ಯಡಿಯೂರಪ್ಪ 
ರಾಜಕೀಯ

'ಹಾದಿ-ಬೀದಿಯಲ್ಲಿ ನಿಂತು ಒಬ್ಬೊಬ್ಬ ನಾಯಕ ಒಂದೊಂದು ಹೇಳಿಕೆ: ನೊಂದ ಸಿಎಂ ರಾಜಿನಾಮೆ ಮಾತು'

ಸಿಎಂ ಯಡಿಯೂರಪ್ಪ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಪ್ರಶ್ನೆಯೇ ಉದ್ಭವಿಸುವದಿಲ್ಲ ಎಂದು ಡಿಸಿಎಂ ಲಕ್ಷ್ಮಣ ಸವದಿ ಬಿಎಸ್‍ವೈ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕುರಿತಾಗಿ ಸ್ಪಷ್ಟನೆ ನೀಡಿದ್ದಾರೆ. 

ಬೆಳಗಾವಿ: ಸಿಎಂ ಯಡಿಯೂರಪ್ಪ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಪ್ರಶ್ನೆಯೇ ಉದ್ಭವಿಸುವದಿಲ್ಲ ಎಂದು ಡಿಸಿಎಂ ಲಕ್ಷ್ಮಣ ಸವದಿ ಬಿಎಸ್‍ವೈ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕುರಿತಾಗಿ ಸ್ಪಷ್ಟನೆ ನೀಡಿದ್ದಾರೆ. 

ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಅವರು, ಸಿಎಂ ಯಡಿಯೂರಪ್ಪ ಅವರ ಮನಸ್ಸಿಗೆ ಆದ ಬೇಸರದಿಂದ ಹಾಗೆ ಹೇಳಿದ್ದಾರೆ. ಅನೇಕರು ಬೇರೆ ಬೇರೆ ತರಹ ಮಾತನಾಡಿದ್ದರಿಂದ ಈ ರೀತಿ ಹೇಳಿರಬಹುದು ಎಂದಿದ್ದಾರೆ.

ನಾಯಕತ್ವ ಬದಲಾವಣೆ ವಿಷಯದಲ್ಲಿ ಹಾದಿ- ಬೀದಿಯಲ್ಲಿ ಮಾತನಾಡುವವರಿಂದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ನೊಂದಿದ್ದಾರೆ. ಆದ್ದರಿಂದಲೇ, ಹೈಕಮಾಂಡ್ ಹೇಳಿದರೆ ರಾಜೀನಾಮೆ ಕೊಡುತ್ತೇನೆ ಎಂಬ ಮಾತುಗಳನ್ನು ಆಡಿದ್ದಾರೆ' ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ಹೇಳಿದರು. 

ಪ್ರತಿ ದಿನ ಒಬ್ಬೊಬ್ಬರು ಒಂದೊಂದು ಹೇಳಿಕೆ ನೀಡಿದರೆ ಆಡಳಿತ ಯಂತ್ರದ ಮೇಲೆ ಪರಿಣಾಮ ಬಿರುತ್ತದೆ. ಅಲ್ಲದೇ ಅದು ಮಕ್ಕಳ ಆಟವಾಗುತ್ತದೆ. ಹಾದಿ ಬೀದಿಯಲ್ಲಿ ಮಾತನಾಡುವುದು ಸರಿಯಲ್ಲ' ಎಂದರು.

'ಯಡಿಯೂರಪ್ಪ ಅವರೇ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತಾರೆ. ಮುಂದಿನ ಚುನಾವಣೆ ಅವರ ನೇತೃತ್ವದಲ್ಲಿ ನಡೆಯುತ್ತದೆ. ಯಾರೋ ದೆಹಲಿಗೆ ಹೋಗಿ ಬಂದರೆ ಮುಖ್ಯಮಂತ್ರಿ ಬದಲಾವಣೆಗೆ ಹೋಗಿದ್ದಾರೆ ಎನ್ನಲಾಗುವುದಿಲ್ಲ. ಮುಖ್ಯಮಂತ್ರಿ ಬದಲಾವಣೆ ಅಷ್ಟು ಸುಲಭದ ಕೆಲಸವಲ್ಲ' ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

Indian Stock Market: ಸತತ ಕುಸಿತ, ಬರೊಬ್ಬರಿ ಶೇ.1ರಷ್ಟು ಕುಸಿದ Sensex, Nifty 50, ರೂಪಾಯಿ ಮೌಲ್ಯ ಇಳಿಕೆ!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

Indian Navy ಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ! Video

SCROLL FOR NEXT