ಸಿದ್ದರಾಮಯ್ಯ 
ರಾಜಕೀಯ

ಸಿದ್ದರಾಮಯ್ಯ ಗಾರು, ಈ ವರದಿಗಳನ್ನು ವಸಿ ಓದುವಿರಾ? ಶಿಷ್ಯನಿಗೆ ಬುದ್ಧಿ ಹೇಳುವುದು ಬಿಟ್ಟು ಶಿಖಾರನ್ನೇ ಎತ್ತಂಗಡಿ ಮಾಡಿದ್ದು ಮರೆತುಹೋಯಿತೇ?

ಐಎಎಸ್ ಅಧಿಕಾರಿಗಳ ಕಿತ್ತಾಟಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಹಾಗೂ ಸಂಸದ ಪ್ರತಾಪ್‌ ಸಿಂಹ ಟ್ವಿಟರ್‌ನಲ್ಲಿ ಪರಸ್ಪರ ವಾಗ್ದಾಳಿ ನಡೆಸಿದ್ದಾರೆ. 

ಬೆಂಗಳೂರು: ಐಎಎಸ್ ಅಧಿಕಾರಿಗಳ ಕಿತ್ತಾಟಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಹಾಗೂ ಸಂಸದ ಪ್ರತಾಪ್‌ ಸಿಂಹ ಟ್ವಿಟರ್‌ನಲ್ಲಿ ಪರಸ್ಪರ ವಾಗ್ದಾಳಿ ನಡೆಸಿದ್ದಾರೆ. 

ಮೈಸೂರು ಜಿಲ್ಲೆಯ ಐಎಎಸ್ ಅಧಿಕಾರಿಗಳ ನಡುವಿನ ಕಿತ್ತಾಟಕ್ಕೆ ಬಿಜೆಪಿಯ ಚುನಾಯಿತ ಪ್ರತಿನಿಧಿಗಳು ಹಾಗೂ ಜೆಡಿಎಸ್‌ನ ಸಾ.ರಾ ಮಹೇಶ್ ಕಾರಣ. ಸಂಸದ ಪ್ರತಾಪ್‌ ಸಿಂಹ ಅವರು ಮೊದಲು ರೋಹಿಣಿ ಸಿಂಧೂರಿ ಅವರನ್ನು ಬೆಂಬಲಿಸಿದ್ದರು. ಈಗ ಶಿಲ್ಪಾನಾಗ್ ಪರವಾಗಿ ನಿಂತಿದ್ದಾರೆ. ಒಟ್ಟಿನಲ್ಲಿ ಇಬ್ಬರನ್ನೂ ಎತ್ತಿಕಟ್ಟಿ ಜಗಳ ತಂದಿಟ್ಟಿದ್ದಾರೆ’ ಎಂದು ಸಿದ್ದರಾಮಯ್ಯ ಟ್ವಿಟ್ಟರ್ ನಲ್ಲಿ ಆರೋಪಿಸಿದ್ದರು.

ಇದಕ್ಕೆ ತಿರುಗೇಟು ಕೊಟ್ಟಿದ್ದ ಪ್ರತಾಪ್‌ ಸಿಂಹ, ‘ಸಿದ್ದರಾಮಯ್ಯ ಗಾರು, ಈ ವರದಿಗಳನ್ನು ವಸಿ ಓದುವಿರಾ?! ಅಂದಹಾಗೆ, ನೀವು ಮುಖ್ಯಮಂತ್ರಿಯಾಗಿದ್ದಾಗ ನಿಮ್ಮ ಶಿಷ್ಯ ಮರಿಗೌಡ ಡಿಸಿ ಶಿಖಾರನ್ನು ಅವಾಚ್ಯ ಪದಗಳಿಂದ ಸಾರ್ವಜನಿಕವಾಗಿ ನಿಂದಿಸಿದಾಗ ಶಿಷ್ಯನಿಗೆ ಬುದ್ಧಿ ಹೇಳುವುದು ಬಿಟ್ಟು ಶಿಖಾರನ್ನೇ ನೀವು ಎತ್ತಂಗಡಿ ಮಾಡಿದ್ದು ಮರೆತುಹೋಯಿತೇ?' ಎಂದು ವಾಗ್ದಾಳಿ ನಡೆಸಿದ್ದಾರೆ.

ಪ್ರತಾಪ್‌ ಸಿಂಹ ಆರೋಪ ಕುರಿತು ಪ್ರತಿಕ್ರಿಯಿಸಿರುವ ಡಾ.ಯತೀಂದ್ರ ಸಿದ್ದರಾಮಯ್ಯ, ‘ಶಿಖಾ ಅವರು ಡಿಸಿಯಾಗಿ ಮೂರು ವರ್ಷಗಳ ಅವಧಿ ಪೂರೈಸಿ ನಂತರ ವರ್ಗಾವಣೆಗೊಂಡಿದ್ದರು. ಈಗಿನ ಹಾಗೆ 8 ತಿಂಗಳಿಗೇ ಎತ್ತಂಗಡಿಯಾಗಿರಲಿಲ್ಲ. ಕೊರೊನಾ ಸಂಕಷ್ಟದಲ್ಲೂ ನೀವು ಹಾಗೂ ಡಿಸಿ ಮಾಧ್ಯಮಗಳಲ್ಲಿ ಬಡಿದಾಡಿಕೊಂಡಿದ್ದು ಹಾಗೂ ಉನ್ನತ ಅಧಿಕಾರಿಗಳು ಬೀದಿರಂಪ ಮಾಡಿಕೊಂಡಿದ್ದು ಆಡಳಿತಯಂತ್ರದ ಮೇಲಿನ ನಿಮ್ಮ ಹಿಡಿತ ತಪ್ಪಿದ್ದನ್ನು ತೋರುತ್ತದೆ’ ಎಂದು ಕಿಡಿಕಾರಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪ್ರತಿಪಕ್ಷಗಳು ಸಂಪುಟದಿಂದ ವಜಾಕ್ಕೆ ಆಗ್ರಹಿಸುತ್ತಿರುವ ಮಧ್ಯೆ ಸಚಿವ ಬಿ. ನಾಗೇಂದ್ರಗೆ ಹೈಕೋರ್ಟ್ ಬಿಗ್ ರಿಲೀಫ್!

ಶಿವಗಂಗೆ ಬೆಟ್ಟಕ್ಕೆ ಟ್ರೆಕ್ಕಿಂಗ್‌ ಹೋಗಿದ್ದ ಟೆಕ್ಕಿ ನಾಪತ್ತೆ: ಲ್ಯಾಪ್‌ಟಾಪ್‌ನಲ್ಲಿ ಶಾಂತಲಾ ಡ್ರಾಪ್‌ ಪಾಯಿಂಟ್‌ ಸರ್ಚ್‌; ತನಿಖೆಯಲ್ಲಿ ಸ್ಫೋಟಕ ಮಾಹಿತಿ ಬಹಿರಂಗ!

ರಾಂಚಿ ಪರೀಕ್ಷೆ ವಿವಾದ: ಬ್ಯಾರಿಕೇಡ್ ಮುರಿದು ವಿಧಾನಸೌಧದತ್ತ ನುಗ್ಗಿದ ವಿದ್ಯಾರ್ಥಿಗಳು! ಜಲಫಿರಂಗಿ ಬಳಸಿದ ಪೊಲೀಸರು, Video

'ಬಸವಣ್ಣನನ್ನೇ ಬಿಡಲಿಲ್ಲ.. ನಾನ್ಯಾರು..'; ‘ಅವರಿಗೆ ಸಚಿವ ಸ್ಥಾನ ಸಿಗದಿರಲು ನಾನು ಕಾರಣ ಅಲ್ಲ’ ಎಂದ ಎಂಬಿ ಪಾಟೀಲ್ ಸ್ಪಷ್ಟನೆ, Video

'JDS ಪಾದಯಾತ್ರೆಯ ಬಂಡವಾಳ ಬಯಲು ಮಾಡಿದ ವಿಜಯೇಂದ್ರ': ಕಾಂಗ್ರೆಸ್​​ನಿಂದ ವಿಡಿಯೋ ಬಿಡುಗಡೆ!