ಡಿಸಿಎಂ ಅಶ್ವಥ ನಾರಾಯಣ 
ರಾಜಕೀಯ

ಮುಖ್ಯಮಂತ್ರಿ ಸ್ಥಾನದಿಂದ ಯಡಿಯೂರಪ್ಪನವರು ಕೆಳಗಿಳಿಯುವ ಪ್ರಶ್ನೆಯೇ ಇಲ್ಲ: ಡಿಸಿಎಂ ಅಶ್ವಥ ನಾರಾಯಣ

ರಾಜ್ಯ ರಾಜಕೀಯದಲ್ಲಿ ಸಿಎಂ ಯಡಿಯೂರಪ್ಪನವರ ಹೇಳಿಕೆ ತೀವ್ರ ಸಂಚಲನ ಮೂಡಿಸಿದೆ. ಸರ್ಕಾರದ ಸಚಿವರುಗಳು ಒಬ್ಬೊಬ್ಬರೇ ಹೇಳಿಕೆ ನೀಡುತ್ತಿದ್ದಾರೆ.

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಸಿಎಂ ಯಡಿಯೂರಪ್ಪನವರ ಹೇಳಿಕೆ ತೀವ್ರ ಸಂಚಲನ ಮೂಡಿಸಿದೆ. ಸರ್ಕಾರದ ಸಚಿವರುಗಳು ಒಬ್ಬೊಬ್ಬರೇ ಹೇಳಿಕೆ ನೀಡುತ್ತಿದ್ದಾರೆ.

ಮಾಧ್ಯಮಗಳು ಕೇಳಿದ ಪ್ರತಿಕ್ರಿಯೆಗೆ ಉತ್ತರಿಸಿದ ಡಿಸಿಎಂ ಅಶ್ವಥ ನಾರಾಯಣ, ಯಡಿಯೂರಪ್ಪನವರ ಬದಲಾವಣೆಯ ಪ್ರಶ್ನೆಯೇ ಇಲ್ಲ, ಅಂತಹ ಯಾವುದೇ ಮಾತುಕತೆ, ಚರ್ಚೆ ಪಕ್ಷದಲ್ಲಿ ನಡೆಯುತ್ತಿಲ್ಲ, ಪಕ್ಷದ ನಿಷ್ಠಾವಂತ ಸೈನಿಕನಾಗಿ ಹೈಕಮಾಂಡ್ ತೆಗೆದುಕೊಂಡಿರುವ ಯಾವುದೇ ನಿರ್ಧಾರಗಳಿಗೆ ಬದ್ಧನಾಗಿರಲು ಸಿದ್ಧ ಎಂದು ಹೇಳಿದ್ದಾರಷ್ಟೆ. ಅವರ ಹೇಳಿಕೆಗೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.

ಯಡಿಯೂರಪ್ಪ ಯಾವ ಸಂದರ್ಭದಲ್ಲಿ ಏನು ಹೇಳಿದ್ದರೋ ಗೊತ್ತಿಲ್ಲ. ಆದರೆ ಅವರೇ ನಮ್ಮ ನಾಯಕರು. ಅವರೇ ನಮ್ಮ ಸಿಎಂ ಎಂದರು. ಯಡಿಯೂರಪ್ಪ ತಾವು ಕುರ್ಚಿಗೆ ಅಂಟಿಕೊಂಡಿಲ್ಲ.ಶಿಸ್ತಿನ ಸಿಪಾಯಿ ಎಂದು ಹೇಳುವ ಮೂಲಕ ಪ್ರತಿಪಕ್ಷ ಮತ್ತು ಕೆಲವರಿಗೆ ಸಂದೇಶ ರವಾನೆ ಮಾಡಿದ್ದಾರೆ. ಅವರೇ ನಮ್ಮ ಸಿಎಂ, ಅವರೇ ಮುಂದುವರೆಯುತ್ತಾರೆ. ಅವರೇ ನಮ್ಮ ನಾಯಕರು. ಯಾವುದೇ ಗೊಂದಲ ಬೇಡ. ನಮ್ಮ ಪಕ್ಷ ಕೇಡರ್ ಬೇಸ್ಡ್ ಪಾರ್ಟಿ. ನಾವು ಅಧಿಕಾರಕ್ಕಾಗಿ ಅಂಟಿಕೊಂಡಿಲ್ಲ. ಪಕ್ಷವೇ ಮುಖ್ಯ ಎನ್ನುವುದನ್ನು ಯಡಿಯೂರಪ್ಪ ಹೇಳಿದ್ದಾರೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

'China isn't afraid': ಅಮೆರಿಕದ ಶೇ.100 ರಷ್ಟು ಸುಂಕದ ಬಗ್ಗೆ ಚೀನಿಯರ ಪ್ರತಿಕ್ರಿಯೆ!

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

SCROLL FOR NEXT