲಸ ಮಾಡುತ್ತೇನೆ, ಈ ವಿಷಯದಲ್ಲಿ ನನಗೆ ಯಾವುದೇ ಗೊಂದಲವಿಲ್ಲ ಎಂಬ ಸ್ಫೋಟಕ ಹೇಳಿಕೆಯನ್ನು ಇಂದು ವಿಧಾನಸೌಧದಲ್ಲಿ ನೀಡಿದ್ದಾರೆ.

ಯಾವ ದಿನ ಯಡಿಯೂರಪ್ಪನವರೇ ನೀವು ಬೇಡ ಎಂದು ವರಿಷ್ಠರು ಹೇಳುತ್ತಾರೋ ಆಗ ಮುಖ್ಯಮಂತ್ರಿ ಪದವಿಯಿಂದ ಕೆಳಗಿಳಿಯುತ್ತೇನೆ, ರಾಜೀನಾಮೆ ನೀಡಿ ಜನತೆ ಪರ ಕೆಲಸ ಮಾಡುತ್ತೇನೆ ಎಂದರು.

ಪರ್ಯಾಯ ನಾಯಕರಿಲ್ಲ ಎಂಬ ಭಾವನೆಯಿಲ್ಲ: ನನ್ನ ಬದಲಿಗೆ ಪರ್ಯಾಯ ನಾಯಕತ್ವ ಇಲ್ಲ ಎಂಬ ಮಾತನ್ನು ನಾನು ಒಪ್ಪುವುದಿಲ್ಲ. ದೇಶ, ರಾಜ್ಯದಲ್ಲಿ ಪರ್ಯಾಯ ನಾಯಕರು ಇರುತ್ತಾರೆ, ನಾನು ಯಾರ ಬಗ್ಗೆಯೂ ಟೀಕೆ ಮಾಡುವುದಿಲ್ಲ, ಹೈಕಮಾಂಡ್ ಸೂಚನೆ ನೀಡಿದರೆ ಯಾವುದೇ ಗೊಂದಲವಿಲ್ಲದೆ ರಾಜೀನಾಮೆ ಕೊಟ್ಟು ರಾಜ್ಯದ ಅಭಿವೃದ್ಧಿಗೆ ಕೆಲಸ ಮಾಡುತ್ತೇನೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ತೆರಿಗೆ ನೀತಿ ಚರ್ಚೆಗಳು ವಲಯ ಹಿತಾಸಕ್ತಿ ಮೀರಬೇಕು: ಒಟ್ಟಾರೆ ಆರ್ಥಿಕತೆಯ ಅಗತ್ಯತೆಗಳ ಮೇಲೆ ಗಮನ ಹರಿಸಬೇಕು- ನಿರ್ಮಲಾ ಸೀತಾರಾಮನ್

ಸಚಿನ್ ತೆಂಡುಲ್ಕರ್‌ರ ದೀರ್ಘಕಾಲೀನ ODI ದಾಖಲೆ ಮುರಿದ ಬ್ರೆಂಡನ್ ಟೇಲರ್; ಆದ್ರೆ ಒಂದು ಟ್ವಿಸ್ಟ್ ಇದೆ!

ಉಮರ್ ಖಾಲಿದ್ ನ್ಯಾಷನಲಿಸ್ಟ್ ಹೇಳಿಕೆ: KPCC ಅಧ್ಯಕ್ಷ ಬಿಕೆ ಹರಿಪ್ರಸಾದ್ ವಿರುದ್ಧ ದೂರು

ಇದೇ ಮೊದಲ ಬಾರಿಗೆ ಮೆಕ್ಕಾ ಬಳಿ ಮೊಳಗಿದ ಸೈರನ್: ಹೌತಿ ಡ್ರೋನ್ ಹೊಡೆದುರುಳಿಸಿದ ಸೌದಿ ಅರೇಬಿಯಾ!

ಸಕಲೇಶಪುರದ ಲಾಡ್ಜ್‌ ನಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಯುವತಿ ಸಾವು!