ಆರ್ ಅಶೋಕ್ 
ರಾಜಕೀಯ

ಪದೇ ಪದೇ ನಾಯಕತ್ವ ಬದಲಾವಣೆ ಮಾತುಗಳಿಂದ ಮುಖ್ಯಮಂತ್ರಿಗಳ ಮನಸ್ಸಿಗೆ ನೋವಾದಂತೆ ಕಂಡುಬರುತ್ತಿದೆ: ಆರ್ ಅಶೋಕ್ 

ರಾಜ್ಯದಲ್ಲಿ ಕೆಲವು ದಿನಗಳಿಂದ ನಡೆಯುತ್ತಿರುವ ರಾಜಕೀಯ ವಿದ್ಯಮಾನಗಳನ್ನು ನೋಡಿದಾಗ, ಪದೇ ಪದೇ ಸಿಎಂ ನಾಯಕತ್ವ ಬದಲಾವಣೆ ಬಗ್ಗೆ ಕೊರೋನಾ ಕಷ್ಟದ ಸಮಯದಲ್ಲಿ ಕೇಳಿಬರುತ್ತಿರುವಾಗ ಮುಖ್ಯಮಂತ್ರಿಗಳ ಮನ್ಸಸಿಗೆ ಸ್ವಲ್ಪ ನೋವಾದಂತೆ ಕಂಡುಬರುತ್ತಿದೆ ಎಂದು ಕಂದಾಯ ಸಚಿವ ಆರ್ ಅಶೋಕ್ ಹೇಳಿದ್ದಾರೆ.

ಬೆಂಗಳೂರು: ರಾಜ್ಯದಲ್ಲಿ ಕೆಲವು ದಿನಗಳಿಂದ ನಡೆಯುತ್ತಿರುವ ರಾಜಕೀಯ ವಿದ್ಯಮಾನಗಳನ್ನು ನೋಡಿದಾಗ, ಪದೇ ಪದೇ ಸಿಎಂ ನಾಯಕತ್ವ ಬದಲಾವಣೆ ಬಗ್ಗೆ ಕೊರೋನಾ ಕಷ್ಟದ ಸಮಯದಲ್ಲಿ ಕೇಳಿಬರುತ್ತಿರುವಾಗ ಮುಖ್ಯಮಂತ್ರಿಗಳ ಮನ್ಸಸಿಗೆ ಸ್ವಲ್ಪ ನೋವಾದಂತೆ ಕಂಡುಬರುತ್ತಿದೆ ಎಂದು ಕಂದಾಯ ಸಚಿವ ಆರ್ ಅಶೋಕ್ ಹೇಳಿದ್ದಾರೆ.

ಬೆಂಗಳೂರಿನಲ್ಲಿಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ಕೊರೋನಾ ಸಂಕಷ್ಟ ಕಾಲದಲ್ಲಿ ಮುಖ್ಯಮಂತ್ರಿಗಳು ಸಾಕಷ್ಟು ಕಷ್ಟಪಟ್ಟು ಹಗಲು-ರಾತ್ರಿ ಕೆಲಸ ಮಾಡುತ್ತಿದ್ದಾರೆ. ಹೀಗಿರುವಾಗ ಪದೇ ಪದೇ ನಾಯಕತ್ವ ಬದಲಾವಣೆ ಮಾತು, ಪ್ರಶ್ನೆ ಕೇಳಿಬರುತ್ತಿರುವುದು ಅವರ ಮನಸ್ಸಿಗೆ ನೋವಾದಂತೆ ಕಂಡುಬರುತ್ತಿದೆ. ಹೀಗಾಗಿ ಅವರು ಈ ಮಾತುಗಳನ್ನು ಹೇಳಿರಬಹುದು, ಆದರೆ ಕೇಂದ್ರದ ಸಚಿವರಾದ ಪ್ರಹ್ಲಾದ್ ಜೋಶಿಯವರು, ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮತ್ತು ಸಿ.ಟಿ.ರವಿಯವರು ಇನ್ನೂ ಹಲವಾರು ನಾಯಕರು ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ.

ಇಂತಹ ಸಂದರ್ಭದಲ್ಲಿ ಆಗಾಗ ಎತ್ತುತ್ತಿರುವ ಪ್ರಶ್ನೆಗಳಿಗೆ ಅಂತ್ಯ ಹಾಡಬೇಕೆಂದು ಯಡಿಯೂರಪ್ಪನವರು ಈ ಹೇಳಿಕೆ ನೀಡಿರಬಹುದು. ನಾವು, ಬಸವರಾಜ್ ಬೊಮ್ಮಾಯಿಯವರು ಇನ್ನೂ ಹಲವು ಸಚಿವರು ಮುಖ್ಯಮಂತ್ರಿಗಳ ಜೊತೆಗೆ ಇದ್ದೇವೆ. ಕೊರೋನಾದ ಈ ಕಷ್ಟದ ಸಂದರ್ಭದಲ್ಲಿ ಇಂತಹ ಹೇಳಿಕೆಗಳಿಂದ ರಾಜ್ಯದ ಜನತೆಗೆ ಸಮಸ್ಯೆಯಾಗುತ್ತದೆ, ಅದು ಬೇಡ ನಮ್ಮ ಗಮನ, ಕೆಲಸವೇನಿದ್ದರೂ ಕೊರೋನಾ ಓಡಿಸುವುದೇ ಆಗಿರುತ್ತದೆ ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ; Indian Army ಹೆಲಿಕಾಪ್ಟರ್ ರೋಚಕ ಕಾರ್ಯಾಚರಣೆ! Video

ಡಿ ಕೆ ಶಿವಕುಮಾರ್ ಹಿಂದೂ ಜನರ ಭಾವನೆಗಳಿಗೆ ನೋವುಂಟುಮಾಡಿದ್ದು ಕ್ಷಮೆಯಾಚಿಸಬೇಕು: ಶೋಭಾ ಕರಂದ್ಲಾಜೆ

Tamil Nadu: ನಟ-ರಾಜಕಾರಣಿ ದಳಪತಿ ವಿಜಯ್ ಬೌನ್ಸರ್ ಗಳಿಂದ ವ್ಯಕ್ತಿಯ ಮೇಲೆ ಹಲ್ಲೆ ಆರೋಪ! ಕೇಸ್ ದಾಖಲು, ವಿಡಿಯೋದಲ್ಲಿ ಏನಿದೆ?

SCROLL FOR NEXT